ದೀಪಾವಳಿಗೆ ವಿಶ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ 'ಒಡೆಯ'!

Published : Oct 27, 2019, 02:32 PM ISTUpdated : Oct 27, 2019, 05:32 PM IST
ದೀಪಾವಳಿಗೆ ವಿಶ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ 'ಒಡೆಯ'!

ಸಾರಾಂಶ

  ಬಾಕ್ಸ್ ಆಫೀಸ್ ಸುಲ್ತಾನ್ ಚಿತ್ರ ಅಂದ್ರೆನೇ ಹಾಗೆ ರಿಲೀಸ್‌ಗೂ ಮುನ್ನವೂ ಸೌಂಡು. ರಿಲೀಸ್ ಆದ್ಮೇಲೂ ಸೌಂಡು, ಯಾವ ಚಿತ್ರದ ಬಗ್ಗೆ ಹೇಳ್ತಿದ್ದೀವಿ ಅಂತ ಯೋಚಿಸ್ತಿದೀರಾ? ಇಲ್ಲಿದೆ ನೋಡಿ ಅ ಸೌಂಡ್ ಹೆಚ್ಚಿಸುವಂತ ಸುದ್ದಿ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯ' ಚಿತ್ರಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಂತೂ ಇಂತೂ ಶೂಟಿಂಗ್ ಮುಗಿತು. ಆದರೆ ಚಿತ್ರತಂಡ ಪೋಸ್ಟರ್ ಬಿಟ್ರೆ ಏನೂ ಸುಳಿವು ನೀಡುತ್ತಿಲ್ವಲ್ಲಾ ಅಂತ ಕಾಯ್ತಾ ಇದ್ದವರಿಗೆ ಸ್ವತಃ ದಾಸನೇ ಗುಡ್‌ ನ್ಯೂಸ್ ನೀಡಿದ್ದಾರೆ.

ಮಾರುಕಟ್ಟೆಯಲ್ಲಿ ದರ್ಶನ್ ಶರ್ಟ್; ಅಭಿಮಾನಿಯಾದ್ರೆ ಇಲ್ಲಿ ಕೊಳ್ಳಿ!

ಪ್ರತಿ ಹಬ್ಬಕ್ಕೂ ದರ್ಶನ್ ಅಭಿಮಾನಿಗಳಿಗೆ ವಿಶ್ ಮಾಡುತ್ತಾರೆ. ಈ ದೀಪಾವಳಿಗೆ ಸ್ವಲ್ಪ ಸ್ಪೆಶಲ್ ಆಗಿ ವಿಶ್ ಮಾಡಿದ್ದಾರೆ. ತನ್ನ ಟ್ಟಿಟರ್ ಖಾತೆಯಲ್ಲಿ 'ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲಿ ಎಂದು ಆಶಿಸುತ್ತೇನೆ. ಒಡೆಯ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ ನಿಮ್ಮ ಪ್ರೀತಿಗೆ ಸದಾ ಆಭಾರಿ ' ಎಂದು ಬರೆದುಕೊಂಡಿದ್ದಾರೆ.

ಸ್ವಿಸ್‌ನಲ್ಲಿ ಮಂಜುಗಡ್ಡೆ ನಡುವೆ ಡಿ ಬಾಸ್; ಇಲ್ಲಿವೆ ಫೋಟೋಸ್!

ಈಗ ಟೀಸರ್ ರಿಲೀಸ್ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಿದ್ದಾರೆ. 'ನಮ್ಮ ‘ಒಡೆಯ’ ಚಿತ್ರದ ಟೀಸರ್ ಇದೇ ನವೆಂಬರ್ 1 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬೆಳಗ್ಗೆ 9:55 ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ- ಆಶೀರ್ವಾದ ಸದಾ ಹೀಗೆ ಇರಲಿ-ನಿಮ್ಮ ದಾಸ ದರ್ಶನ್'. ಎಂದಿದ್ದಾರೆ.

 

'ಒಡೆಯ' ಚಿತ್ರದ ಬಗ್ಗೆ ಒಂದೊಂದು ವಿಚಾರ ರಿವೀಲ್ ಮಾಡುವಾಗ ಹೊಸ ಫೋಟೋಗಳನ್ನು ರಿವೀಲ್ ಮಾಡುತ್ತಿದ್ದಾರೆ. ವಿಜಯ ದಶಮಿ ಹಬ್ಬದಂದು ಮಗುವನ್ನು ಎತ್ತಿ ಮುದ್ದಾಡುತ್ತಿರುವ ಫೋಟೋ ರಿವೀಲ್ ಆಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿತ್ತು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?