ಅವಳಿಗೆ 57.. ಅವನಿಗೆ 27, ಇಬ್ಬರಿಗೂ ಆಗಿತ್ತು ಕುಚ್​​..ಕುಚ್​​..! ಆ ಶಿಕ್ಷಕಿ ಸತ್ತಿದ್ದೇಗೆ? ಕೊಂದಿದ್ದು ಯಾರು..?

ಅವಳಿಗೆ 57.. ಅವನಿಗೆ 27, ಇಬ್ಬರಿಗೂ ಆಗಿತ್ತು ಕುಚ್​​..ಕುಚ್​​..! ಆ ಶಿಕ್ಷಕಿ ಸತ್ತಿದ್ದೇಗೆ? ಕೊಂದಿದ್ದು ಯಾರು..?

Published : Apr 10, 2026, 08:42 PM IST
57 ವರ್ಷದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ತನಗಿಂತ 30 ವರ್ಷ ಚಿಕ್ಕವನಾದ ಪ್ರಿಯತಮನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದಾರೆ. ತಾನು ಕೊಟ್ಟ ಹಣವನ್ನು ವಾಪಸ್ ಕೇಳಿದ್ದೇ ಕೊಲೆಗೆ ಕಾರಣವಾಗಿದ್ದು, ಸಾಕ್ಷ್ಯ ನಾಶಪಡಿಸಲು ಆಕೆಯ ಶವವನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಲಾಗಿದೆ.

ಪ್ರೀತಿಗೆ ವಯಸ್ಸಿನ ಹಂಗಿಲ್ಲ ಎನ್ನುತ್ತಾರೆ, ಆದರೆ ಆ ಪ್ರೀತಿಯೇ ಹಣದ ಆಸೆಗೆ ಬಲಿಯಾದಾಗ ಅಲ್ಲಿ ಉಳಿಯುವುದು ಬರೀ ರಕ್ತಸಿಕ್ತ ಕಥೆ ಮಾತ್ರ. ಇಲ್ಲೊಬ್ಬಳು 57 ವರ್ಷದ ಸರ್ಕಾರಿ ಶಾಲೆಯ ಶಿಕ್ಷಕಿ, ತನಗಿಂತ 30 ವರ್ಷ ಸಣ್ಣವನಾದ ಯುವಕನನ್ನು ನಂಬಿ ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ ಹಣದ ವಿಚಾರಕ್ಕೆ ಶುರುವಾದ ಕಿರಿಕಿರಿ, ಕೊನೆಯಲ್ಲಿ ಕೊಲೆಯಲ್ಲಿ ಅಂತ್ಯವಾಗಿದೆ.

ಆದರ್ಶ ಶಿಕ್ಷಕಿಯ ನಿಗೂಢ ನಾಪತ್ತೆ:

ಆಕೆ ಸಮಾಜದಲ್ಲಿ ಗೌರವಯುತವಾದ ಸ್ಥಾನದಲ್ಲಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಜ್ಯೋತಿ (57). ಇನ್ನು ಕೆಲವೇ ತಿಂಗಳು ಕಳೆದಿದ್ದರೆ ಆಕೆ ಸೇವೆಯಿಂದ ನಿವೃತ್ತಿಯಾಗಿ ನೆಮ್ಮದಿಯ ಜೀವನ ನಡೆಸಬೇಕಿತ್ತು. ಆದರೆ ಒಂದು ದಿನ ಮನೆಯಲ್ಲಿ ಕೆಲಸವಿದೆ ಎಂದು ಹೊರಹೋದವರು ವಾಪಸ್ ಬರಲೇ ಇಲ್ಲ. ಕುಟುಂಬಸ್ಥರು ಆತಂಕದಿಂದ ಪೊಲೀಸರಿಗೆ ಮಿಸ್ಸಿಂಗ್ ಕೇಸ್ ನೀಡಿದರು. ಮರುದಿನ ರಸ್ತೆಯ ಪಕ್ಕದಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಯಿತು. ಅದು ಶಿಕ್ಷಕಿ ಜ್ಯೋತಿಯವರದ್ದೇ ಎಂದು ತಿಳಿದಾಗ ಇಡೀ ಊರೇ ಬೆಚ್ಚಿಬಿದ್ದಿತ್ತು.

ನಂದಿನಿ ಪಾರ್ಲರ್‌ನಲ್ಲಿ ಶುರುವಾದ ಪ್ರೇಮಕಥೆ:

ಪೊಲೀಸರು ತನಿಖೆ ಚುರುಕುಗೊಳಿಸಿದಾಗ ಬಯಲಾದದ್ದು ಒಂದು ಅನೈತಿಕ ಸಂಬಂಧದ ಕಥೆ. ಜ್ಯೋತಿ ಅವರಿಗೆ 27 ವರ್ಷದ ಅಮರ ಎಂಬ ಯುವಕನ ಪರಿಚಯವಾಗಿತ್ತು. ಅಮರ ನಂದಿನಿ ಪಾರ್ಲರ್ ನಡೆಸುತ್ತಿದ್ದ, ಅಲ್ಲಿಗೆ ಪದೇ ಪದೇ ಬರುತ್ತಿದ್ದ ಜ್ಯೋತಿಗೂ ಅವನ ನಡುವೆ ಸ್ನೇಹ ಬೆಳೆದು ನಂತರ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಜ್ಯೋತಿ ಅವನ ಮೇಲೆ ಎಷ್ಟರಮಟ್ಟಿಗೆ ಪ್ರೀತಿ ಇಟ್ಟಿದ್ದರೆಂದರೆ, ಅವನಿಗೆ ಬೇಕಾದ ಕಾರು, ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ನೀಡಿದ್ದರು. ಅಮರ ಕೂಡ ಆಕೆಯ ದುಡ್ಡಿನಲ್ಲಿ ರಾಜಾತಿಥ್ಯ ಅನುಭವಿಸುತ್ತಾ ಮಜಾ ಮಾಡಿದ್ದ.

ಕೊಲೆಗೆ ಕಾರಣವಾದ ಹಣದ ಕಿರಿಕಿರಿ:

ಇತ್ತೀಚಿನ ದಿನಗಳಲ್ಲಿ ಜ್ಯೋತಿ ತಾನು ಕೊಟ್ಟಿದ್ದ ಹಣವನ್ನು ವಾಪಸ್ ಕೇಳಲು ಶುರುಮಾಡಿದ್ದರು. ಆದರೆ ಅಮರ ಈಗಾಗಲೇ ಆ ಹಣವನ್ನೆಲ್ಲಾ ಖಾಲಿ ಮಾಡಿದ್ದ. ಹಣ ವಾಪಸ್ ಕೊಡಲಾಗದ ಅಮರನಿಗೆ ಜ್ಯೋತಿಯವರ ಒತ್ತಾಯ 'ಟಾರ್ಚರ್' ನಂತೆ ಕಂಡಿದೆ. ಈ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಆಕೆಯನ್ನು ಮುಗಿಸಿಬಿಡಲು ಪಕ್ಕಾ ಪ್ಲಾನ್ ಮಾಡಿದ್ದ.

ದೇವಸ್ಥಾನದ ನೆಪದಲ್ಲಿ ಮಸಣ ಸೇರಿದ ಜೀವ:

ಪ್ಲಾನ್ ಪ್ರಕಾರ, 'ದೇವಸ್ಥಾನಕ್ಕೆ ಹೋಗಿ ಬರೋಣ ಬಾ' ಎಂದು ಜ್ಯೋತಿಯನ್ನು ಕರೆದೊಯ್ದಿದ್ದ ಅಮರ, ದಾರಿಯಲ್ಲಿ ಪೆಟ್ರೋಲ್ ಬಂಕ್ ಒಂದರಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿದ್ದ. ನಂತರ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಕೊಂದು, ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ. ನಂತರ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದ. ಆದರೆ, ಪೆಟ್ರೋಲ್ ಬಂಕ್‌ನ ಸಿಸಿ ಟಿವಿ ದೃಶ್ಯಾವಳಿಗಳು ಹಂತಕ ಅಮರನ ಕೃತ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟವು. ಪೊಲೀಸರು ಹಂತಕನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ನಂಬಿದ ಪ್ರಿಯತಮನೇ ಕಾಲನಾದ ಈ ಘಟನೆ ಸಮಾಜಕ್ಕೆ ದೊಡ್ಡ ಎಚ್ಚರಿಕೆಯಾಗಿದೆ. ನಿವೃತ್ತಿ ಜೀವನದ ಕನಸು ಕಾಣುತ್ತಿದ್ದ ಶಿಕ್ಷಕಿ, ಕೊನೆಗೆ ಸುಟ್ಟ ಹೆಣವಾಗಿ ಮಸಣ ಸೇರಿದ್ದು ಮಾತ್ರ ವಿಧಿಯ ಆಟ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
06:10ದರ್ಶನ್ 'ಬುಲ್‌ ಬುಲ್‌' ಸುದೀಪ್ ಜೊತೆ ಮಾತಾಡಕಿಲ್ವಾ? ದಚ್ಚು ಶಿಷ್ಯೆ 'ಲೇಡಿ ಬಾಸ್' ಕಿಚ್ಚನಿಂದ ದೂರ?
25:10ತವರು ಮನೆಗೆ ಹೋಗ್ತೀನೆಂದ ಹೆಂಡತಿಯನ್ನು ಶಿವನಪಾದ ಸೇರಿಸಿದ ಗಂಡ; ಬೋರ್‌ವೆಲ್‌ನಲ್ಲಿ ಹೂತು ಹಾಕಿ ನಾಪತ್ತೆ ನಾಟಕವಾಡಿದ!
Read more