ಅಕ್ಕಿ ಕೊಡಲ್ಲ ಅಂದ್ರೆ ನಾವು ಜಿಎಸ್‌ಟಿ ಏಕೆ ಕಟ್ಟ​ಬೇ​ಕು?​: ಶಿವ​ಲಿಂಗೇ​ಗೌ​ಡ

Published : Jun 17, 2023, 01:51 PM IST
ಅಕ್ಕಿ ಕೊಡಲ್ಲ ಅಂದ್ರೆ ನಾವು ಜಿಎಸ್‌ಟಿ ಏಕೆ ಕಟ್ಟ​ಬೇ​ಕು?​: ಶಿವ​ಲಿಂಗೇ​ಗೌ​ಡ

ಸಾರಾಂಶ

ಮಲತಾಯಿ ಧೋರಣೆ ಮಾಡುವುದಾದರೆ ಕೇಂದ್ರದ ನೀತಿ, ನಿರ್ಧಾರಗಳನ್ನು ನಾವ್ಯಾಕೆ ಒಪ್ಪಬೇಕು. ಕರ್ನಾಟಕದಿಂದ ಪಡೆದಿರುವ ಎಲ್ಲ ಜಿಎಸ್‌ಟಿಯನ್ನೂ ವಾಪಸ್‌ ಕೊಟ್ಟು ಒಕ್ಕೂಟ ವ್ಯವಸ್ಥೆಯಿಂದ ಕೈಬಿಡಲಿ: ಶಿವಲಿಂಗೇಗೌಡ 

ಬೆಂಗಳೂರು(ಜೂ.17):  ಭಾರತೀಯ ಆಹಾರ ನಿಗಮದಿಂದ ಅಕ್ಕಿ ಖರೀದಿಸಲು ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಅವಕಾಶ ನೀಡುವುದಿಲ್ಲ ಎನ್ನುವುದಾದರೆ ಒಕ್ಕೂಟ ವ್ಯವಸ್ಥೆಯಿಂದ ಕರ್ನಾಟಕವನ್ನು ಕೈಬಿಡಲಿ. ರಾಜ್ಯದ ಕ್ಷೇಮಾಭಿವೃದ್ಧಿಗೆ ಕೇಂದ್ರ ಸ್ಪಂದಿಸದ ಮೇಲೆ ಜಿಎಸ್‌ಟಿ ಪದ್ಧತಿಯನ್ನೂ ನಾವ್ಯಾಕೆ ಒಪ್ಪಬೇಕು? ಎಂದು ಶಾಸಕ ಶಿವಲಿಂಗೇಗೌಡ ಕಿಡಿ ಕಾರಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಕ್ಕೂಟ ವ್ಯವಸ್ಥೆಯಲ್ಲಿ ಎಫ್‌ಸಿಐ ಮೂಲಕ ಅಕ್ಕಿ ಖರೀದಿಗೆ ಒಂದು ರಾಜ್ಯಕ್ಕೆ ಅವಕಾಶ ನೀಡುವುದು ಮತ್ತೊಂದಕ್ಕೆ ನಿರಾಕರಿಸುವ ಕೇಂದ್ರದ ನೀತಿ ಸರಿಯಲ್ಲ. 7 ಲಕ್ಷ ಟನ್‌ ಅಕ್ಕಿ ಇದೆ ಅಂತ ರಾತ್ರಿ ಹೇಳಿ, ಬೆಳಗ್ಗೆ ಇಲ್ಲ ಕೊಡೋಕಾಗಲ್ಲ ಅಂದರೆ ಹೇಗೆ? ಈ ಬಗ್ಗೆ ತನಿಖೆ ಮಾಡಿಸ್ತಾರಾ? ಹೀಗೆ ಮಾಡಿದರೆ ಆಹಾರ ಭದ್ರತಾ ಕಾಯ್ದೆ ತಂದ ಉದ್ದೇಶ ಈಡೇರುತ್ತಾ? ಈ ರೀತಿ ಮಲತಾಯಿ ಧೋರಣೆ ಮಾಡುವುದಾದರೆ ಕೇಂದ್ರದ ನೀತಿ, ನಿರ್ಧಾರಗಳನ್ನು ನಾವ್ಯಾಕೆ ಒಪ್ಪಬೇಕು. ಕರ್ನಾಟಕದಿಂದ ಪಡೆದಿರುವ ಎಲ್ಲ ಜಿಎಸ್‌ಟಿಯನ್ನೂ ವಾಪಸ್‌ ಕೊಟ್ಟು ಒಕ್ಕೂಟ ವ್ಯವಸ್ಥೆಯಿಂದ ಕೈಬಿಡಲಿ’ ಎಂದರು.

ನಾನು 15 ವರ್ಷ ಸಾಕಿದ್ದ ಗಿಣಿನಾ ಕಾಂಗ್ರೆಸ್‌ ಕಿತ್ಕೊಂಡಿದೆ: ಜನರೇ ಹದ್ದಾಗಿ ಕುಕ್ಕುತಾರೆ!

‘ಅನ್ನಭಾಗ್ಯ ಇದು ಜನಪರ ಕಾರ್ಯಕ್ರಮ, ಇದರಲ್ಲಿ ರಾಜಕೀಯ ಮಾಡಿದರೆ ಬಿಜೆಪಿಯವರು ಈಗ ವಿಧಾನಸಭೆ ಚುನಾವಣೆಯಲ್ಲಿ ಪಾಠ ಕಲಿಸಿದಂತೆ ಸಂಸತ್‌ ಚುನಾವಣೆಯಲ್ಲೂ ಜನ ಪಾಠ ಕಲಿಸುತ್ತಾರೆ. ನಾವೇನೂ ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ. ಎಫ್‌ಸಿಐ ಇರೋದ್ರಿಂದಲೇ ಖರೀದಿಸಿ ಕೊಡಬಹುದು ಎಂದು 10 ಕೆ.ಜಿ. ಅಕ್ಕಿ ಕೊಡ್ತೀವಿ ಅಂತ ಘೋಷಣೆ ಮಾಡಿದ್ದು. ಅವರು ಏನೇ ಮಾಡಿದರೂ ನಮ್ಮ ಸರ್ಕಾರ ಹೊರ ರಾಜ್ಯಗಳಿಂದಲಾದರೂ ಅಕ್ಕಿ ಖರೀದಿಸಿ ನೀಡುತ್ತದೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ