ಮತ್ತೆ ಬಂದ್ರು ಕಾಶೀನಾಥ್ ಮಗ ಅಭಿಮನ್ಯು; ಎಲ್ಲಿಗೆ ಪಯಣ ಯಾವುದೋ ದಾರಿ..!?

Published : Sep 14, 2024, 02:55 PM IST
ಮತ್ತೆ ಬಂದ್ರು ಕಾಶೀನಾಥ್ ಮಗ ಅಭಿಮನ್ಯು; ಎಲ್ಲಿಗೆ ಪಯಣ ಯಾವುದೋ ದಾರಿ..!?

ಸಾರಾಂಶ

ಇದುವರೆಗೆ ನೋಡಿದ್ದು ನಿಜವೋ ಸುಳ್ಳೋ ಎಂಬಂತೆ ಬೆರಗಿಗೆ ದೂಡುವ ರೀತಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ವಿಶೇಷವೆಂದರೆ, ಕಿಚ್ಚ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ..

ಯುವ ಆವೇಗದ ತಂಡವೊಂದು ಅಖಾಡಕ್ಕಿಳಿಯಿತೆಂದರೆ, ಅಚ್ಚರಿದಾಯಕ ಕಂಟೆಂಟೊಂದು ರೂಪುಗೊಳ್ಳುತ್ತಿದೆ ಎಂದೇ ಅರ್ಥ. ಅದನ್ನು ಮತ್ತೆ ನಿಜವಾಗಿಸುವ ನಿಟ್ಟಿನಲ್ಲಿ `ಎಲ್ಲಿಗೆ ಪಯಣ ಯಾವುದೋ ದಾರಿ' ಚಿತ್ರದ ಮೂಲಕ ತಂಡವೊಂದು ಎಂಟ್ರಿ ಕೊಟ್ಟಿದೆ. ಈಗಾಗಲೇ ತಣ್ಣಗೆ ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಸೀಮಿತ ದೃಷ್ಯಗಳಲ್ಲಿಯೇ ಕುತೂಹಲದ ಕೆನೆಗಟ್ಟಿಕೊಂಡಿರುವಂತೆ ಭಾಸವಾಗುವ ಈ ಟೀಸರ್ ಪ್ರೇಕ್ಷಕರನ್ನು ಸಲೀಸಾಗಿ ತನ್ನತ್ತ ಸೆಳೆದುಕೊಳ್ಳುವಂತಿದೆ.

ಇದು ಅಭಿಮನ್ಯು ಕಾಶಿನಾಥ್ ನಾಥ್ ನಾಯಕನಾಗಿ ನಟಿಸಿರುವ ಚಿತ್ರ. ಬೇರೆಯದ್ದೇ ತೆರನಾದ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಸದರಿ ಟೀಸರ್‌ನಲ್ಲಿ ಅವರು ವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಧಾನವಾಗಿ ಇದೊಂದು ಥ್ರಿಲ್ಲರ್ ಕಥನವನ್ನು ಒಳಗೊಂಡಿರುವ ಚಿತ್ರವೆಂಬ ಸಂದೇಶವೊಂದು, ಅತ್ಯಂತ ಪರಿಣಾಮಕಾರಿಯಾಗಿ ಪ್ರೇಕ್ಷಕರತ್ತ ದಾಟಿಕೊಂಡಿದೆ. ಈ ಟೀಸರ್ ಜೊತೆ ಜೊತೆಗೇ ಒಂದಷ್ಟು ಸೂಕ್ಷ್ಮ ಸಂಗತಿಗಳನ್ನು ಚಿತ್ರತಂಡ ಹಂಚಿಕೊಂಡಿದೆ. 

ಪಂಡರೀಬಾಯಿಗೆ ನನ್ 'ಗುರು' ಅಂತಿದ್ರಂತೆ ಡಾ. ರಾಜ್‌ಕುಮಾರ್ !

ಇದು ಕಿರಣ್ ಎಸ್ ಸೂರ್ಯ ನಿರ್ದೇಶನದ ಚೊಚ್ಚಲ ಚಿತ್ರ. ಈಗಾಗಲೇ ಹನ್ನೆರಡು ವರ್ಷಗಳ ಕಾಲ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವವರು ಕಿರಣ್. ಈ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಲವ್ ಕಂ ಥ್ರಿಲ್ಲರ್ ಜಾನರಿನ ಚಿತ್ರ. ಹಾಗೆಂದ ಮಾತ್ರಕ್ಕೆ ಆ ಪರಿಧಿಗೆ ಸೀಮಿತವಾದ ಕಥೆ ಇಲ್ಲಿದೆ ಅಂದುಕೊಳ್ಳುವಂತಿಲ್ಲ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ ಅಂದುಕೊಳ್ಳಲೂ ಸಾಧ್ಯವಿಲ್ಲ. 

ಇದುವರೆಗೆ ನೋಡಿದ್ದು ನಿಜವೋ ಸುಳ್ಳೋ ಎಂಬಂತೆ ಬೆರಗಿಗೆ ದೂಡುವ ರೀತಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ವಿಶೇಷವೆಂದರೆ, ಕಿಚ್ಚ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ಶ್ರೀಲಕ್ಷ್ಮಿ ಒಂದೊಂದು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎರಡು ಹಾಡುಗಳಿಗೆ ಖುದ್ದು ನಿರ್ದೇಶಕ ಕಿರಣ್ ಎಸ್ ಸೂರ್ಯ ಸಾಹಿತ್ಯ ಬರೆದಿದ್ದಾರೆ.

ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ  ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. 

ಇಪ್ಪತ್ತೈದು ವರ್ಷಗಳ ಬಳಿಕ ಮತ್ತೆ ಬಂದ 'ನಾನು'..; ಉಪೇಂದ್ರ ಚಿತ್ರಕ್ಕೆ ರೆಸ್ಪಾನ್ಸ್ ಹೇಗಿದೆ?

ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಪೋಸ್ಟ್ ಪ್ರೊಡಕ್ಷನ್ ಹಂತ ದಾಟಿಕೊಂಡಿರುವ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಒಂದೇ ದಿನದಲ್ಲಿ ದಾಖಲೆ ಬರೆದ ಸುದೀಪ್​ Mark Trailer​: ಇಷ್ಟೊಂದು Views​ ಆಗಿದ್ದು ನಿಜನಾ? ಏನಿದು ಚರ್ಚೆ?
ಸಲಗ Vs ರೂಲರ್: ಅಳಿದು ಉಳಿದವರ ಲ್ಯಾಂಡ್ ಲಾರ್ಡ್ ದುನಿಯಾದಲ್ಲಿ ಶೆಟ್ಟರ ವಾರ್!