ಬಾಗಲಕೋಟೆ: ಯುವ ಪ್ರೇಮಿಗಳು ಸಾವಿಗೆ ಶರಣು: ಗೆಳತಿ ಮೃತಪಟ್ಟ ವಿಚಾರ ತಿಳಿದು ಗೆಳೆಯನೂ ಸಾವು

Published : Apr 08, 2026, 12:02 PM ISTUpdated : Apr 08, 2026, 12:19 PM IST
lovers surrenders to death

ಸಾರಾಂಶ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ, ಕ್ಷುಲ್ಲಕ ಜಗಳದ ನಂತರ ಮನನೊಂದು ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಯುವತಿ ಆತ್ಮ*ಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಯುವಕನೂ ಸಾವಿಗೆ ಶರಣಾಗಿದ್ದಾನೆ.

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು

ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಸಾವಿಗೀಡಾದ ಪ್ರೇಮಿಗಳನ್ನು 19 ವರ್ಷದ ಪವಿತ್ರಾ ಹಾಗೂ 20 ವರ್ಷದ ಕಾರ್ತಿಕ್ ಎಂದು ಗುರುತಿಸಲಾಗಿದೆ.

ಮೃತ ಕಾರ್ತಿಕ್ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದವನಾಗಿದ್ದು, ಪವಿತ್ರಾ ಬನಹಟ್ಟಿಯ ಕೆ ಹೆಚ್ ಡಿ ಸಿ ಕಾಲೋನಿ ನಿವಾಸಿಯಾಗಿದ್ದಾಳೆ. ನಿನ್ನೆ ಪವಿತ್ರಾ ಹಾಗೂ ಕಾರ್ತಿಕ್ ಜಗಳ ಮಾಡಿಕೊಂಡಿದ್ದರು. ಪ್ರೇಮಿಯ ಜೊತೆ ಜಗಳದ ನಂತರ ಮನನೊಂದು ಪವಿತ್ರಾ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು. ಈ ವಿಚಾರ ತಿಳಿದು ಆಘಾತಕ್ಕೀಡಾದ ಕಾರ್ತಿಕ್ ಕೂಡ ಬಳಿಕ ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಇದನ್ನೂ ಓದಿ: ಡಿವೋರ್ಸ್‌ ಪಡೆದ ಮಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ನೀಡಿದ ಯುವತಿಯ ಮಾವ 

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕನ್ನಡದಲ್ಲಿಯೇ ಮಾತನಾಡಿದ ನಟ ವಿಜಯ ದೇವರಕೊಂಡ: ಕೊಡವರ ಮನಗೆದ್ದ Rashmika Mandanna ಪತಿ
ಡಿವೋರ್ಸ್‌ ಪಡೆದ ಮಗಳ ಅದ್ದೂರಿ ಸ್ವಾಗತದ ಹಿಂದೆ ಕರಾಳ ಮುಖ: ನಿವೃತ್ತ ಜಡ್ಜ್ ಪುತ್ರಿಯ ವಿಚ್ಛೇದನ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ ಮಾವ