ಇದೀಗ ಬಂದ ಸುದ್ದಿ: ಮತ್ತೊಂದು ಹೆಜ್ಜೆ ಮುಂದಿಟ್ಟ CM, ಈ ತಿಂಗಳ ಅಂತ್ಯಕ್ಕೂ ಇಲ್ಲ ಸಂಪುಟ ವಿಸ್ತರಣೆ

Published : Jan 27, 2020, 09:51 PM IST
ಇದೀಗ ಬಂದ ಸುದ್ದಿ: ಮತ್ತೊಂದು ಹೆಜ್ಜೆ ಮುಂದಿಟ್ಟ CM, ಈ ತಿಂಗಳ ಅಂತ್ಯಕ್ಕೂ ಇಲ್ಲ ಸಂಪುಟ ವಿಸ್ತರಣೆ

ಸಾರಾಂಶ

ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂತಾ ಗೊತ್ತಿಲ್ಲ. ತಿಂಗಳಾಂತ್ಯಕ್ಕೆ ವಿಸ್ತರಣೆ ಪಕ್ಕಾ ಎಂದು ಕೆಲ ನೂತನ ಶಾಸಕರು ಹುಮ್ಮಸ್ಸಿನಲ್ಲಿದ್ದಾರೆ.  ಆದ್ರೆ, ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಸಂಬಂಧ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಈ ತಿಂಗಳು ಸಂಪುಟ ವಿಸ್ತರಣೆಯಾಗುವುದಿಲ್ಲ ಎನ್ನುವುದು ಪಕ್ಕಾ ಆಗಿದೆ.

ಬೆಂಗಳೂರು, [ಜ.27]: ಸಂಪುಟ ವಿಸ್ತರಣೆ ಯಾವಾಗ ಎಂದು ಚಾತಕ ಪಕ್ಷಿಗಳಂತೆ ಕಾದಿದ್ದವರಿಗೆ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದ್ದ ಬಿಎಸ್‌ವೈ ದಿಢೀರನೇ ತಮ್ಮ ವರಸೆ ಬದಲಿಸಿದ್ದಾರೆ.

ಅಳೆದು ತೂಗಿ, ಸಂಪುಟ ವಿಸ್ತರಣೆ ಪಟ್ಟಿ ಫೈನಲ್ ಮಾಡಿರುವ ಸಿಎಂ ಯಡಿಯೂರಪ್ಪ, ಈ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆ ಎಂದಿದ್ದರು. ಆದ್ರೆ, ಇದೀಗ ಬಿಎಸ್ ವೈ ಇದೀಗ ದಿಢೀರ್ ವರಸೆ ಬದಲಿಸಿದ್ದರಿಂದ ಮುಂದಿನ ತಿಂಗಳು ಅಂದ್ರೆ ಫೆಬ್ರವರಿ ಮೊದಲ ವಾರ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳಿವೆ. 

ಮಂತ್ರಿಗಿರಿ ಕನಸು ಕಾಣುತ್ತಿರುವರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ

ದೆಹಲಿಗೆ ಹೋಗಲು ಬಿಎಸ್ವೈ ತಯಾರಿ 
ಹೌದು...ಯಡಿಯೂರಪ್ಪ ಅವರು ಈ ಬಾರಿ ದೆಹಲಿಗೆ ಹೋಗದೇ ಸಂಪುಟ ವಿಸ್ತರಣೆ ಮಾಡುತ್ತಾರೆ ಎನ್ನಲಾಗಿತ್ತು. ಆದ್ರೆ, ಇದೀಗ ಬಿಎಸ್ ವೈ ದೆಹಲಿಗೆ ಹೋಗಲು ಎಲ್ಲಾ ತಯಾರಿ ನಡೆಸಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

ಜನವರಿ 30 ರಂದು ದೆಹಲಿ ವಿಮಾನ ಏರಲು ಯಡಿಯೂರಪ್ಪ ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನ ರದ್ದು ಮಾಡಲು ಸೂಚಿಸಿದ್ದಾರೆ,

ಜ.30ಕ್ಕೆ ಹೊರಟು 31 ರಂದು ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಚರ್ಚೆ ನಡೆಸುವ ಬಗ್ಗೆ ಬಿಎಸ್ವೈ ಚಿಂತನೆ ನಡೆಸಿದ್ದಾರೆ. ಒಂದು ವೇಳೆ ಹೈಕಮಾಂಡ್ ಓಕೆ ಎಂದರೆ ಫೆಬ್ರವರಿ ಮೊದಲ ವಾರದಲ್ಲಿ ವಿಸ್ತರಣೆ ಆಗಲಿದೆ.
  
ಇಲ್ಲದಿದ್ದರೆ ದೆಹಲಿ ಚುನಾವಣೆ ವರೆಗೂ ಸಂಪುಟ ಸರ್ಕಸ್ ನಡೆಯಲಿದೆ. ಎಲ್ಲದಕ್ಕೂ ಸ್ಪಷ್ಟ ಉತ್ತರ ಸಿಗುವುದು ಸಿಎಂ ದೆಹಲಿ ಭೇಟಿ ಬಳಿಕವಷ್ಟೆ. ಅಲ್ಲಿವರೆಗೂ ಕಾದು ನೋಡಬೇಕಷ್ಟೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಪಿಎಸ್‌ ಶಾಲೆಗಾಗಿ ಯಾವುದೇ ಕನ್ನಡ ಶಾಲೆ ಮುಚ್ಚುವುದಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ
ಸಿಎಂ ಬದಲಿಗೆ ವರಿಷ್ಠರು ಸದ್ಯ ಒಪ್ಪಿಲ್ಲ : ಯತೀಂದ್ರ