ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿಸಿದ ಕುಮಾರಸ್ವಾಮಿ

Published : Sep 21, 2022, 01:32 PM IST
ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಸಾರಾಂಶ

0 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಸಚಿವರೊಬ್ಬರ ಅಕ್ರಮದ ಬಗ್ಗೆ ದಾಖಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ.  

ಕಲಬುರಗಿ, (ಸೆಪ್ಟೆಂಬರ್.21): ಈಗಾಗಲೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪಿಎಸ್‌ಐ, ಕೆಪಿಟಿಸಿಎಲ್ ಹಾಗೂ ಶಿಕ್ಷಕರ ನೇಮಕಾತಿ ಅಕ್ರಮ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಪ್ರಮುಖವಾಗಿ ಬೊಮ್ಮಾಯಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
 
ವಿರೋಧ ಪಕ್ಷ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಜಗಜ್ಜಾಹೀರು ಮಾಡುತ್ತಿದೆ. ಇದರಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಇದು ಬಿಜೆಪಿ ಮೇಲೆ ಭಾರೀ ಪರಿಣಾಮ ಬೀಳಲಿದೆ. ಇದರ ಮಧ್ಯೆ ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು: ಎಚ್‌.ಡಿ.ಕುಮಾರಸ್ವಾಮಿ

ಹೌದು...ಅಧಿವೇಶನದಲ್ಲಿ ಸಚಿವರೊಬ್ಬರ ಅಕ್ರಮಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆ ಮಾಡಲು ಕುಮಾರಸ್ವಾಮಿ ಸಜ್ಜಾಗಿದ್ದು, ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ.

ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು. ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ(ಸೆ.22) ಸದನದಲ್ಲಿ ಬಹಿರಂಗ ಮಾಡುವೆ. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್‌. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದು ಹೊಸ ಬಾಂಬ್ ಸಿಡಿಸಿದರು.

ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಹಾಗಾದ್ರೆ, ಅಕ್ರಮ ಮಾಡಿದ ಸಚಿವರು ಯಾರು? ಆ ಸಚಿವರೊಬ್ಬರು ಮಾಡಿದ ಅಕ್ರಮ ಯಾವುದು? ಕುಮಾರಸ್ವಾಮಿಯನ್ನು ಏಕವಚನದಲ್ಲಿ ನಿಂದಿಸಿದ ಸಚಿವರು ಯಾರು? ಎನ್ನುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!