ಬೆಂಗಳೂರು: ಗೋವಿಂದರಾಜನಗರಕ್ಕೆ ಬಿಜೆಪಿ ಅಭ್ಯರ್ಥಿ ಯಾರು?

Published : Apr 14, 2023, 01:49 PM IST
ಬೆಂಗಳೂರು: ಗೋವಿಂದರಾಜನಗರಕ್ಕೆ ಬಿಜೆಪಿ ಅಭ್ಯರ್ಥಿ ಯಾರು?

ಸಾರಾಂಶ

ವಾಸ್ತವವಾಗಿ ಸೋಮಣ್ಣ ಅವರ ಪುತ್ರ ಹಾಗೂ ಬಿಜೆಪಿ ಯುವ ಮುಖಂಡ ಡಾ.ಅರುಣ್‌ ಸೋಮಣ್ಣ ಅವರಿಗೆ ಟಿಕೆಟ್‌ ಕೊಡಿ ಎಂಬ ಲಿಖಿತ ಬೇಡಿಕೆಯನ್ನು ಸ್ಥಳೀಯ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದಾರೆ. ಆದರೆ, ಸೋಮಣ್ಣ ಅವರಿಗೆ ಈಗಾಗಲೇ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳನ್ನು ನೀಡಿರುವುದರಿಂದ ಒಂದೇ ಕುಟುಂಬಕ್ಕೆ ಮೂರು ಕ್ಷೇತ್ರಗಳನ್ನು ನೀಡುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಬೆಂಗಳೂರು(ಏ.14):  ಸಚಿವ ವಿ.ಸೋಮಣ್ಣ ಅವರ ವಲಸೆ ಹಿನ್ನೆಲೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಕುತೂಹಲಕರವಾಗಿದೆ. ವಾಸ್ತವವಾಗಿ ಸೋಮಣ್ಣ ಅವರ ಪುತ್ರ ಹಾಗೂ ಬಿಜೆಪಿ ಯುವ ಮುಖಂಡ ಡಾ.ಅರುಣ್‌ ಸೋಮಣ್ಣ ಅವರಿಗೆ ಟಿಕೆಟ್‌ ಕೊಡಿ ಎಂಬ ಲಿಖಿತ ಬೇಡಿಕೆಯನ್ನು ಸ್ಥಳೀಯ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದಾರೆ. ಆದರೆ, ಸೋಮಣ್ಣ ಅವರಿಗೆ ಈಗಾಗಲೇ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳನ್ನು ನೀಡಿರುವುದರಿಂದ ಒಂದೇ ಕುಟುಂಬಕ್ಕೆ ಮೂರು ಕ್ಷೇತ್ರಗಳನ್ನು ನೀಡುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಒಕ್ಕಲಿಗರ ಮತ್ತು ಕುರುಬ ಸಮುದಾಯಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಿಂದ ಇವೆರಡು ಸಮುದಾಯಗಳಿಗೆ ಸೇರಿದವರನ್ನೇ ಕಣಕ್ಕಿಳಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕುರುಬ ಸಮುದಾಯದ ಮಾಜಿ ಮೇಯರ್‌ ಶಾಂತಕುಮಾರಿ, ಒಕ್ಕಲಿಗ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯ ದಾಸೇಗೌಡ ಅವರ ಹೆಸರುಗಳು ಸದ್ಯಕ್ಕೆ ಕೇಳಿಬರುತ್ತಿವೆ. ಬಿಬಿಎಂಬಿ ಮಾಜಿ ಸದಸ್ಯ ಉಮೇಶ್‌ ಶೆಟ್ಟಿಅವರ ಹೆಸರೂ ಚರ್ಚೆಯಲ್ಲಿದೆ. ಅಲ್ಲದೆ, ಅದೇ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಅವರ ಹೆಸರೂ ಚಿಂತನೆಯಲ್ಲಿದೆ ಎನ್ನಲಾಗುತ್ತಿದೆ.

ಬೈಂದೂರು: ಬರಿಗಾಲಲ್ಲಿ ಓಡಾಡುವ ಬೈಂದೂರು ಬಿಜೆಪಿ ಅಭ್ಯರ್ಥಿ..!

ಈ ನಡುವೆ ಅಚ್ಚರಿ ಅಭ್ಯರ್ಥಿಯಾಗಿ ಒಕ್ಕಲಿಗ ಸಮುದಾಯದ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜುಗೌಡ ಅವರ ಹೆಸರೂ ಪಕ್ಷದ ನಾಯಕರ ಚರ್ಚೆ ವೇಳೆ ಪ್ರಸ್ತಾಪವಾಗಿದೆ. ಆದರೆ, ಮುನಿರಾಜುಗೌಡ ಅವರು ಸ್ಪರ್ಧಿಸಲು ಒಪ್ಪುವ ಸಾಧ್ಯತೆ ಕಡಮೆ. ಅಂತಿಮವಾಗಿ ಸಚಿವ ಸೋಮಣ್ಣ ಅವರು ಒಪ್ಪುವ ಅಭ್ಯರ್ಥಿಯೇ ಗೋವಿಂದರಾಜನಗರದಿಂದ ಕಣಕ್ಕಿಳಿಯುವುದಂತೂ ನಿಶ್ಚಿತ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ