ಸ್ಟಾಂಪ್‌ ಪೇಪರಲ್ಲಿ ಬರೆದುಕೊಡುವೆ ಸಿದ್ದು 5 ವರ್ಷ ಸಿಎಂ: ದರ್ಶನಾಪುರ

Kannadaprabha News   | Kannada Prabha
Published : Oct 13, 2025, 06:19 AM IST
Sharanabasappa Darshanapur

ಸಾರಾಂಶ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‌ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ.

ಯಾದಗಿರಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‌ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಐದು ವರ್ಷ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ, ಡಿಕೆಶಿ ಕೂಡ ಇದೇ ಮಾತನ್ನು ಹೇಳಿದ್ದಾರೆ. ಹೈಕಮಾಂಡ್‌ ಕೂಡ ಎಲ್ಲಿಯೂ ಸಿಎಂ ಬದಲಾವಣೆ ಮಾಡುವುದಾಗಿ ಹೇಳಿಲ್ಲ ಎಂದರು.

ಸಚಿವ ಸಂಪುಟ ಪುನರ್ ರಚನೆ ಕುರಿತು ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಸಿಎಂ ಅವರು ಯಾವಾಗ ಬೇಕಾದರೂ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ