ನೆರೆ ವೇಳೆ ಆ್ಯಂಬುಲೆನ್ಸ್‌ಗೆ ದಾರಿ ತೋರಿದ್ದ ಬಾಲಕಗೆ ಖುಲಾಯಿಸಿದ ಭರ್ಜರಿ ಅದೃಷ್ಟ!

Published : Oct 21, 2019, 09:09 AM ISTUpdated : Oct 21, 2019, 12:05 PM IST
ನೆರೆ ವೇಳೆ ಆ್ಯಂಬುಲೆನ್ಸ್‌ಗೆ ದಾರಿ ತೋರಿದ್ದ ಬಾಲಕಗೆ ಖುಲಾಯಿಸಿದ ಭರ್ಜರಿ ಅದೃಷ್ಟ!

ಸಾರಾಂಶ

 ನೆರೆ ಸಂದರ್ಭದಲ್ಲಿ ಸೇತುವೆ ಮುಳುಗಿದ್ದರೂ ಜೀವದ ಹಂಗು ತೊರೆದು ಆ್ಯಂಬುಲೆನ್ಸ್‌ಗೆ ದಾರಿ ತೋರಿಸಿ ಪ್ರಶಂಸೆಗೆ ಪಾತ್ರನಾಗಿದ್ದ ದೇವದುರ್ಗ ತಾಲೂಕಿನ ಹಿರೇರಾಯಕುಂಪಿಯ ಬಾಲಕ ವೆಂಕಟೇಶನಿಗೆ ಈಗ ಅದೃಷ್ಟಖುಲಾಯಿಸಿದೆ.

ರಾಯಚೂರು(ಅ.21): ನೆರೆ ಸಂದರ್ಭದಲ್ಲಿ ಸೇತುವೆ ಮುಳುಗಿದ್ದರೂ ಜೀವದ ಹಂಗು ತೊರೆದು ಆ್ಯಂಬುಲೆನ್ಸ್‌ಗೆ ದಾರಿ ತೋರಿಸಿ ಪ್ರಶಂಸೆಗೆ ಪಾತ್ರನಾಗಿದ್ದ ದೇವದುರ್ಗ ತಾಲೂಕಿನ ಹಿರೇರಾಯಕುಂಪಿಯ ಬಾಲಕ ವೆಂಕಟೇಶನಿಗೆ ಈಗ ಅದೃಷ್ಟಖುಲಾಯಿಸಿದೆ.

ಬಾಲಕನ ಸಾಹಸ ಮೆಚ್ಚಿ ಇತ್ತೀಚೆಗಷ್ಟೇ ಸನ್ಮಾನಿಸಿದ್ದ ಕೇರಳದ ಮೂರು ಸಂಸ್ಥೆಗಳು ಈಗ ಬಾಲಕನ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲು ನಿರ್ಧರಿಸಿವೆ.

ಈ ಸಂಬಂಧ ಭಾನುವಾರ ಬಾಲಕನ ಹುಟ್ಟೂರು ಹಿರೇರಾಯಕುಂಪಿ ಗ್ರಾಮಕ್ಕೆ ಆಗಮಿಸಿದ್ದ ಕೇರಳದ ಎಂಐಯುಪಿ ಸ್ಕೂಲ್‌ ಪಿಟಿಎ ಕಮಿಟಿ, ಹೆಲ್ಪಿಂಗ್‌ ಹ್ಯಾಂಡ್ಸ್‌ ಚಾರಿಟೇಬಲ್‌ ಟ್ರಸ್ಟ್‌ ಮತ್ತು ಕೇರಳದ ಫೋಕಸ್‌ ಇಂಡಿಯಾ ಸಂಸ್ಥೆಯ ಪದಾಧಿಕಾರಿಗಳು, ಮುಖಂಡರು ಕುಟುಂಬ ಸದಸ್ಯರ ಜತೆಗೆ ಮಾತುಕತೆ ನಡೆಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ವೇಲೆ ಬಾಲಕನ ಮನೆಯನ್ನು ವೀಕ್ಷಿಸಿ ಗುತ್ತಿಗೆದಾರರ ಮೂಲಕ ಐದರಿಂದ ಆರು ಲಕ್ಷ ಮೌಲ್ಯದ ಮನೆ ನಿರ್ಮಿಸಿಕೊಡುವುದಾಗಿ ಹೇಳಿದ ಅವರು, ಮೂರು ತಿಂಗಳ ಬಳಿಕ ಗ್ರಾಮಕ್ಕೆ ಭೇಟಿ ಕೊಡುವುದಾಗಿ ಭರವಸೆ ನೀಡಿದರು.

PREV
click me!

Recommended Stories

ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ!
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!