ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?

Kannadaprabha News   | Kannada Prabha
Published : Nov 14, 2025, 05:48 AM IST
BIHAR ELECTION RESULT

ಸಾರಾಂಶ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಗದ್ದಲದಿಂದಾಗಿ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಮತಎಣಿಕೆ ಶುಕ್ರವಾರ ನಡೆಯಲಿದೆ. ಈ ಮೂಲಕ ಕಾತರಕ್ಕೆ ತೆರೆಬೀಳಲಿದೆ.

ಪಟ್ನಾ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಗದ್ದಲದಿಂದಾಗಿ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಮತಎಣಿಕೆ ಶುಕ್ರವಾರ ನಡೆಯಲಿದೆ. ಈ ಮೂಲಕ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ದಾಖಲೆಯ ಐದನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆಯೇ ಅಥವಾ ಈ ಬಾರಿ ಜನ ಬದಲಾವಣೆಗೆ ಮತಚಲಾಯಿಸಿದ್ದಾರೆಯೇ ಎಂಬ ಕಾತರಕ್ಕೆ ತೆರೆಬೀಳಲಿದೆ.

ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ 67.13ರಷ್ಟು ಮತದಾನ ಆಗಿದೆ. ನ.6 ಮತ್ತು 11ರಂದು ಎರಡು ಹಂತದಲ್ಲಿ ರಾಜ್ಯದ 243 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 2,616 ಅಭ್ಯರ್ಥಿಗಳು ಕಣದಲ್ಲಿದ್ದರು.

ಎನ್‌ಡಿಎ ಮೈತ್ರಿಕೂಟ ಬಹುಮತ : ಸಮೀಕ್ಷೆಗಳು

ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತಗಳಿಸಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ, ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ, ಆರ್‌ಜೆಡಿ ಮುಖಂಡರ್ಥಿ ತೇಜಸ್ವಿ ಯಾದವ್‌ ಮಾತ್ರ ಸಮೀಕ್ಷೆಗಳ ಭವಿಷ್ಯವನ್ನು ನಿರಾಕರಿಸಿದ್ದಾರೆ. ತಮ್ಮ ನೇತೃತ್ವದಲ್ಲಿ ಮಹಾಘಟಬಂಧನ್‌ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟವು ಬಿಜೆಪಿ, ಜೆಡಿಯು ಸೇರಿ ಐದು ಪಕ್ಷಗಳನ್ನು ಒಳಗೊಂಡಿದೆ. ಇನ್ನು ಕಾಂಗ್ರೆಸ್‌, ಆರ್‌ಜೆಡಿ, ಸಿಪಿಐ, ಇತರೆ ಎಡಪಕ್ಷಗಳು ಹಾಗೂ ವಿಕಾಸಶೀಲ್‌ ಇನ್ಸಾನ್‌ ಪಾರ್ಟಿ ಸೇರಿಕೊಂಡು ಮಹಾಘಟಬಂಧನ್‌ ಮಾಡಿಕೊಂಡಿವೆ. ಪ್ರಶಾಂತ್‌ ಕಿಶೋರ್‌ ಅವರು ಜನ್‌ ಸೂರಜ್‌ ಪಕ್ಷದ ಮೂಲಕ ಮೊದಲ ಬಾರಿಗೆ ಬಿಹಾರದಲ್ಲಿ ರಾಜಕೀಯ ಅದೃಷ್ಟಪರೀಕ್ಷೆಗಿಳಿದಿದ್ದಾರೆ.

10 ಸಮೀಕ್ಷೆಗಳಲ್ಲಿ ಎನ್‌ಡಿಎಗೆ ಅಧಿಕಾರ:

ಬಿಹಾರ ಚುನಾವಣೆ ಕುರಿತ ಬಹುತೇಕ ಅಂದರೆ 10 ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಮೈತ್ರಿಕೂಟಕ್ಕೇ ಗೆಲುವು ಪಕ್ಕಾ ಎಂದು ಹೇಳಿವೆ. ಪ್ರಶಾಂತ್‌ ಕಿಶೋರ್‌ ಅವರ ಜನ್‌ ಸೂರಜ್‌ ಪಕ್ಷಕ್ಕೆ 2ಕ್ಕಿಂತ ಹೆಚ್ಚು ಸ್ಥಾನ ಸಿಗುವುದು ಅನುಮಾನ. ಇನ್ನು ಮಹಾಘಟಬಂಧನ್‌ ಸೀಟುಗಳ ಸಂಖ್ಯೆ 100 ದಾಟುವುದು ಕಷ್ಟ ಎಂದು ಭವಿಷ್ಯ ನುಡಿದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!