ಹೀಗೆ ಮಾಡದಿದ್ರೆ ನನ್ನ ಯಡಿಯೂರಪ್ಪ ಅಂತಾ ಕರೆಯಬೇಡಿ: ಸಿದ್ದುಗೆ ಸಿಎಂ ಓಪನ್ ಚಾಲೆಂಜ್

Published : Mar 08, 2021, 06:10 PM IST
ಹೀಗೆ ಮಾಡದಿದ್ರೆ ನನ್ನ ಯಡಿಯೂರಪ್ಪ ಅಂತಾ ಕರೆಯಬೇಡಿ: ಸಿದ್ದುಗೆ  ಸಿಎಂ ಓಪನ್ ಚಾಲೆಂಜ್

ಸಾರಾಂಶ

ಬಜೆಟ್​ ಮಂಡನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೊತೆಗೊಂದು ಸವಾಲು ಹಾಕಿದ್ದಾರೆ.

ಬೆಂಗಳೂರು, (ಮಾ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಮಧ್ಯಾಹ್ನ 12.05ಕ್ಕೆ ಬಜೆಟ್ ಭಾಷಣ ಆರಂಭಿಸಿದ್ದು, 105 ಪುಟಗಳನ್ನು ಬರೋಬ್ಬರಿ ಎರಡು ತಾಸಲ್ಲಿ ಓದಿ ಮುಗಿಸಿದರು.

ಬಜೆಟ್​ ಮಂಡನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಸಂಕಷ್ಟ ಕಾಲದಲ್ಲಿಯೂ ಒಂದು ರೂಪಾಯಿ ತೆರಿಗೆ ಹೆಚ್ಚಿಸದ ಐತಿಹಾಸಿಕ ಬಜೆಟ್​ ಇದು ಎಂದು ಸಮರ್ಥಿಸಿಕೊಂಡರು. 

ಮಾಜಿ ಸಿಎಂ ಬೇಡಿಕೆ ಈಡೇರಿಸಿದ ಬಿಎಸ್‌ವೈ: ಬಜೆಟ್‌ನಲ್ಲಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್

ಈ ವೇಳೆ ವಿಪಕ್ಷ ನಾಯಕರ ಸದನ ಬಹಿಷ್ಕಾರ ವಿಚಾರಕ್ಕೆ ಉತ್ತರಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ದೇಶದ ಇತಿಹಾಸದಲ್ಲಿ ಬಜೆಟ್ ಅಧಿವೇಶನ ಬಹಿಷ್ಕಾರ ಮಾಡಿರುವ ನಿದರ್ಶನ ಇದೆಯಾ..? ಫೇಸ್​​ ಮಾಡಲು ಯೋಗ್ಯತೆ ಇಲ್ಲದೇ ಹೋಗಿದ್ದಾರೆ. ಮುಂದಿನ ಚುನಾವಣೆಯಲ್ಲಿ 130-35 ಸ್ಥಾನ ಗೆಲ್ಲುವ ಮೂಲಕ ಅವರನ್ನು ಶಾಶ್ವತವಾಗಿ ವಿಪಕ್ಷ ಸ್ಥಾನದಲ್ಲಿ ಕೂರಿಸುತ್ತೇನೆ. ಹೆಚ್ಚು ಸ್ಥಾನ ಗೆಲ್ಲಲಿಲ್ಲ ಎಂದರೇ ನನ್ನನ್ನು ಯಡಿಯೂರಪ್ಪ ಅಂತಾನೇ ಕರೆಯಬೇಡಿ ಎಂದು ಸವಾಲು ಹಾಕಿದರು.

ಮುಂದಿನ ಚುನಾವಣೆಗೆ ಶಾಶ್ವತವಾಗಿ ಸಿದ್ದರಾಮಯ್ಯ ಅವರನ್ನು ವಿಪಕ್ಷದಲ್ಲೇ ಕೂರುವಂತೆ ಮಾಡುತ್ತೇನೆ. ಸಿದ್ದರಾಮಯ್ಯ ಶಾಶ್ವತವಾಗಿ ವಿಪಕ್ಷ ಸ್ಥಾನದಲ್ಲೇ ಕೂರಬೇಕು. ಅವರಿಗೆ ಪ್ರಶ್ನೆ ಮಾಡುವ ನೈತಿಕತೆ ಏನಿದೆ? ಇತ್ತೀಚೆಗೆ ಸಿದ್ದರಾಮಯ್ಯ ಅವರಿಗೆ ಮಾನಸಿಕವಾಗಿ ಸಮಸ್ಯೆಯಾಗಿದೆ. ಅವರು ಏನು ಮಾತನಾಡುತ್ತಿದ್ದಾರೆ ಅವರಿಗೆ ಗೊತ್ತಿಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಏನು ನಮ್ಮ ಬಗ್ಗೆ ಹೇಳೋದು? ಅವರು ಸದನಕ್ಕೆ ಬರಲಿ, ನಾವು ಅವರ ಕಾಲದಲ್ಲಿ ಏನೇನು ಆಗಿದೆ ಎಂದು ಸದನದಲ್ಲಿ ಬಿಚ್ಚಿಡುತ್ತೇವೆ. ಅಲ್ಲದೇ ಸಿಡಿ ಬಗ್ಗೆ ಸದನದಲ್ಲಿ ಚರ್ಚೆ ಮಾಡಿ ವಿರೋಧ ಪಕ್ಷಗಳು ಹೇಗೆ ಹೇಳುತ್ತಾರೆ ಅದರಂತೆ ತನಿಖೆ ಮಾಡಿಸಲು ನಾನು ಸಿದ್ಧವದ್ದೇನೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ