
ಕೊಪ್ಪಳ, (ಜೂನ್.22): ಮಾಜಿ ಸಿಎಂ ಸಿದ್ದರಾಮಯ್ಯನವರ ಜೊತೆ ಕೊಪ್ಪಳ ಪ್ರವಾಸದಲ್ಲಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಹೌದು...ಜಿಲ್ಲೆಯಲ್ಲಿ ಸಕ್ರಿಯರಾಗಿದ್ದ ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಸೈಯದ್ ಅವರನ್ನ ಕಾಂಗ್ರೆಸ್ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿ ಅಯ್ತು ಈಗ ಕಾಂಗ್ರೆಸ್ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..!
ಮಾಜಿ ಸಚಿವ ಜಮೀರ್ ಅಹಮ್ಮದ್ ಮೂಲಕ ಶಾಸಕ ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂಬರುವ ಚುನಾವಣೆಗೆ ಗ್ರೌಂಡ್ ವರ್ಕ್ ಮಾಡಲು ಸೈಯದ್ರನ್ನ ಹಿಟ್ನಾಳ್ ಪಕ್ಷಕ್ಕೆ ಬರಮಾಡಿಕೊಂಡಿರು.
ಸ್ಥಳೀಯವಾಗಿ ಜೆಡಿಎಸ್ನಲ್ಲಿ ಕೆ.ಎಂ.ಸೈಯದ್ ನಿರ್ಲಕ್ಷ್ಯಕ್ಕೊಳಪಟ್ಟಿದ್ದರು. ಹಾಗಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೊಪ್ಪಳ ಕ್ಷೇತ್ರದಿಂದ ಸೈಯದ್ ಸ್ಪರ್ಧಿಸಿದ್ದರು. ಇದೀಗ ಸೈಯದ್ ಕಾಂಗ್ರೆಸ್ ಪಾಲಾಗಿರುವುದು ಹಾಲಿ ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಮತ್ತಷ್ಟು ಬಲಬಂದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.