
ತುಮಕೂರು (ಫೆ.26): ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ವಾಮಾಚಾರ ನಡೆದಿತ್ತಾ? ಇಂತಹದ್ದೊಂದು ಸಂದೇಹವನ್ನು ಸ್ವತಃ ಕೆ.ಎನ್. ರಾಜಣ್ಣ ಹುಟ್ಟು ಹಾಕಿದ್ದಾರೆ.
ನನಗೂ, ಹಾಸನಕ್ಕೂ ಏನ್ ಸಂಬಂಧ ಗೊತ್ತಿಲ್ಲ. ನನಗೆ ಹಾಸನದ ಉಸ್ತುವಾರಿ ಕೊಟ್ಟಿದ್ದಾರೆ. ಕೆಲವರು ನನ್ನ ಅಭಿಮಾನಿಗಳು ಹೆದರಿಕೊಂಡು ನೀವು ಹಾಸನಕ್ಕೆ ಹೋಗುವುದು ಬೇಡ, ಅಲ್ಲಿ ವಾಮಾಚಾರ ಮಾಡುತ್ತಾರೆ. ಹೋಗಬೇಡಿ ಅಂದರು. ನಾವು ಉಗ್ರ ನರಸಿಂಹ ಸ್ವಾಮಿ ಭಕ್ತರು. ಹಾಗಾಗಿ, ನಮಗೆ ಯಾವ ವಾಮಾಚಾರನೂ ತಾಗುವುದಿಲ್ಲ. ಹಾಗಂತ ವಾಮಾಚಾರ ತಾಗುವುದಿಲ್ಲ ಅಂದುಕೊಳ್ಳಬೇಡಿ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದರು.
‘ನಾನು ಹಾಸನಕ್ಕೆ ಮೊದಲ ದಿನ ಹೋಗುತ್ತಿದ್ದಾಗ ಕುಣಿಗಲ್ನಲ್ಲಿ ಪಟಾಕಿ ಸಿಡಿದು, ಕಣ್ಣಿಗೆ ಏಟಾಗಿತ್ತು. ಡಾಕ್ಟರ್ ಕಣ್ಣು ಕ್ಲೀನ್ ಮಾಡಿ ಹಾಸನಕ್ಕೆ ಹೋಗುವುದು ಬೇಡ ಎಂದಿದ್ದರು. ಎರಡೂ ಕಣ್ಣು ಹೋದರೂ ಪರವಾಗಿಲ್ಲ ಎಂದು ಧೈರ್ಯದಿಂದ ಹೋದೆ’ ಎಂದರು.
ಆಗ ನಾನು, ಯಾರಾದರೂ ವಾಮಾಚಾರ ಮಾಡುವವರು ಇದ್ದರೆ ಸ್ವತಃ ನಾನೇ ಕೂತುಕೊಳ್ಳುತ್ತೇನೆ. ನನ್ನ ಮೇಲೆ ವಾಮಾಚಾರ ಮಾಡಿ ಅಂದೆ. ಹೆದರಿ ಹಾಸನಕ್ಕೆ ಬಂದಿಲ್ಲ ಎಂಬ ಸಂದೇಶ ಹೋಗುತ್ತದೆ ಅಂತ ಹೇಳಿ ಹಠದಿಂದ ಹೋದೆ’ ಎಂದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.