
ಮೈಸೂರು(ಜು.31): ‘ಎಚ್.ಡಿ. ಕುಮಾರಸ್ವಾಮಿ ಬಗ್ಗೆ ನಾನು ಈಗ ಮಾತನಾಡಲ್ಲ, ಇನ್ನೊಮ್ಮೆ ಬಂದಾಗ ಮಾತನಾಡುತ್ತೇನೆ’
-ಇದು ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ ಅತಿರಥ ಮಹಾರಥರು ಪಕ್ಷದ ಟ್ವೀಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ’ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ.
'ಜನ ದಂಗೆ ಏಳ್ತಾರೆ' ಬಿಎಸ್ವೈಗೆ ರೇವಣ್ಣ ವಾರದ ಡೆಡ್ ಲೈನ್!
ರಾಜ್ಯ ಸರ್ಕಾರ ಒಂದು ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಗುರುವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿಲು ನಿರಾಕರಿಸಿದ ಅವರು, ನಾನು ಪಲಾಯನ ಮಾಡುತ್ತಿಲ್ಲ. ಈಗ ಉದ್ದೇಶಿತ ಸಂವಾದ ಕಾರ್ಯಕ್ರಮಕ್ಕೆ ಸಂಬಂಧಿಸಿ ಪ್ರಶ್ನೆ ಇದ್ದರೆ ಕೇಳಿ. ಮತ್ತೊಮ್ಮೆ ಬಂದಾಗ ಕುಮಾರಸ್ವಾಮಿ ವಿಚಾರಕ್ಕೂ ಉತ್ತರ ಕೊಡುತ್ತೇನೆ. ಒಂದು ವರ್ಷದ ಸರ್ಕಾರದ ಆಡಳಿತದಲ್ಲಿ ಕುಮಾರಸ್ವಾಮಿ ಎಲ್ಲಿ ಬರುತ್ತಾರೆ ಎಂದು ಸುದ್ದಿಗಾರರೊಬ್ಬರ ಪ್ರಶ್ನೆಗೆ ಗರಂ ಆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.