ಶಿವಸೇನೆ ಜತೆ ಮೈತ್ರಿಗೆ ಸಿದ್ಧವಾದ ಬಿಜೆಪಿ!

Published : Mar 04, 2020, 12:05 PM ISTUpdated : Mar 04, 2020, 05:02 PM IST
ಶಿವಸೇನೆ ಜತೆ ಮೈತ್ರಿಗೆ ಸಿದ್ಧವಾದ ಬಿಜೆಪಿ!

ಸಾರಾಂಶ

ಕ್ಷಣದಲ್ಲಿ ಸರ್ಕಾರವು ಮುಸ್ಲಿಮರಿಗೆ ಶೇ.5 ಮೀಸಲು ನೀಡಲಿದೆ: ಕಾಂಗ್ರೆಸ್, ಎನ್‌ಸಿಪಿ ಘೋಷಣೆ| ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿ ಮುರಿದರೆ ಶಿವಸೇನೆಗೆ ಬೆಂಬಲಿಸಲು ಸಿದ್ಧ: ಬಿಜೆಪಿ| 

ಮುಂಬೈ[ಮಾ.04]: ಮುಸ್ಲಿಂ ಮೀಸಲಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ನ ಮಹಾಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರ ಲಾಭ ಗಿಟ್ಟಿಸಿಕೊಳ್ಳಲು ಹೊರಟಿರುವ ಬಿಜೆಪಿ, ‘ಕಾಂಗ್ರೆಸ್‌ ಹಾಗೂ ಎನ್‌ಸಿಪಿಗಳು ಸರ್ಕಾರದಿಂದ ಹೊರಬರಲು ತೀರ್ಮಾನಿಸಿದರೆ ಶಿವಸೇನೆ ಜತೆ ಮೈತ್ರಿಗೆ ನಾವು ಸಿದ್ಧ’ ಎಂದಿದೆ.

ಶಿಕ್ಷಣದಲ್ಲಿ ಸರ್ಕಾರವು ಮುಸ್ಲಿಮರಿಗೆ ಶೇ.5 ಮೀಸಲು ನೀಡಲಿದೆ ಎಂದು ಎನ್‌ಸಿಪಿ-ಕಾಂಗ್ರೆಸ್‌ ಹೇಳಿವೆ. ಆದರೆ ಅಂಥ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ. ಈ ಬಗ್ಗೆ ಹಿರಿಯ ಬಿಜೆಪಿ ಮುಖಂಡ ಸುಧೀರ್‌ ಮುಂಗಂಟಿವಾರ್‌ ಮಂಗಳವಾರ ಮಾತನಾಡಿ, ‘ಧರ್ಮಾಧರಿತ ಮೀಸಲು ಸಲ್ಲದು. ಶಿವಸೇನೆ ನಿಲುವು ಸರಿಯಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌-ಎನ್‌ಸಿಪಿಗಳು ಸರ್ಕಾರದಿಂದ ಹೊರಬಂದರೆ ಶಿವಸೇನೆ ಸರ್ಕಾರಕ್ಕೆ ನಾವು ಬೆಂಬಲಿಸಲಿದ್ದೇವೆ’ ಎಂದಿದ್ದಾರೆ.

ಬಿಜೆಪಿ ಈ ಮಾತಿನಂತೆ ಶಿವಸೇನೆ ಕೈ ಹಾಗೂ ಎನ್‌ಸಿಪಿ ಜೊತೆಗಿನ ಮೈತ್ರಿ ಮುರಿದು ಬಿಜೆಪಿ ಜತೆ ಕೈ ಜೋಡಿಸುತ್ತಾ? ಕಾದು ನೋಡಬೇಕಷ್ಟೆ

ಮಾರ್ಚ್ 4ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!