ಚುನಾವಣಾ ರಾಜಕೀಯದಿಂದ ದೂರ ಉಳಿಯುವೆ: ಡಿ.ವಿ.ಸದಾನಂದ ಗೌಡ

Published : Mar 25, 2024, 07:23 AM IST
ಚುನಾವಣಾ ರಾಜಕೀಯದಿಂದ ದೂರ ಉಳಿಯುವೆ: ಡಿ.ವಿ.ಸದಾನಂದ ಗೌಡ

ಸಾರಾಂಶ

ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದೇನೆ ಹಾಗೆಂದು ರಾಜಕಾರಣದಿಂದ ದೂರ ಉಳಿದಿಲ್ಲ. ಮುಂದೆ ರಾಜಕೀಯ ಶುದ್ಧೀಕರಣದ ಕೆಲಸ ಮಾಡಲಿದ್ದೇನೆ ಎಂದು ಸಂಸದ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.  

ಪುತ್ತೂರು (ಮಾ.25): ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದೇನೆ ಹಾಗೆಂದು ರಾಜಕಾರಣದಿಂದ ದೂರ ಉಳಿದಿಲ್ಲ. ಮುಂದೆ ರಾಜಕೀಯ ಶುದ್ಧೀಕರಣದ ಕೆಲಸ ಮಾಡಲಿದ್ದೇನೆ. ಇದಕ್ಕಾಗಿ ನನ್ನೊಂದಿಗೆ ಕೈ ಜೋಡಿಸಲು ಬರುವ ಸಮಾನ ಮನಸ್ಕರಿಗೆ ಸ್ವಾಗತವಿದೆ. ಈ ಬಗ್ಗೆ ಸ್ವಂತ ತೀರ್ಮಾನ ತೆಗೆದುಕೊಳ್ಳಲು ಶಕ್ತಿ ನನಗಿದೆ ಎಂದು ಸಂಸದ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ. ಅವರು ಭಾನುವಾರ ತವರು ನೆಲದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಗುಂಪು ಮಾಡುವುದು ನನ್ನ ಉದ್ದೇಶವಲ್ಲ. ಕಳೆದ ಚುನಾವಣೆಯಲ್ಲಿ ಗುಂಪುಕಾರಿಕೆಯ ಕಾರಣದಿಂದಾಗಿ ಬಿಜೆಪಿ ಅಧಿಕಾರ ಕಳೆದುಕೊಂಡಿತ್ತು. ಆದ್ದರಿಂದ ಗುಂಪುಗಾರಿಕೆ ರಾಜಕಾರಣ ಯಾವತ್ತೂ ಮಾಡುವುದಿಲ್ಲ. ನನ್ನದು ಬಿಜೆಪಿ ಗುಂಪು ಮಾತ್ರ ಎಂದು ಹೇಳಿದರು.

ಶುದ್ಧೀಕರಣಕ್ಕೆ ಒತ್ತು: ನಾನು ವೈಯಕ್ತಿಕವಾಗಿ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಶುದ್ಧೀಕರಣ ಎಂಬುದು ಮುಂದಿನ ಭಾಗವಾಗಿದೆ. ಶುದ್ಧೀಕರಣಗೊಂಡವರು ನಮ್ಮೊಂದಿಗೆ ಇರಬಹುದು. ಹಿಂದೆ ನಮ್ಮ ಪಕ್ಷಕ್ಕೆ ೧೭ ಜನ ಬಂದಿದ್ದರು. ಇವರಲ್ಲಿ ೧೪ ಜನರನ್ನು ಮಂತ್ರಿಗಳನ್ನಾಗಿ ಮಾಡಿದೆವು. ಅವರೆಲ್ಲಾ ಕಾಂಗ್ರೆಸ್, ಜೆಡಿಎಸ್‌ನಲ್ಲಿದ್ದವರು. ನಮ್ಮಲ್ಲಿ ಬಂದು ಎಲ್ಲವನ್ನೂ ಅನುಭವಿಸಿದರು. ಈಗಲೂ ದೇಶ ಬೇರೆ ಬೇರೆ ಭಾಗಗಳಿಂದ ಎಲ್ಲ ಪಕ್ಷಗಳಿಂದ ಮೋದಿ ಅವರು ಪ್ರಧಾನಿ ಆಗಬೇಕು ಎಂಬ ನಿಟ್ಟಿನಲ್ಲಿ ಜನ ಬಿಜೆಪಿ ಸೇರುತ್ತಿದ್ದಾರೆ. ನಾವು ಉದ್ದೇಶಕ್ಕೆ ಬೆಲೆ ಕೊಡುತ್ತೇವೆ ಆದರೆ ಸ್ವಾರ್ಥ ರಾಜಕಾರಣಕ್ಕೆ ನಾವು ಮಣೆ ಹಾಕುವುದಿಲ್ಲ ಎಂದರು.

ಮೋದಿ ಮಾದರಿ: ನರೇಂದ್ರ ಮೋದಿ ಅವರು ೧೦ ವರ್ಷದಿಂದ ಸ್ವಾರ್ಥರಹಿತ ರಾಜಕಾರಣ ಮಾಡಿದ್ದಾರೆ. ಅದು ದೆಹಲಿಗೆ ಮಾತ್ರ ಸೀಮಿತವಲ್ಲ. ಎಲ್ಲ ರಾಜ್ಯಗಳಿಗೂ ಹಂಚಿಕೆಯಾಗಬೇಕು. ಕಳಗಿನ ಹಂತದ ತನಕ ಮುಂದುವರಿಯಬೇಕು. ನರೇಂದ್ರ ಮೋದಿ ಹೇಳಿರುವಂತಹ ಪರಿವಾರವಾದ ಮುಕ್ತ, ಭ್ರಷ್ಟಾಚಾರ ಮುಕ್ತ, ಜಾತಿವಾದ ಮುಕ್ತ ರಾಜನೀತಿಯ ಪರಿಕಲ್ಪನೆ ಸಾಕಾರಗೊಳ್ಳಬೇಕು. ಈ ಬಾರಿಯ ಚುನಾವಣೆಯಲ್ಲಿಯೇ ಅದು ಆಗಬೇಕಿತ್ತು. ಆದರೆ ಚುನಾವಣೆ ಕಳೆದ ಬಳಿಕವಾದರೂ ಅದಾಗಬೇಕು. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಜವಾಬ್ದಾರಿ ಹೊತ್ತವರು ಪರಿವಾರವಾದ, ಭ್ರಷ್ಟಾಚಾರ, ಜಾತೀವಾದದಿಂದ ಹೊರತಾಗಿಲ್ಲದ ಕಾರಣ ಅದನ್ನು ಖಂಡಿತ ನಾವು ಅದರ ಶುದ್ಧೀಕರಣ ಮಾಡಲಿದ್ದೇವೆ ಎಂದು ಡೀವಿ ಹೇಳಿದರು.

ಸಿಎಂ ಸಿದ್ದರಾಮಯ್ಯರಿಂದ ಡ್ರಾಮಾ, ಅವರಿಗಿದು ಶೋಭೆಯಲ್ಲ: ಬಿ.ವೈ.ವಿಜಯೇಂದ್ರ

ನನ್ನ ಪ್ರಾಮಾಣಿಕತನ, ಸಚ್ಚಾರಿತ್ರ್ಯಕ್ಕೆ ಯಾರದ್ದೂ ಸರ್ಟಿಫಿಕೇಟ್‌ನ ಅಗತ್ಯ ನನಗಿಲ್ಲ. ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಪ್ರಾಮಾಣಿಕತೆ. ಸಚ್ಚಾರಿತ್ರ್ಯ ಅರ್ಥ ಕಳೆದುಕೊಳ್ಳುವ ರಾಜನೀತಿ ಇರುವುದು ನೋವಿನ ಸಂಗತಿ. ಚುನಾವಣೆಯ ತನಕ ಈ ನೋವನ್ನು ನುಂಗಿಕೊಳ್ಳುತ್ತೇನೆ ಎಂದು ಹೇಳಿದರು. ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ನಗರ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಮುಖಂಡರಾದ ಧರ್ಣಪ್ಪ ಗೌಡ, ಪವನ್ ಕುಮಾರ್ ಜೊತೆಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ