
ರಾಂಚಿ: ‘ಚುನಾವಣೆಯಲ್ಲಿ ಗೆದ್ದವರೂ ಈ ರೀತಿ ದುರಂಹಕಾರ ತೋರಿಸುವುದಿಲ್ಲ. ಮೂರು ಬಾರಿ ಸೋತರೂ ಕಾಂಗ್ರೆಸ್ ಪಕ್ಷದ ನಾಯಕ ಸೋಲನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ಧರಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಾರ್ಖಂಡ್ನ ರಾಂಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾ, ‘ಹಲವು ಸಂದರ್ಭದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ದುರಹಂಕಾರ ತೋರಿಸುವವರನ್ನು ನಾವು ನೋಡುತ್ತೇವೆ. ಆದರೆ ಜಾರ್ಖಂಡ್ನಲ್ಲಿ ಅಧಿಕಾರದಲ್ಲಿರುವ (ಕಾಂಗ್ರೆಸ್ ) ಪಕ್ಷ ಚುನಾವಣೆಯಲ್ಲಿ ಸೋತರೂ ದುರಂಹಕಾರ ಪ್ರದರ್ಶಿಸುತ್ತಾರೆ. ಈ ರೀತಿ ಮೊದಲ ಸಲ ನೋಡುತ್ತಿದ್ದೇನೆ’ಎಂದು ಲೋಕಸಭೆ ಫಲಿತಾಂಶವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.