ಧರ್ಮಸ್ಥಳದಲ್ಲಿ ಸಿಎಂ ಶಪಥ: ಯಡಿಯೂರಪ್ಪ ಧ್ವನಿ ಅಲ್ಲಾಂದ್ರೆ ರಾಜೀನಾಮೆ!

Published : Feb 09, 2019, 04:48 PM ISTUpdated : Feb 09, 2019, 05:20 PM IST
ಧರ್ಮಸ್ಥಳದಲ್ಲಿ ಸಿಎಂ ಶಪಥ: ಯಡಿಯೂರಪ್ಪ ಧ್ವನಿ ಅಲ್ಲಾಂದ್ರೆ ರಾಜೀನಾಮೆ!

ಸಾರಾಂಶ

ರಾಜ್ಯ ರಾಜಕೀಯ ನಾಯಕರ ಆಪರೇಷನ್ ಕಮಲ ಆಡಿಯೋ ವಾರ್ ಜೋರಾಗಿದೆ. ಸದ್ಯ ಆಡಿಯೋ ಧ್ವನಿ ಹಿಂದಿನ ಸತ್ಯಾಸತ್ಯತೆ ಕುರಿತು ಪ್ರಶ್ನೆ ಎದ್ದಿದೆ. ಇದನ್ನೀಗ ಸವಾಲಾಗಿ ಸ್ವೀಕರಿಸಿರುವ ಬಿಎಸ್‌ವೈ ಮತ್ತು ಕುಮಾರಸ್ವಾಮಿ ಇಬ್ಬರೂ ನಾಯಕರ ನಡುವೆ ನಿವೃತ್ತಿಯ ಮಾತು ಜೋರಾಗಿದೆ.

ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣವೂ ಮಹತ್ತರ ಬೆಳವಣಿಗೆಗಳಾಗುತ್ತಿವೆ. ಬಜೆಟ್‌ ಮಂಡನೆಗೂ ಮೊದಲು ಸಿಎಂ ಕುಮಾರಸ್ವಾಮಿ ಆಡಿಯೋ ಒಂದನ್ನು ಬಿಡುಗಡೆ ಮಾಡಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದಾದ ಮರು ಕ್ಷಣವೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್‌ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿ ನಡೆಸಿ ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದರು. ಈ ಎಲ್ಲಾ ಹೈಡ್ರಾಮಾ ನಡೆಯುತ್ತಿದ್ದಾಗಲೇ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಎಚ್‌. ಡಿ ಕುಮಾರಸ್ವಾಮಿ ಆಡಿಯೋದಲ್ಲಿರುವ ಧ್ವನಿ ಬಿ..ಎಸ್‌ ಯಡಿಯೂರಪ್ಪನವರದ್ದು ಅಲ್ಲವೆಂದು ಸಾಬೀತಾದರೆ ನಾನೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಶಪಥ ಮಾಡಿದ್ದಾರೆ. 

ಹೌದು ಆಪರೇಷನ್ ಆಡಿಯೋ ವಾರ್ ತಾರಕ್ಕೇರಿದ್ದು, ರಾಜಕೀಯದ ಹೈಡ್ರಾಮಾದಲ್ಲಿ ಮತ್ತೆ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಸದ್ದು ಮಾಡುತ್ತಿದೆ. ನಿನ್ನೆಯಷ್ಟೇ 'ಆಡಿಯೋದಲ್ಲಿರುವ ಧ್ವನಿ ನನ್ನದು ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ' ಎಂದಿದ್ದ ಬಿಎಸ್‌ವೈಗೆ ಎಚ್. ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸಿರುವ ಎಚ್‌ಡಿಕೆ 'ಆಡಿಯೋದಲ್ಲಿರುವುದು ಯಡಿಯೂರಪ್ಪ ಧ್ವನಿ ಎಂದು ನಾನು ಎಲ್ಲೂ ಹೇಳಿಲ್ಲ. ಆದರೆ ಕನಿಷ್ಟ ಜ್ಞಾನ ಇಲ್ಲದವನು ಕೂಡಾ ಆಡಿಯೋ ಕೇಳಿದ್ರೆ ಅಲ್ಲಿರುವುದು ಯಡಿಯೂರಪ್ಪನವರ ಧ್ವನಿ ಎಂದೇ ಹೇಳುತ್ತಾರೆ. ಒಂದು ವೇಳೆ ಆ ಧ್ವನಿ ಯಡಿಯೂರಪ್ಪನವರದು ಅಲ್ಲವೆಂದು ಸಾಬೀತಾದರೆ ನಾನೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಈ ಮಾತನ್ನು ಧರ್ಮಸ್ಥಳದಲ್ಲಿ ನಿಂತು ಹೇಳುತ್ತಿದ್ದೇನೆ’ ಎಂದು ಶಪಥ ಮಾಡಿದ್ದಾರೆ.

ಸದ್ಯ ರಾಜಕೀಯ ಮುಖಂಡರ ಕಿತ್ತಾಟದಲ್ಲಿ ಮತ್ತೆ ಧರ್ಮಸ್ಥಳ ಮಂಜುನಾಥ ಸನ್ನಿಧಿಯ ಶಪಥ ಸದ್ದು ಮಾಡಿದೆ. ಒಂದೆಡೆ ಬಿಎಸ್‌ವೈ ಧ್ವನಿ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದಿದ್ದರೆ, ಮತ್ತೊಂದೆಡೆ ಕುಮಾರಸ್ವಾಮಿ ಬಿಎಸ್‌ವೈ ಧ್ವನಿ ಎಂದು ಸಾಬೀತಾಗದಿದ್ದರೆ ತಾನೇ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಿವೃತ್ತಿಯ ಮಾತು ಜೋರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!