'ಗೆಲ್ಲುವವರೆಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನೇ ಖಾಯಂ ಅಭ್ಯರ್ಥಿ'

Published : Oct 06, 2021, 07:58 PM ISTUpdated : Oct 06, 2021, 07:59 PM IST
'ಗೆಲ್ಲುವವರೆಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನೇ ಖಾಯಂ ಅಭ್ಯರ್ಥಿ'

ಸಾರಾಂಶ

* ಬೆಳಗಾವಿ ಲೋಕಸಭಾ ಚುನಾವಣೆ ಗೆಲ್ಲುವವರೆಗೆ ನಾನೇ ಖಾಯಂ ಅಭ್ಯರ್ಥಿ * ಘೋಷಣೆ ಮಾಡಿದ ಕಾಂಗ್ರೆಸ್ ಕಾರ್ಯಾಧ್ಯಕ್ಷ  * ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮತ್ತೆ ಪುನರುಚ್ಚರಿಸಿದ ಸತೀಶ ಜಾರಕಿಹೊಳಿ

ಬೆಳಗಾವಿ, (ಅ.06): ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುವವರೆಗೆ ಕಾಂಗ್ರೆಸ್‌ನಿಂದ ನಾನೇ ಕಾಯಂ ಅಭ್ಯರ್ಥಿ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು (ಅ.06) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಅಲ್ಲಿ ಗೆದ್ದು ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

40 ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ : ಸತೀಶ ಜಾರಕಿಹೊಳಿ ಹೊಸ ಬಾಂಬ್‌

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪುತ್ರ ರಾಹುಲ್ ಜಾರಕಿಹೊಳಿ ಅಥವಾ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವ ವಿಚಾರ ಕ್ಷೇತ್ರದ ಜನರಿಗೆ ಬಿಟ್ಟಿದೆ. ಆ ವಿಷಯದಲ್ಲಿ ನಾನು ನಿರ್ಧರಿಸಲಾಗುವುದಿಲ್ಲ. ಇನ್ನೂ ಎರಡು ವರ್ಷವಿದೆ, ನಂತರ ನೋಡೋಣ ಎಂದು ಹೇಳಿದರು.

ಈ ಹಿಂದೆಯೇ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದರು. ಇದೀಗ ಮತ್ತೆ ಸತೀಶ್ ಜಾರಕಿಹೊಳಿ ಅವರು ಪುನರುಚ್ಚರಿಸಿದ್ದಾರೆ.  

ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಅವರು ಸುರೇಶ್ ಅಂಗಡಿ ಪತ್ನಿ ಮಂಗಳ ಅಂಗಡಿ ವಿರುದ್ಧ ಕೇವಲ 5 ಸಾವಿರಗಳ ಮತಗಳ ಅಂತರದಿಂದ ಅಷ್ಟೇ ಸೋತ್ತಿದ್ದರು.

ಬಿಜೆಪಿಯ ಭದ್ರಕೋಟೆಯನ್ನೇ ಸತೀಶ್ ಜಾರಕಿಹೊಳಿ ಅಲುಗಾಡಿಸಿದ್ದು, ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿಸಿದ್ದಂತೂ ಸತ್ಯ. ಮುಂದಿನ ಬಾರಿ ಗೆದ್ದೇ ತೀರುತ್ತೇನೆಂದು ಜಾರಕಿಹೊಳಿ ಪಣತೊಟ್ಟಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!