ಸಿಎಂ ಸಿದ್ದರಾಮಯ್ಯ 14 ಸೈಟ್ ಯಾಕೆ ವಾಪಸ್ ಕೊಟ್ಟರು?: ಶಾಸಕ ಟಿ.ಎಸ್‌.ಶ್ರೀವತ್ಸ

Published : Feb 21, 2025, 04:59 PM ISTUpdated : Feb 21, 2025, 05:02 PM IST
ಸಿಎಂ ಸಿದ್ದರಾಮಯ್ಯ 14 ಸೈಟ್ ಯಾಕೆ ವಾಪಸ್ ಕೊಟ್ಟರು?: ಶಾಸಕ ಟಿ.ಎಸ್‌.ಶ್ರೀವತ್ಸ

ಸಾರಾಂಶ

ಸಿಎಂ ಸಿದ್ದರಾಮಯ್ಯ ಪರವಾಗಿ ಲೋಕಾಯುಕ್ತ ವರದಿ ನೀಡಿರುವುದನ್ನು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಖಂಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಇದೇ ರೀತಿ ವರದಿ ಕೊಡುತ್ತದೆ ಎಂದು ನನಗೆ ಗೊತ್ತಿತ್ತು. ಲೋಕಾಯುಕ್ತಕ್ಕೆ ಎಲ್ಲ ದಾಖಲೆ ಕೊಟ್ಟಿದ್ದೇವೆ. 

ಮೈಸೂರು (ಫೆ.21): ಸಿಎಂ ಸಿದ್ದರಾಮಯ್ಯ ಪರವಾಗಿ ಲೋಕಾಯುಕ್ತ ವರದಿ ನೀಡಿರುವುದನ್ನು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಖಂಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಇದೇ ರೀತಿ ವರದಿ ಕೊಡುತ್ತದೆ ಎಂದು ನನಗೆ ಗೊತ್ತಿತ್ತು. ಲೋಕಾಯುಕ್ತಕ್ಕೆ ಎಲ್ಲ ದಾಖಲೆ ಕೊಟ್ಟಿದ್ದೇವೆ. ಆದರೂ ಈ ರೀತಿ ವರದಿ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಮುಗ್ದರು, ಏನೂ ತಪ್ಪು ಮಾಡಿಲ್ಲ ಎಂಬುದಾದರೆ. ಹಾಗಾದರೆ 14 ಸೈಟ್ ಯಾಕೆ ವಾಪಾಸ್ ಕೊಟ್ಟರು ಎಂದು ಪ್ರಶ್ನಿಸಿದರು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ 141 ಫೈಲ್ ತೆಗೆದುಕೊಂಡು ಹೋಗಿದ್ದಾರೆ. ಅದರಲ್ಲೆ ಸಿಎಂ ಕುಟುಂಬದ ಸಾಕ್ಷಿ ಇರಬಹುದು. ಸಿಎಂ ಒತ್ತಡದಿಂದ ಲೋಕಾಯುಕ್ತ ವರದಿ ಸಿದ್ಧವಾಗಿದೆ. ಲೋಕಾಯುಕ್ತಕ್ಕೆ ಇದ್ದ ಮರ್ಯಾದೆಯನ್ನು ಜಿಲ್ಲಾ ಮಟ್ಟದ ಲೋಕಾಯುಕ್ತ ಅಧಿಕಾರಿ ಕಳೆದಿದ್ದಾರೆ ಎಂದು ಅವರು ಟೀಕಿಸಿದರು.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪ ಸಾಬೀತಾಗಿಲ್ಲ: ಸಾಕ್ಷ್ಯಾಧಾರಗಳ ತನಿಖೆಯಿಂದ ನಿರಪರಾಧಿ ಎಂದು ಸಾಬೀತಾಗಿಲ್ಲ. ಬದಲಿಗೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪ ಸಾಬೀತಾಗಿಲ್ಲ ಎಂಬುದಷ್ಟೇ ವ್ಯತ್ಯಾಸ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಎಂ.ಎಸ್. ಪರಮಾನಂದ ಹೇಳಿದ್ದಾರೆ. ಇದೇನು ‘ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ’... ಅಂತೇನೂ ಇಲ್ಲಾ... ‘ಸಾಕ್ಷ್ಯಾಧಾರಗಳ ಸರ್ವನಾಶದಿಂದಾಗಿ’ ಅಂತಷ್ಟೇ. ಒಬ್ಬ ಆಡಳಿತದಲ್ಲಿರುವ ಮುಖ್ಯಮಂತ್ರಿಯ ಹಗರಣದ ತನಿಖೆಯು ಎಂದೂ ಪಾರದರ್ಶಕವಾಗಿ ನಡೆಯಲಾರದು. ಸಾಕ್ಷಿಗಳು ಹೆದರುತ್ತಾರೆ ಅಥವಾ ಆಮಿಷಕ್ಕೊಳಗಾಗುತ್ತಾರೆ. ದಾಖಲೆಗಳು ದ್ವಂಸವಾಗುತ್ತವೆ.

ರಣ ಬಿಸಿಲಿಗೆ ಕೊಡಗು ತತ್ತರ: ಫೆಬ್ರವರಿ ಮಧ್ಯಭಾಗದಲ್ಲೇ 32 ರಿಂದ 33 ಡಿಗ್ರಿ ಸೆಲ್ಸಿಯಸ್ ತಲುಪಿದ ತಾಪಮಾನ

ಹಾಗಾಗಿ ಸಾಕ್ಷ್ಯಾಧಾರಗಳ ಕೊರತೆ ಎಂಬುದು ಮತ್ತೊಮ್ಮೆ ಅವರ ಭ್ರಷ್ಟತೆಯನ್ನು ಸಾಬೀತು ಪಡಿಸಿದೆಯೇ ಹೊರತು ಮಾನ್ಯ ಮುಖ್ಯಮಂತ್ರಿಗಳು ಸಾಚಾ ಸಿದ್ದರಾಮಯ್ಯ ಅಂತೇನೂ ಅಲ್ಲ ಎಂದಿದ್ದಾರೆ. ಎಲ್ಲಾ ರಾಜಕಾರಣಿಗಳದ್ದೂ ಇದೇ ಕಥೆ. ಹಗರಣಗಳು ಬೇರೆ ಬೇರೆ ಅಷ್ಟೇ ಇಂತಹ ಹಗರಣಗಳು ನಿರ್ನಾಮವಾಗಬೇಕಿದ್ದರೆ ತನಿಖಾ ಸಂಸ್ಥೆಗಳು ಮತ್ತು ತನಿಖಾಧಿಕಾರಿಗಳು ನಿರ್ದಾಕ್ಷಿಣ್ಯವಾಗಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತಹ ವ್ಯವಸ್ಥೆಯನ್ನು ನಾವು ಆಡಳಿತದಲ್ಲಿ ರೂಪಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ