
ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಬುಲಾವ್ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹರಿಯಾಣಗೆ ತೆರಳಿ ಸಮಾಲೋಚನೆ ನಡೆಸಿದರು.
ಹುಬ್ಬಳ್ಳಿಯಲ್ಲಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು ಸುರ್ಜೆವಾಲಾ ಕರೆ ಹಿನ್ನೆಲೆಯಲ್ಲಿ ಅಲ್ಲಿಂದಲೇ ಶನಿವಾರ ಸಂಜೆಯೇ ದೆಹಲಿಗೆ ತೆರಳಿದ್ದರು. ಭಾನುವಾರ ಮುಂಜಾನೆ ದೆಹಲಿಯಿಂದ ಹರಿಯಾಣಕ್ಕೆ ತೆರಳಿ ಕೈತಾಲ್ನಲ್ಲಿದ್ದ ಸುರ್ಜೇವಾಲಾ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.
ಇದೇ ವೇಳೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಪ್ರಮುಖವಾಗಿ ಪ್ರಸ್ತಾಪವಾಯಿತು ಎಂದು ಹೇಳಲಾಗಿದೆ. ಜಮೀರ್ ಅಹಮದ್ ಖಾನ್ ಅವರು ಸುರ್ಜೇವಾಲಾ ಭೇಟಿ ನಂತರ ಮತ್ತೆ ದೆಹಲಿ ಮಾರ್ಗವಾಗಿ ಹುಬ್ಬಳ್ಳಿಗೆ ವಾಪಸಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.