
ಕಲಬುರಗಿ(ಜು.02): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಮೂರು ಜನ ಉಪಮುಖ್ಯಮಂತ್ರಿ ಹುದ್ದೆ ಹುಟ್ಟು ಹಾಕಬೇಕೆಂಬ ಚರ್ಚೆ ವಿಚಾರವೇ ಅನಾವಶ್ಯಕ. ಚಂದ್ರಶೇಖರ ಸ್ವಾಮೀಜಿ ಹೇಳಿರೋದು ಸರಿಯಲ್ಲ. ಮುಖ್ಯಮಂತ್ರಿ ಸ್ಥಾನಬಿಟ್ಟು ಕೊಡು ಅಂತಾ ಹೇಳುವುದಕ್ಕೆ ಅವರು ಯಾರು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ರನ್ನ ಇಳಿಸೋದಕ್ಕೆ ಆಗೋದಿಲ್ಲ, ಇಂತಹ ವಿಚಾರಗಳೆಲ್ಲವೂ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರಗಳು, ಅರ್ಹತೆ ಮಾನದಂಡ ಇಟ್ಟುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಪಂಚ ಯೋಜನೆಗಳಿರುತ್ತವೆ: ಶಾಸಕ ಬಸವರಾಜ ರಾಯರೆಡ್ಡಿ
ಉಪಮುಖ್ಯಮಂತ್ರಿ ಮಾಡಬಹುದಾದರೆ ಎಲ್ಲಾ 32 ಮಂತ್ರಿಗಳು ಉಪ ಮುಖ್ಯಮಂತ್ರಿಗಳು ಆಗಬಹುದು. ಆ ಹುದ್ದೆಯಲ್ಲಿ ಏನೂ ಪವರ್ ಇಲ್ಲ. ಇದು ವೈಭವಿಕರಣದ ಹುದ್ದೆ ಅಷ್ಟೆ, ಕಾನೂನಿನಲ್ಲಿ ಬೆಲೆ ಇಲ್ಲ ಎಂದರು. ಈ ವಿಚಾರದ ಬಗ್ಗೆ ಚರ್ಚೆ ಮಾಡುವುದನ್ನು ನಿಲ್ಲಿಸಬೇಕು ಎಂದು ರಾಯರೆಡ್ಡಿ ಖಾರವಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.