ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನು ಯೋಗೇಶ್ವರ್ ಸೋಲಿಸ್ತಾರೆ: ಹೀಗೊಂದು ಭವಿಷ್ಯ

Published : Feb 28, 2021, 03:38 PM IST
ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನು ಯೋಗೇಶ್ವರ್ ಸೋಲಿಸ್ತಾರೆ: ಹೀಗೊಂದು ಭವಿಷ್ಯ

ಸಾರಾಂಶ

ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಕುಮಾರಸ್ವಾಮಿ ಮತ್ತು ಸಿ.ಪಿ.ಯೋಗೇಶ್ವರ್ ನಡುವಿನ ರಾಜಕೀಯ ಫೈಟ್ ಮಧ್ಯೆ ಡಿಸಿಎಂ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, (ಫೆ.28): ರಾಮನಗರದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವರ್ಸಸ್ ಸಚಿವ ಸಿ. ಪಿ. ಯೋಗೇಶ್ವರ್ ನಡುವೆ ಪ್ರತಿಷ್ಠೆಯ ಸಂಘರ್ಷ ಶುರುವಾಗಿದೆ. ಇನ್ನೂ ವಿಧಾನಸಭಾ ಚುನಾವಣೆ ದೂರ ಇದೆ. ಆಗಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ರಾಜಕೀಯ ಆರೋಪ-ಪ್ರತ್ಯಾರೋಪಗಳ ಜೋರಾಗಿವೆ.

ಹೌದು...ಈಗಾಗಲೇ ಸಚಿವ ಸಿ.ಪಿ. ಯೋಗೇಶ್ವರ್ ಅವರು ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹಾಗೂ ಯೋಗೇಶ್ವರ್ ನಡುವೆ ಹಣಾಹಣಿ ನಡೆಯುವುದು ಪಕ್ಕಾ ಆದಂತಾಗಿದೆ.

ಇದರ ಮಧ್ಯೆ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ಭವಿಷ್ಯ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ ಯೋಗೇಶ್ವರ್​, ಕುಮಾರಸ್ವಾಮಿಯವರನ್ನ ಸೋಲಿಸುತ್ತಾರೆ ಎಂದು ಭವಿಷ್ಯ ನುಡಿದ್ದಿದ್ದಾರೆ.

'ಸಿ.ಪಿ. ಯೋಗೇಶ್ವರ್‌ ರಾಜ್ಯ ರಾಜಕಾರಣದಲ್ಲಿ ಗೆಲ್ಲುವ ಕುದುರೆ'

ರಾಮನಗರದಲ್ಲಿ ಹೆಚ್‌ಡಿ ಕುಮಾರಸ್ವಾಮಿ ವರ್ಸಸ್​ ಸಿ.ಪಿ.ಯೋಗೇಶ್ವರ್​ ಸಂಘರ್ಷದ ವಿಚಾರವಾಗಿ ಮಾತನಾಡಿದ ಅಶ್ವಥ್​ ನಾರಾಯಣ್,​ ಮುಂದಿನ ಚುನಾವಣೆಯಲ್ಲಿ ಯೋಗೇಶ್ವರ್​ ಜೆಡಿಎಸ್​ನ ಎದುರಾಳಿ. ಅವರು ಕುಮಾರಸ್ವಾಮಿಯನ್ನ ಸೋಲಿಸುತ್ತಾರೆ. ಕುಮಾರಸ್ವಾಮಿ ವಿರುದ್ಧ ಅವರು ನೀಡಿರುವ ಹೇಳಿಕೆಗಳು ಸ್ಪಷ್ಟವಾಗಿದೆ ಎಂದರು.

ಕೇರಳ ಚುನಾವಣೆಯ ಭವಿಷ್ಯ ನುಡಿದ ಡಿಸಿಎಂ
ಇದೇ ವೇಳೆ ಕೇರಳದಲ್ಲಿ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡಿ ಡಿಸಿಎಂ, ಕೇರಳದಲ್ಲಿ ಎಲ್‌ಡಿಎಫ್​ ಮತ್ತು ಯುಡಿಎಫ್​ ಪಕ್ಷಗಳು ವೋಟ್​ ಬ್ಯಾಂಕ್​ ರಾಜಕಾರಣ ಮಾಡುತ್ತಿವೆ. ನಮ್ಮ ಸಂಸ್ಕೃತಿಗೆ ವಿರುದ್ಧವಾಗಿ ರಾಜಕಾರಣ ಮಾಡುತ್ತಿವೆ. ಕಮ್ಯುನಿಸ್ಟರು ದೇಶದೆಲ್ಲೆಡೆ ಅಧಿಕಾರ ಕಳೆದುಕೊಳ್ತಿದ್ದಾರೆ. ಕೇರಳದಲ್ಲೂ ಕಮ್ಯುನಿಸ್ಟರು ನೆಲೆ ಕಳೆದುಕೊಳ್ಳೋದು ನಿಶ್ಚಿತ ಎಂದು ಹೇಳಿದರು.

 ಎಲ್‌ಡಿಎಫ್​, ಯುಡಿಎಫ್​ ಪಕ್ಷಗಳಿಗೆ ಭವಿಷ್ಯ ಇಲ್ಲ, ಕೇರಳದಲ್ಲಿ ನಮ್ಮ ಪಕ್ಷದ ಪರ ಅಲೆ ಇದೆ. ನಮ್ಮ ಪಕ್ಷ ಕೇರಳದಲ್ಲಿ ಬೇರೂರುತ್ತದೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷ ಉತ್ತಮ ಸಾಧನೆ ಮಾಡಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!