'ರಾಜಕಾರಣಿಗಳು ರಾಜಕೀಯ ಮಾಡದೆ ಪಾನಿಪೂರಿ ಮಾರಬೇಕೇ?' ಬದರಿ ಶಂಕರಾಚಾರ್ಯರ ಹೇಳಿಕೆಗೆ ಕಂಗನಾ ತಿರುಗೇಟು!

Published : Jul 19, 2024, 01:13 PM ISTUpdated : Jul 19, 2024, 01:42 PM IST
'ರಾಜಕಾರಣಿಗಳು ರಾಜಕೀಯ ಮಾಡದೆ ಪಾನಿಪೂರಿ ಮಾರಬೇಕೇ?' ಬದರಿ ಶಂಕರಾಚಾರ್ಯರ ಹೇಳಿಕೆಗೆ ಕಂಗನಾ ತಿರುಗೇಟು!

ಸಾರಾಂಶ

'ಉದ್ದವ್ ಠಾಕ್ರೆ ದ್ರೋಹದ ಬಲಿಪಶು, ದ್ರೋಹ ಮಾಡುವವರು ಹಿಂದುಗಳಲ್ಲ’ ಎಂದು ಬದರಿ ಶಂಕರಾಚಾರ್ಯರ ಹೇಳಿಕೆಗೆ ಸಂಸದೆ ಕಂಗನಾ ರಣಾವತ್, 'ರಾಜಕಾರಣಿಗಳು ರಾಜಕಾರಣ ಮಾಡದೇ ಪಾನಿಪೂರಿ ಮಾರಬೇಕೇ?' ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ (ಜು.19): 'ಉದ್ದವ್ ಠಾಕ್ರೆ ದ್ರೋಹದ ಬಲಿಪಶು, ದ್ರೋಹ ಮಾಡುವವರು ಹಿಂದುಗಳಲ್ಲ’ ಎಂದು ಬದರಿ ಶಂಕರಾಚಾರ್ಯರು ಇತ್ತೀಚಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಉದ್ದೇಶಿಸಿ ನೀಡಿದ್ದ ಹೇಳಿಕೆಗೆ ಬಿಜೆಪಿ ಸಂಸದೆ , ನಟಿ ಕಂಗನಾ ರಣಾವತ್ ತಿರುಗೇಟು ನೀಡಿದ್ದಾರೆ. ‘ರಾಜಕಾರಣಿಗಳು ರಾಜಕೀಯದಲ್ಲಿ ರಾಜಕಾರಣದ ಮಾಡದೇ ಪಾನಿಪುರಿ ಮಾರಬೇಕೆ?’ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಂಗನಾ(kangana ranaut)‘ರಾಜಕಾರಣದಲ್ಲಿ ಮೈತ್ರಿ, ಒಪ್ಪಂದಗಳು, ಮತ್ತು ಪಕ್ಷದ ವಿಭಜನೆ ಹೊಂದಿರುವುದು ತೀರಾ ಸಾಮಾನ್ಯವಾಗಿದೆ ಮತ್ತು ಸಂವಿಧಾನಾತ್ಮಕವಾಗಿದೆ. ಕಾಂಗ್ರೆಸ್‌ ಪಕ್ಷವು 1907ರಲ್ಲಿ ವಿಭಜನೆಯಾಯಿತು. 1971ರಲ್ಲಿ ಮತ್ತೊಮ್ಮೆ ವಿಭಜನೆ ಆಯಿತು. ರಾಜಕಾರಣಿಗಳು ರಾಜಕೀಯದಲ್ಲಿ ರಾಜಕಾರಣದ ಮಾಡದೇ, ಪಾನಿಪುರಿ ಮಾರಬೇಕೆ?’ ಎಂದು ಬರೆದುಕೊಂಡಿದ್ದಾರೆ.

ಭಗವಂತನಾಗುವ ಆಸೆ ಇರೋರಿಗೆ ಮುಂದೇನು ಅಂತ ಗೊತ್ತಿಲ್ಲ: ಭಾಗ್ವತ್‌

ಬದರಿ ಶಂಕರಾಚಾರ್ಯ(Swami Avimukteshwaranand Saraswati) ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿರುವ ಕಂಗನಾ ‘ಶಂಕರಾಚಾರ್ಯ ಜೀ ಅವರು ತಮ್ಮ ಪದಗಳನ್ನು, ಪ್ರಭಾವವನ್ನು, ಧಾರ್ಮಿಕ ಶಿಕ್ಷಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ರಾಜನು ತನ್ನ ಪ್ರಜೆಗಳನ್ನು ಶೋಷಿಸಲು ಪ್ರಾರಂಭಿಸಿದರೆ ದೇಶದ್ರೋಹವು ಅಂತಿಮ ಧರ್ಮವೆಂದು ಧರ್ಮವೂ ಹೇಳುತ್ತದೆ. ಏಕನಾಥ್ ಶಿಂಧೆಯವರನ್ನು ದ್ರೋಹಿ ಎಂದು ಕರೆದಿರುವುದು ನಮ್ಮೆಲ್ಲರ ಮನಸ್ಸನ್ನು ಘಾಸಿಗೊಳಿಸಿದೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ ಹಾವಳಿ ತಡೆಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
ಶಾಲಾ-ಕಾಲೇಜು ಹುಡುಗಿಯರಿಗೂ ಋತುಚಕ್ರ ರಜೆ?: ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ಸಾಧ್ಯತೆ