ಕರ್ನಾಟದ ನಿರುದ್ಯೋಗಿ ಯುವಕರಿಗೆ ಯಡಿಯೂರಪ್ಪ ಬಂಪರ್ ಆಫರ್

Published : Feb 01, 2020, 07:12 PM IST
ಕರ್ನಾಟದ ನಿರುದ್ಯೋಗಿ ಯುವಕರಿಗೆ ಯಡಿಯೂರಪ್ಪ ಬಂಪರ್ ಆಫರ್

ಸಾರಾಂಶ

ನಿರುದ್ಯೋಗ ಸಮಸ್ಯೆ ದೇಶದಲ್ಲಿ ಎತೇಚ್ಚವಾಗಿದೆ. ಸೂಕ್ತ ಶಿಕ್ಷಣ ಪಡೆದುಕೊಂಡು ಅದಕ್ಕೆ ತಕ್ಕಂತೆ ಉದ್ಯೋಗಗಳು ಸಿಗುತ್ತಿಲ್ಲ. ಇದರಿಂದ ಅಭ್ಯರ್ಥಿಗಳು ರೋಸಿ ಹೋಗಿದ್ದಾರೆ. ಇನ್ನು ಕರ್ನಾಟಕ್ಕೆ ಬಂದ್ರೆ ನಿರುದ್ಯೋಗಿಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬಿಎಸ್‌ವೈ ಬಂಪರ್ ಆಫರ್ ನೀಡಿದ್ದಾರೆ.

ಬೆಂಗಳೂರು, (ಫೆ.01): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಯುವ ಸಮೂಹ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

SSLC ಪಾಸಾದವರಿಗೆ ಉದ್ಯೋಗವಕಾಶ: 2792 ಹುದ್ದೆಗೆ ಅರ್ಜಿ ಆಹ್ವಾನ

ಇಂದು (ಶನಿವಾರ) ವಿಧಾನಸೌಧ ಮುಂಭಾಗ ನೂರಕ್ಕೂ ಹೆಚ್ಚು ನಿರುದ್ಯೋಗಿ ಯುವಕ ಯುವತಿಯರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರವಾಸಿ ಟ್ಯಾಕ್ಸಿ ಯೋಜನೆ ನಿರುದ್ಯೋಗ ಸಮಸ್ಯೆ ನಿವಾರಣೆಮಾಡಲು ಸಹಕಾರಿಯಾಗಿದೆ ಎಂದು ಹೇಳಿದರು.

ನೌಕರಿ ಪರ್ವ: 1112 FDA ಹುದ್ದೆಗೆ KPSC ಅರ್ಜಿ ಆಹ್ವಾನ

ನಿರುದ್ಯೋಗ ಸಮಸ್ಯೆ ಇರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ರಾಜ್ಯಾದ್ಯಂತ 450 ಟ್ಯಾಕ್ಸಿ ವಿತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ಯೋಜನೆ ಪಡೆಯಲು ಅರ್ಜಿ ಸಲ್ಲಿಸಬೇಕು. ಬಳಿಕ ಅರ್ಜಿಗಳನ್ನು  ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಆಯ್ಕೆ ಮಾಡಲಾಗುತ್ತದೆ.

KPSC ನೇಮಕಾತಿ: ಪ್ರಥಮ ದರ್ಜೆ ಸಹಾಯಕ(FDA)ಹುದ್ದೆಗೆ ಆಹ್ವಾನ

ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿಮ್ಮ ನಿಮ್ಮ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ ವಿಚಾರಿಸಿ ಮಾಹಿತಿ ಪಡೆದುಕೊಳ್ಳಬಹುದು.

PREV
click me!

Recommended Stories

ಬೆಂಗಳೂರಿನ ಅಮರ್‌ ಸುಬ್ರಹ್ಮಣ್ಯ ಆಪಲ್‌ ಎಐ ಟೀಮ್‌ಗೆ ಉಪಾಧ್ಯಕ್ಷ!
ಸರಾಸರಿ ಮಾಸಿಕ ವೇತನ: ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕ, ಸಿಗೋ ಸ್ಯಾಲರಿ ಎಷ್ಟು?