ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ ಜಾಹೀರಾತು ಕೊಟ್ಟಿದ್ರೀ: ಸಚಿವ ಪರಮೇಶ್ವರ್

Published : Aug 10, 2024, 07:33 PM IST
ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ ಜಾಹೀರಾತು ಕೊಟ್ಟಿದ್ರೀ: ಸಚಿವ ಪರಮೇಶ್ವರ್

ಸಾರಾಂಶ

ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ (ಬಿಜೆಪಿ) ಜಾಹೀರಾತು ಕೊಟ್ಟಿದ್ರೀ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕುಟುಕಿದರು. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ದೇವೇಗೌಡರ ಕುಟುಂಬದ ಭೂ ಕಬಳಿಕೆ ಜಾಹಿರಾತು ವಿಚಾರ ಪ್ರಸ್ತಾಪಿಸಿದರು.

ಮೈಸೂರು (ಆ.10): ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ (ಬಿಜೆಪಿ) ಜಾಹೀರಾತು ಕೊಟ್ಟಿದ್ರೀ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕುಟುಕಿದರು. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ದೇವೇಗೌಡರ ಕುಟುಂಬದ ಭೂ ಕಬಳಿಕೆ ಜಾಹಿರಾತು ವಿಚಾರ ಪ್ರಸ್ತಾಪಿಸಿದ ಅವರು, ನೀವೇ ನೀಡಿದ ಪ್ರಕಟಣೆಯಲ್ಲಿ ದೇವೇಗೌಡರ ಕುಟುಂಬದ ಭೂಕಬಳಿಕೆ ಎಂದು ಹೇಳಿದ್ದೀರಿ. ಕುಮಾರಸ್ವಾಮಿಗೆ ಮತ್ತೊಬ್ಬರ ಬಗ್ಗೆ ಮಾತನಾಡುವ ನೈತಿಕತೆ ಬಗ್ಗೆ ಬಿಜೆಪಿಯವರೇ ಪ್ರಶ್ನಿಸಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆ, ಪಾದಯಾತ್ರೆ ಮಾಡೋದು ನಿಮ್ಮ ಹಕ್ಕು. ನಿಮ್ಮ ಹೋರಾಟಕ್ಕೆ ನಮ್ಮ ಅಭ್ಯಂತರ ಏನಿಲ್ಲ. ಆದರೆ, ಯಾವ ಕಾರಣಕ್ಕೆ ನಿಮ್ಮ ಹೋರಾಟ ಎಂಬುದನ್ನು ತಿಳಿಸಿ. ನಾವು ಅನೇಕ ಪಾದಯಾತ್ರೆ, ಹೋರಾಟಗಳನ್ನು ಮಾಡಿದ್ದೇವೆ. ನಾವು ಜನರ ಅಭಿವೃದ್ಧಿ, ನಾಡಿನ ಒಳಿತಿಗಾಗಿ ಮಾಡಿದ್ದೇವೆ. ಸಿಎಂ ವಿರುದ್ಧ ಆರೋಪ ಮಾಡಲಿಕ್ಕೆ ನಿಮ್ಮಲ್ಲಿ ದಾಖಲಾತಿ ಇದ್ದರೆ ತೋರಿಸಿ ಎಂದು ಅವರು ಸವಾಲು ಹಾಕಿದರು.

ಬಿಜೆಪಿ- ಜೆಡಿಎಸ್ ಪಕ್ಷದವರು ಸರ್ಕಾರ ಉರುಳಿಸುವ ಮಾತನಾಡಿದ್ದಾರೆ. ಪಾದಯಾತ್ರೆ ಮಾಡುತ್ತಿರುವ ಅವರಿಗೆ ಕೆಲ ಪ್ರಶ್ನೆಗಳನ್ನು ಕೇಳಬೇಕಿದೆ. ಜನರಿಗಾಗಿ, ರಾಜ್ಯದ ಸಂಪತ್ತು ಉಳಿಸಲು ನಾವು ಪಾದಯಾತ್ರೆ ಮಾಡಿದ್ದೇವೆ. ಆದರೆ, ವಿಪಕ್ಷಗಳ ಪಾದಯಾತ್ರೆ ಕ್ಷುಲ್ಲಕ ಕಾರಣಗಳಿಗಾಗಿ ನಡೆದಿದೆ. ನಿಮ್ಮ ಮೇಲೆ ಅನೇಕ ಹಗರಣಗಳಿವೆ. 25 ಹೆಚ್ಚು ಹಗರಣ ವಿಪಕ್ಷಗಳ ಮೇಲಿವೆ ಎಂದು ಅವರು ವಾಗ್ದಾಳಿ ನಡೆಸಿದರು.

52 ಕೋಟಿ ಆಸ್ತಿ ಘೋಷಿಸಿದ್ದರೂ ಸ್ವಂತ ಮನೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ನಟ ಚೇತನ್!

ವಾಲ್ಮೀಕಿ ನಿಗಮದ ಹಗರಣ ಹೊರಬಂದ ನಂತರ ನಾವೇ ಕ್ರಮ ತೆಗೆದುಕೊಂಡಿದ್ದೇವೆ. ಆದರೂ ಸಿಬಿಐ, ಇಡಿ ದುರುಪಯೋಗ ಮಾಡಿಕೊಂಡು ಸವಾರಿ ಮಾಡಿದ್ದಾರೆ ಎಂದು ಅವರು ಕಿಡಿಕಾರಿದರು. ಜಿಎಸ್ಟಿ, ತೆರಿಗೆ ಹಣ, ಅತಿವೃಷ್ಟಿ ಪರಿಹಾರ ಕೇಂದ್ರ ಸರ್ಕಾರ ಕೊಡಲಿಲ್ಲ. ಸುಪ್ರೀಂಕೋರ್ಟ್ ಚಾಟಿ ಬೀಸಿದ ಬಳಿಕ ಕೊಟ್ಟಿದ್ದಾರೆ. 5100 ಕೋಟಿ ರು. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಡುವುದಿಲ್ಲ ಎಂದು ಹೇಳಿದೆ. ಇದು ಕರ್ನಾಟಕದ ಮಟ್ಟಿಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ