ರಾಜಕೀಯಕ್ಕೆ ಬಂದೇ ಬರ್ತೀನಿ, ಬೆಳೆದೇ ಬೆಳೀತೀನಿ: ರೆಡ್ಡಿ ಶಪಥ

Published : Jan 19, 2019, 05:05 PM IST
ರಾಜಕೀಯಕ್ಕೆ ಬಂದೇ ಬರ್ತೀನಿ, ಬೆಳೆದೇ ಬೆಳೀತೀನಿ: ರೆಡ್ಡಿ ಶಪಥ

ಸಾರಾಂಶ

ಅಕ್ರಮ ಗಣಿ ಆರೋಪದ ಮೇಲೆ ಜೈಲುವಾಸ ಅನುಭವಿಸಿದ ಬಳಿಕ ರಾಜ್ಯ ರಾಜಕೀಯದಿಂದ ದೂರ ಉಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮರಳಿ ಪಾಲಿಟಿಕ್ಸ್ ಗೆ ಎಂಟ್ರಿ ಕೊಡುವ ಸುಳಿವು ನೀಡಿದ್ದಾರೆ.

ಬಾಗಲಕೋಟೆ, [ಜ.19]: ಸಕ್ರಿಯ ರಾಜಕಾರಣದಿಂದ ಮೂಲೆಗುಂಪಾಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ತಮ್ಮ ರೆಡ್ಡಿ ಸಮುದಾಯದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದು, ಮತ್ತೆ ಪಾಲಿಟಿಕ್ಸ್ ಗೆ ಎಂಟ್ರಿ ಕೊಡುವ ಹುಮ್ಮಸ್ಸಿನಲ್ಲಿದ್ದಾರೆ.

ಬಾಗಲಕೋಟೆಯ ಸಂಗಮ ಕ್ರಾಸ್​​ನಲ್ಲಿ ಇಂದು [ಶನಿವಾರ] ನಡೆದ ರೆಡ್ಡಿ ಸಮುದಾಯದ ಸಮಾರಂಭದಲ್ಲಿ ಮಾತನಾಡಿ, ರಾಜಕೀಯಕ್ಕೆ ಬಂದೇ ಬರ್ತಿನಿ, ಬೆಳೆದೇ ಬೆಳೆಯುತ್ತೇನೆ. ಒಳ್ಳೇ ರಾಜಕಾರಣಿ ಆಗಿಯೇ ಆಗುತ್ತೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೆಡ್ಡಿ ಕಂ ಬ್ಯಾಕ್: ಪ್ರತ್ಯೇಕ ಸಂಘ ಕಟ್ಟಲು ಜನಾರ್ದನ ರೆಡ್ಡಿ ರೆಡಿ

ಜನಾರ್ದನ ರೆಡ್ಡಿ, ನಾನು ರಾಜಕೀಯ ಉದ್ದೇಶಕ್ಕಾಗಿ ಪಾದಯಾತ್ರೆ ಮಾಡ್ತಿಲ್ಲ.  ನನಗೆ ರಾಜಕೀಯ ಬೇಕು ಅನಿಸಿದ್ರೆ ಅದಕ್ಕೆ ಕೇವಲ ಒಂದು ವರ್ಷ ಟೈಮ್ ಸಾಕು, ಆ ಕಾಲ ಬಂದೇ ಬರುತ್ತದೆ.  ನನ್ನ ಸಮಾಜವನ್ನ ಬಳಸಿಕೊಂಡು ರಾಜಕೀಯ ಮಾಡುವುದಿಲ್ಲ. ಈ ಹಿಂದೆ ಯಡಿಯೂರಪ್ಪನವರ ಜೊತೆ ಇದ್ದೇ, ಅವರ ಜೋತೆ ಸೇರಿ ಬಿಜೆಪಿ ಅಧಿಕಾರ ಬರುವುದಕ್ಕೆ ಶ್ರಮಿಸಿದ್ದೆ  ಎಂದರು.

ಪ್ರಮುಖ ಅಂಶ ಅಂದ್ರೆ ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳುತ್ತಿದೆ. ಆದ್ರೆ ಗಾಲಿ ರಾಜಕಾರಣಕ್ಕೆ ಬಂದೇ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಹೊಸ ಪಕ್ಷ ಕಟ್ಟುತ್ತಾರೋ ಅಥವಾ ಬಿಜೆಪಿಯಲ್ಲಿ ಸಕ್ರಿಯರಾಗುತ್ತಾರೋ ಎನ್ನುವುದು ಮಾತ್ರ ಕುತೂಹಲ ಕೆರಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ