
ತುಮಕೂರು, (ಅ.27): ಉಪಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ಗೌಡ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಚುನಾವಣೆಯಾದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನನಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಭರವಸೆಯನ್ನು ಈಡೇರಿಸುವ ನಾಯಕರು. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಂದವರು ಮಂತ್ರಿಯಾಗೇ ಆಗುತ್ತೇವೆ ವಿಶ್ವಾಸ ವ್ಯಕ್ತಪಡಿಸಿದರು.
ಎಂಟಿಬಿ ನಾಗರಾಜ್ ಮನೆಯಲ್ಲಿ ಆಯುಧ ಪೂಜೆ: ಕಂಗೊಳಿಸಿದ ಫೆರಾರಿ, ರೋಲ್ಸ್ ರಾಯ್ಸ್
ಇನ್ನು ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಎಂಟಿಬಿ, ಸಿಎಂ ಬದಲಾವಣೆ ಮಾಡಲು ಮುಖ್ಯಮಂತ್ರಿಗಳ ಕುರ್ಚಿ ಖಾಲಿಯಿಲ್ಲ. ಆ ಕುರ್ಚಿಯ ಮೇಲೆ ಯಡಿಯೂರಪ್ಪನವರು ಕುಳಿತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಬದಲಾವಣೆ ಇಲ್ಲ . ಯಡಿಯೂರಪ್ಪನವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದರು.
ಶಿರಾದಲ್ಲಿ 23 ಸಾವಿರ ಕುರುಬ ಸಮುದಾಯದ ಮತಗಳಿದ್ದು, ಎಲ್ಲ ಮತಗಳು ಬಿಜೆಪಿಗೆ ಬರಲಿವೆ. ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಎಲ್ಲರೂ ಶಾಸಕರಾಗಿದ್ದಾರೆ. ಬಿಜೆಪಿ ಮಾತ್ರ ಇನ್ನು ಖಾತೆ ತೆರೆದಿಲ್ಲ.ಹಾಗಾಗಿ ಕುರುಬರು ಬಿಜೆಪಿಗೆ ಮತ ಹಾಕುತ್ತಾರೆ ಎಂದರು.
ಸಿದ್ದರಾಮಯ್ಯನವರು ಬಂದು ಪ್ರಚಾರ ನಡೆಸಿರಬಹುದು. ಈಗಾಗಲೇ ಅವರು ಮುಖ್ಯಮಂತ್ರಿಯಾಗಿದ್ದವರು. ಅವರಿಗೆ ಈಗಾಗಲೇ ಒಂದು ಅವಕಾಶ ಸಿಕ್ಕಿದೆ. ಬೇರೆಯವರಿಗೆ ಅವಕಾಶ ಸಿಗಬೇಕಲ್ವ? 2ನೇ ಹಂತದ ನಾಯಕರನ್ನು ಬೆಳೆಸಬೇಕು. ನಾನು ಬೆಳೆಯಬೇಕು. ಜೊತೆಗೆಯಲ್ಲಿದ್ದವರು ಬೆಳೆಯಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.