ಸಚಿವ ಅಶೋಕ್‌ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಸ್ಪರ್ಧಿ ಯಾರು?: ಕುತೂಹಲ

Published : Apr 19, 2023, 05:41 AM IST
ಸಚಿವ ಅಶೋಕ್‌ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಸ್ಪರ್ಧಿ ಯಾರು?: ಕುತೂಹಲ

ಸಾರಾಂಶ

ಕಾಂಗ್ರೆಸ್‌ ಪಕ್ಷವು ಸಚಿವ ಆರ್‌.ಅಶೋಕ್‌ ಸ್ಪರ್ಧಿಸಿರುವ ಪದ್ಮನಾಭನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ವಿಚಾರವಾಗಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಬೆಂಗಳೂರು (ಏ.19): ಕಾಂಗ್ರೆಸ್‌ ಪಕ್ಷವು ಸಚಿವ ಆರ್‌.ಅಶೋಕ್‌ ಸ್ಪರ್ಧಿಸಿರುವ ಪದ್ಮನಾಭನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ವಿಚಾರವಾಗಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಬಿ-ಫಾರಂ ಪಡೆದಿರುವ ರಘುನಾಥ್‌ ನಾಯ್ಡು ನಾಮಪತ್ರ ಸಲ್ಲಿಕೆ ಮಾಡದೆ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಸ್ಪರ್ಧೆಗೆ ಆಹ್ವಾನ ನೀಡುತ್ತಿರುವುದು ಕುತೂಹಲ ಮೂಡಿಸಿದೆ. ಕಂದಾಯ ಸಚಿವ ಆರ್‌. ಅಶೋಕ್‌ ಅವರು ಪದ್ಮನಾಭ ನಗರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಕನಕಪುರ ಕ್ಷೇತ್ರ ಎರಡೂ ಕಡೆ ಸ್ಪರ್ಧಿಸುತ್ತಿದ್ದಾರೆ. ಪ್ರಬಲ ನಾಯಕರು ಆಕಾಂಕ್ಷಿಗಳಾಗಿದ್ದರೂ ಕಾಂಗ್ರೆಸ್‌ ಪಕ್ಷ ಪದ್ಮನಾಭ ನಗರದಿಂದ ರಘುನಾಥ್‌ ನಾಯ್ಡು ಅವರಿಗೆ ಟಿಕೆಟ್‌ ಘೋಷಿಸಿತ್ತು.

ಬಳಿಕ ಅಶೋಕ್‌ ವಿರುದ್ಧ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಬೇಕೆಂಬ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ನಡೆದಿದ್ದು, ಪರಿಣಾಮ ಶಿವಕುಮಾರ್‌ ಅವರು ಬಿ-ಫಾರಂ ನೀಡುವಾಗಲೂ ಸತಾಯಿಸಿ ನೀಡಿದ್ದರು. ಇನ್ನು ಬಿ-ಫಾರಂ ಸ್ವೀಕರಿಸಿ ಮಾತನಾಡಿದ್ದ ರಘುನಾಥ ನಾಯ್ಡು, ‘ನನಗೆ ಬಿ-ಫಾರಂ ಲಭ್ಯವಾಗಿದ್ದರೂ ನಾನು ಡಿ.ಕೆ. ಸುರೇಶ್‌ ಅವರನ್ನು ಸ್ಪರ್ಧಿಸುವಂತೆ ಮನವಿ ಮಾಡುತ್ತೇನೆ. ಅವರು ಸ್ಪರ್ಧಿಸಿದರೆ ಕನಿಷ್ಠ 50-60 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಆರ್‌. ಅಶೋಕ್‌ ಎರಡೂ ಕಡೆ ಸೋಲುತ್ತಾರೆ. 

ಶೆಟ್ಟರ್‌ ಸೇರಿ ಏಳು ಮಂದಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ: 3 ಹೊಸಬರಿಗೆ ಮಣೆ

ಹೀಗಾಗಿ ಸುರೇಶ್‌ ಅವರು ಸ್ಪರ್ಧಿಸಬೇಕು. ಅವರು ಸ್ಪರ್ಧಿಸದಿದ್ದರೆ ಮಾತ್ರ ನಾನು ಸ್ಪರ್ಧಿಸುತ್ತೇನೆ’ ಎಂದು ಹೇಳಿದ್ದರು. ಇದೀಗ ನಾಮಪತ್ರ ಸಲ್ಲಿಕೆಗೆ ಅಂತಿಮ ಗಡುವು ಹತ್ತಿರವಾಗುತ್ತಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ. ಬುಧವಾರ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ. ಸುರೇಶ್‌ ಅವರು ಕ್ಷೇತ್ರಕ್ಕೆ ಬರಲಿದ್ದಾರೆ. ಈ ವೇಳೆ ಮತ್ತೊಮ್ಮೆ ಸುರೇಶ್‌ ಅವರೇ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದು ರಘುನಾಥ್‌ ನಾಯ್ಡು ಮಂಗಳವಾರವೂ ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ. 

ಹೀಗಾಗಿ ಪದ್ಮನಾಭನಗರದಿಂದ ಯಾರು ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಕನ​ಕ​ಪುರ ಕ್ಷೇತ್ರದವರ ಬದ​ಲಾ​ವ​ಣೆ ಆಸೆ ನನ​ಸಾ​ಗ​ಲಿದೆ: ಸಚಿ​ವ ಆರ್‌.ಅಶೋಕ್‌

87.35 ಕೋಟಿ ಆಸ್ತಿಗೆ ಅಶೋಕ್‌ ಸಾಮ್ರಾಟ: ಸಚಿವ ಆರ್‌.ಅಶೋಕ್‌ 87.35 ಕೋಟಿಗಿಂತ ಹೆಚ್ಚಿನ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2.18 ಕೋಟಿ ಮೌಲ್ಯದ ಚರಾಸ್ತಿ, 3.10 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಪ್ರಮೀಳಾ ರಾಣಿ ಹೆಸರಲ್ಲಿ 1.16 ಕೋಟಿ ಮೌಲ್ಯದ ಚರಾಸ್ತಿ ಮತ್ತು 10.44 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ. ಅಶೋಕ್‌ ಅವರ ಅವಿಭಕ್ತ ಕುಟುಂಬ ಹೆಸರಲ್ಲಿ 8.96 ಕೋಟಿ ಚರಾಸ್ತಿ ಇದ್ದರೆ, 61.49 ಸ್ಥಿರಾಸ್ತಿ ಇದೆ. ಅಶೋಕ್‌ ಅವರು 97.78 ಲಕ್ಷ ಸಾಲ ಮತ್ತು ಪತ್ನಿ ಹೆಸರಲ್ಲಿ 64.04 ಲಕ್ಷ ಸಾಲ ಇದೆ. ಪತ್ನಿ ಬಳಿ ಎರಡು ಡೈಮೆಂಡ್‌ ನೆಕ್ಲೇಸ್‌ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!