Lok Sabha Election 2024: ಚಿತ್ರದುರ್ಗದಲ್ಲಿ ಸೋದರನ ನಾಮಪತ್ರ ವಾಪಸ್‌ ತೆಗೆಸುವೆ: ರೇಣುಕಾಚಾರ್ಯ

By Kannadaprabha NewsFirst Published Apr 7, 2024, 10:43 AM IST
Highlights

ನಮ್ಮ ಕುಟುಂಬಕ್ಕೆ ಪರಿಶಿಷ್ಟ ಜಾತಿಯ ಪ್ರಮಾಣಪತ್ರದ ಅವಶ್ಯಕತೆ ಇಲ್ಲ. ಈಗಾಗಲೇ ನಾನು ಚಿತ್ರದುರ್ಗ ಕ್ಷೇತ್ರದ ನಮ್ಮ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ ಜೊತೆಗೂ ಮಾತನಾಡಿದ್ದೇನೆ ಎಂದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ 

ದಾವಣಗೆರೆ(ಏ.07):  ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರಕ್ಕೆ ತಮ್ಮ ಸಹೋದರ ಎಂ.ಪಿ.ದಾರುಕೇಶ್ವರಯ್ಯ ಸಲ್ಲಿಸಿರುವ ನಾಮಪತ್ರವನ್ನು ವಾಪಸ್ ತೆಗೆಸುತ್ತೇನೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ನಗರದ ಖಾಸಗಿ ಹೊಟೆಲ್‌ನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ ಅಗರವಾಲ್ ಜೊತೆಗಿನ ಸಂಧಾನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ನಾಮಪತ್ರ ಸಲ್ಲಿಸಿದ್ದು, ಆ ನಾಮಪತ್ರವನ್ನು ವಾಪಸ್ ತೆಗೆಸುವೆ ಎಂದರು. 

ಆ ಪುಣ್ಯಾತ್ಮನಿಗೆ ನಾಚಿಕೆ ಮಾನ ಮರ್ಯಾದೇ ಏನೂ ಇಲ್ಲ: ಅಮಿತ್ ಶಾ ವಿರುದ್ಧ ಸಿಎಂ ಕಿಡಿ

ನಮ್ಮ ಕುಟುಂಬಕ್ಕೆ ಪರಿಶಿಷ್ಟ ಜಾತಿಯ ಪ್ರಮಾಣಪತ್ರದ ಅವಶ್ಯಕತೆ ಇಲ್ಲ. ಈಗಾಗಲೇ ನಾನು ಚಿತ್ರದುರ್ಗ ಕ್ಷೇತ್ರದ ನಮ್ಮ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ ಜೊತೆಗೂ ಮಾತನಾಡಿದ್ದೇನೆ ಎಂದರು.

click me!