
‘ನಾನು ಪೂರ್ತಿ ಸಿನಿಮಾ ನೋಡಿದ್ದೇನೆ. ನನಗಿಂತ ಎತ್ತರ ಇರುವ ಅಭಿಷೇಕ್ ಸ್ಕ್ರೀನಲ್ಲಿ ಬಹಳ ಮುದ್ದಾಗಿ ಕಾಣಿಸುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ. ಸೂರಿ ಅವರ ನಿರ್ದೇಶನದಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರ ಚೆನ್ನಾಗಿ ಬಂದಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ. ನವೆಂಬರ್ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ’.- ಹೀಗಂದಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್.
ದುನಿಯಾ ಸೂರಿ ನಿರ್ದೇಶನದ, ಅಭಿಷೇಕ್ ಅಂಬರೀಶ್ ಪ್ರಧಾನ ಪಾತ್ರದಲ್ಲಿ ನಟಿಸಿರುವ, ಕೆ.ಎಂ. ಸುಧೀರ್ ನಿರ್ಮಾಣದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಸುಮಲತಾ ಅಂಬರೀಶ್, ‘ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂದು ಗೊತ್ತಾದ ಮೇಲೆ ನಾನು ಕಥೆ ಕೇಳಲು ಹೋಗಲಿಲ್ಲ. ಅವರು ಚೆನ್ನಾಗಿ ಕಥೆ ಮಾಡಿಕೊಂಡಿರುತ್ತಾರೆ ಎಂಬ ನಂಬಿಕೆ ನನ್ನದು. ಕನ್ನಡ ಸಿನಿಮಾ ಪ್ರೇಕ್ಷಕರ ಆಶೀರ್ವಾದ ಅಭಿಷೇಕ್ ಮೇಲಿರಲಿ’ ಎಂದು ಹೇಳಿದರು.
ಮಂಡ್ಯ ಜನತೆ ಮನೆಗೆ ಬಂದ್ರೆ ಅವಿವಾ ರೂಮ್ಗೆ ಓಡೋಗ್ತಾಳೆ: ಪತ್ನಿ ಬಗ್ಗೆ ಅಭಿಷೇಕ್ ಅಂಬರೀಶ್
ಅಭಿಷೇಕ್ ಅಂಬರೀಶ್ ಮಾತಿಗೆ ಮುನ್ನ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ನಂತರ, ‘ನಾನು ನಟಿಸಿರುವ ಎರಡನೇ ಚಿತ್ರ ‘ಬ್ಯಾಡ್ ಮ್ಯಾನರ್ಸ್’ ನೋಡಿ ಹರಸಿ’ ಎಂದರು.ನಿರ್ದೇಶಕ ದುನಿಯಾ ಸೂರಿ, ‘ಈ ಸಂದರ್ಭದಲ್ಲಿ ನಾನು ಅಂಬರೀಶ್ ಹಾಗೂ ಪುನೀತ್ ರಾಜ್ಕುಮಾರ್ ಅವರನ್ನು ನೆನೆಸಿಕೊಳ್ಳುತ್ತೇನೆ. ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಪಾತ್ರ ವಿಭಿನ್ನವಾಗಿದೆ’ ಎಂದರು.
ಚಿತ್ರಕ್ಕೆ ಶುಭ ಹರಸಲು ರಾಕ್ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಆಗಮಿಸಿದ್ದರು. ನಿರ್ಮಾಪಕ ಕೆ.ಎಂ ಸುಧೀರ್, ಹಿರಿಯ ನಟರಾದ ಉಮೇಶ್, ದತ್ತಣ್ಣ, ಶರತ್ ಲೋಹಿತಾಶ್ವ ಉಪಸ್ಥಿತರಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.