ಕುಮಾರಸ್ವಾಮಿ ಯಾವ ಸೀಮೆ ಲೀಡರ್, ಗುರುವಿನ ವಿರುದ್ಧ ಮಾಜಿ ಶಿಷ್ಯ ವಾಗ್ದಾಳಿ

Published : Jan 31, 2021, 04:56 PM ISTUpdated : Jan 31, 2021, 05:00 PM IST
ಕುಮಾರಸ್ವಾಮಿ ಯಾವ ಸೀಮೆ ಲೀಡರ್, ಗುರುವಿನ ವಿರುದ್ಧ ಮಾಜಿ ಶಿಷ್ಯ ವಾಗ್ದಾಳಿ

ಸಾರಾಂಶ

ಯಾವ ಸೀಮೆ ಲೀಡರ್ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವರ ಮಾಜಿ ಶಿಷ್ಯ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆ, (ಜ.31): ಕುಮಾರಸ್ವಾಮಿ ಯಾವ ಸೀಮೆ ಲೀಡರ್ ಎಂದು ಮಾಜಿ ಶಿಷ್ಯ ಶಾಸಕ ಜಮೀರ್ ಅಹ್ಮದ ಖಾನ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯ ಕೆರೂರ ಗ್ರಾಮದಲ್ಲಿ ಇಂದು (ಭಾನುವಾರ) ಮಾತನಾಡಿದ ಜಮೀರ್, 2006ರಲ್ಲಿ ಎಚ್.ಡಿ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಒಳ್ಳೆಯ ಆಡಳಿತ ಕೊಟ್ರು. ಅದನ್ನು ಒಪ್ಪಿಕೊಳ್ಳುತ್ತೇನೆ. ಈಗ ಕುಮಾರಸ್ವಾಮಿ ಯಾವ ಸೀಮೆ ಲೀಡರ್ ಎಂದು ಕಿಡಿಕಾರಿದರು.

ಜೆಡಿಎಸ್ ಪಕ್ಷ ಎಲ್ಲಿದೆ. ಜೆಡಿಎಸ್ ಕೋಮುವಾದಿ ಪಕ್ಷದೊಂದಿಗೆ ಸೇರಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ, ಉಪಸಭಾಪತಿ ಆಯ್ಕೆಯಲ್ಲಿ ಬಿಜೆಪಿ ಬೆಂಬಲಿಸಿದ್ದಾರೆ. ಯಾವ ಸೆಕ್ಯುಲರ್ ಪಕ್ಷ ಇದು ಎಂದು ಪ್ರಶ್ನಿಸಿದರು.

ಮೈತ್ರಿ ಹಳಸಿದರೂ ಮುಗಿಯದ ಕುಮಾರಸ್ವಾಮಿ ಗೋಳಾಟ..

ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದಾಗ 59ಸೀಟು ಬಂದಿತ್ತು.  ಈಗ ಕುಮಾರಸ್ವಾಮಿ ಲೀಡರ್ ಅಂತಾರಲ್ಲ. ಈಗ ಆ ನಂಬರ್ ರೀಚ್ ಮಾಡೋಕೆ ಆಗಿಲ್ಲ. ಸಿದ್ದರಾಮಯ್ಯ ಇದ್ದಾಗಿನ ಜೆಡಿಎಸ್ ಶಾಸಕರ ನಂಬರ್ ರಿಚ್ ಮಾಡೋಕೆ ಆಗ್ಲಿಲ್ಲ ಎಂದು ವ್ಯಂಗ್ಯವಾಡಿದರು.

ಇಬ್ರಾಹಿಂಗೆ ಜಮೀರ್ ಟಾಂಗ್
ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಏನು ಮಾಡಿಲ್ಲ ಅಂತಿದ್ದಾರಲ್ಲ. ಆಗ ಬಾಯಿಯಲ್ಲಿ ಲಡ್ಡು ಇಟ್ಟುಕೊಂಡಿದ್ರಾ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂಗೆ ಜಮೀರ್ ತಿರುಗೇಟು ನೀಡಿದರು.

ಸಿದ್ದರಾಮಯ್ಯರಂತಹ ಲೀಡರ್ ನಾನು ನೋಡಿಯೇ ಇಲ್ಲ. ದೇವೇಗೌಡ, ಕುಮಾರಸ್ವಾಮಿ ಅವರನ್ನು ಇಬ್ರಾಹಿಂ ಬಾಯಿಗೆ ಬಂದಂಗೆ ಬೈಯ್ದಿದ್ದರು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬೀದಿ ರಂಪಾಟಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ!
Trade Deal: ಇದು ಒಪ್ಪಂದವಲ್ಲ, ದೇಶಕ್ಕೆ ಬಗೆದ ದ್ರೋಹ! - ಕೇಂದ್ರದ ವಿರುದ್ಧ ಖರ್ಗೆ ಗುಡುಗು