ರಾಜ್ಯಸಭಾ ಚುನಾವಣೆ: 'ಕುಮಾರಸ್ವಾಮಿ ಕುಟುಂಬಕ್ಕೆ ಕುಪೇಂದ್ರ ರೆಡ್ಡಿ ಏಕೆ ಸಾಲ ಕೊಟ್ಟಿದ್ದಾರೆ?'

Published : Jun 12, 2022, 02:56 PM IST
ರಾಜ್ಯಸಭಾ ಚುನಾವಣೆ: 'ಕುಮಾರಸ್ವಾಮಿ ಕುಟುಂಬಕ್ಕೆ ಕುಪೇಂದ್ರ ರೆಡ್ಡಿ ಏಕೆ ಸಾಲ ಕೊಟ್ಟಿದ್ದಾರೆ?'

ಸಾರಾಂಶ

*  ರಾಜ್ಯಸಭಾ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ *  ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಪ್ರಶ್ನೆ *  ಪ್ರತಾಪ ಸಿಂಹ ಕಚೇರಿಗೆ ಭೇಟಿ

ಮೈಸೂರು(ಜೂ.12): ರಾಜ್ಯಸಭಾ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರು ಎಚ್‌.ಡಿ. ಕುಮಾರಸ್ವಾಮಿ ಅವರ ಕುಟುಂಬಕ್ಕೆ ಸುಮಾರು 19 ಕೋಟಿ ಸಾಲ ಏಕೆ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಪ್ರಶ್ನಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಕುಪೇಂದ್ರರೆಡ್ಡಿ ಅವರು ತಮಗೆ 350 ಕೋಟಿ ಸಾಲ ಇದೆ ಎಂದು ಪ್ರಮಾಣಪತ್ರದಲ್ಲಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಇದರಲ್ಲಿ ಭವಾನಿ ರೇವಣ್ಣ ಅವರಿಗೆ 2 ಕೋಟಿ, ಸೂರಜ್‌ ರೇವಣ್ಣಗೆ 5.8 ಕೋಟಿ, ಪ್ರಜ್ವಲ್‌ ರೇವಣ್ಣಗೆ 1 ಕೋಟಿ, ಎಚ್‌.ಡಿ. ರಮೇಶ್‌ಗೆ 3.9 ಕೋಟಿ, ಪುಟ್ಟರಾಜು ಅವರ ಪುತ್ರನಿಗೆ 6.08 ಕೋಟಿ ಹೀಗೆ ಒಟ್ಟು 19 ಕೋಟಿ ಸಾಲವನ್ನು ಇವರಿಗೇ ಏಕೆ ನೀಡಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಳಿದರು.

Rajya Sabha Election ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿ!

ಮೊದಲು ಕುಮಾರಸ್ವಾಮಿ ಅವರು ತಮ್ಮ ಪಕ್ಷದಿಂದ ಜಾತ್ಯತೀತ ಎಂಬ ಪದವನ್ನು ತೆಗೆಯಬೇಕು. ಈ ಪದ ಬಳಸಲು ಅವರು ಅರ್ಹರಲ್ಲ. ಕುಪೇಂದ್ರರೆಡ್ಡಿ ಅವರನ್ನು ನಿಲ್ಲಿಸಿ, ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಸೋಲಿಸಿ, ಬಿಜೆಪಿಯ ಲೆಹರ್‌ಸಿಂಗ್‌ ಗೆಲ್ಲುವಂತೆ ಮಾಡಿರುವ ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂಬುದು ಸಾಬೀತಾಗಿದೆ ಎಂದರು.

ಪ್ರತಾಪ ಸಿಂಹ ಕಚೇರಿಗೆ ಭೇಟಿ:

ಮೈಸೂರಿಗೆ ಸಂಸದ ಪ್ರತಾಪಸಿಂಹ ಅವರು ನೀಡಿರುವ ಕೊಡುಗೆ ಕುರಿತು ಚರ್ಚೆಗೆ ಬರಲು ಜೂ. 24ರ ಗಡುವು ನೀಡಿದ್ದೇನೆ. ಅಷ್ಟರಲ್ಲಿ ಅವರು ಸ್ಥಳ, ದಿನ ಮತ್ತು ಸಮಯ ನಿಗದಿಪಡಿಸದಿದ್ದರೆ ನಾನೇ 24ರ ನಂತರ ಅವರ ಕಚೇರಿಗೆ ಒಂದು ಕುರ್ಚಿ ಮತ್ತು ಮೇಜಿನೊಂದಿಗೆ ಹೋಗಿ ಕುಳಿತುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್