
ಬೆಂಗಳೂರು, [ನ.24]: ಭಾರತ್ ಮತಾಕೀ ಜೈ ಎಂದು ಹೇಳುವುದರಲ್ಲಿ ಎಲ್ಲಿ ತಪ್ಪಾಗುತ್ತೆ ಎಂದು ದಿನ ಕನ್ನಡಿ ಮುಂದೆ ನಿಂತು ಪ್ರಾಕ್ಟೀಸ್ ಮಾಡುತ್ತಿದ್ದೇನೆ ಎಂದು ಯಶವಂತಪುರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಯಶವಂತಪುರದಲ್ಲಿ ಇಂದು [ಭಾನುವಾರ] ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜತೆ ಬಿಜೆಪಿ ಅಭ್ಯೃರ್ಥಿ ಎಸ್.ಟಿ.ಸೋಮಶೇಖರ್ ಭರ್ಜರಿ ಪ್ರಚಾರ ಮಾಡಿದರು.
ಸ್ಟಾರ್ ಹೋಟೆಲ್ ರೂಂನಲ್ಲಿ ಕಡತಕ್ಕೆ ಸಹಿ ಪಡೆಯುತ್ತಿದ್ಳು ನಟಿ! ಸೋಮಶೇಖರ್ ಹಚ್ಚಿದ್ರು ಕಿಡಿ
ಈ ವೇಳೆ ಮಾತನಾಡಿದ ಸೋಮಶೇಖರ್, ಪಕ್ಷಕ್ಕೆ [ಬಿಜೆಪಿ] ಸೇರುವಾಗ ನಾವು ಹೇಗೆ ಇರಬೇಕು ಎಂಬುದನ್ನು ಕಲಿಯಲು ನಳೀನ್ ಕುಮಾರ್ ಕಟೀಲ್ ನಮಗೆ ಪುಸ್ತಕ ಕೊಟ್ಟಿದ್ದಾರೆ ಎಂದರು.
ಒಬ್ಬರು ಫೋನ್ ಮಾಡಿ ಹರಿ ಓಂ ಅಂತಾರೆ. ಅದಕ್ಕೆ ನಾನು ಸ್ವಲ್ಪ ಎಚ್ಚರಿಕೆಯಿಂದ ಹೇಗೆ ಇರಬೇಕು ಎಂದು ಎಲ್ಲವನ್ನೂ ಕಲಿಯುತ್ತಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿಗೆ ನಾನು ದ್ರೋಹ ಮಾಡುವುದಿಲ್ಲ. ಪಕ್ಷದಲ್ಲಿ ನಾನು ಶಿಸ್ತಿನಿಂದ ಇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನರ್ಹ ಶಾಸಕರು ಬಿಜೆಪಿ ಸೇರುವ ಬಗ್ಗೆ ಪರ-ವಿರೋಧಗಳ ವ್ಯಕ್ತವಾಗಿದ್ದು, ಅನರ್ಹ ಶಾಸಕರುಗಳಿಗೆ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಪಾಲಿಸಲು ಆಗುವುದಿಲ್ಲ ಎನ್ನುವ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸೋಮಶೇಖರ್ ಅವರು ಈ ರೀತಿಯ ಮಾತುಗಳನ್ನಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.