ಸರ್ವೇಜನ ಸುಖಿನೋ ಭವಂತು ಅಷ್ಟೇ...; ನಂಜುಡೇಶ್ವರನ ದರ್ಶನ ಪಡೆದ ಮೀನಾ ತೂಗುದೀಪ

Published : Apr 03, 2025, 11:15 AM ISTUpdated : Apr 03, 2025, 11:40 AM IST
ಸರ್ವೇಜನ ಸುಖಿನೋ ಭವಂತು ಅಷ್ಟೇ...; ನಂಜುಡೇಶ್ವರನ ದರ್ಶನ ಪಡೆದ ಮೀನಾ ತೂಗುದೀಪ

ಸಾರಾಂಶ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ದರ್ಶನ್, ಬೆನ್ನುನೋವಿನ ಚಿಕಿತ್ಸೆಯ ನಂತರ 'ಡೆವಿಲ್' ಚಿತ್ರೀಕರಣ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಚಿತ್ರೀಕರಣ ಮುಗಿಸಿ ರಾಜಸ್ಥಾನಕ್ಕೆ ತೆರಳಿದ್ದಾರೆ. ಈ ಮಧ್ಯೆ, ತಾಯಿ ಮೀನಾ ತೂಗುದೀಪ ನಂಜನಗೂಡಿನ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ಮಗನಿಗೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದ್ದಾರೆ. ದರ್ಶನ್ ಜಾಮೀನು ರದ್ದತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಜಾಮೀನು ಪಡೆದು ಹೊರ ಬಂದಿರುವ ದರ್ಶನ್ ಕೆಲ ಸಮಯಗಳ ಕಾಲ ಬೆನ್ನು ನೋವು ಎಂದು ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗುತ್ತಿದ್ದಂತೆ ಅರ್ಧಕ್ಕೆ ನಿಂತಿದ್ದ ಸಿನಿಮಾ ಕೆಲಸಗಳನ್ನು ಶುರು ಮಾಡಿಕೊಂಡರು. ಬಹು ನಿರೀಕ್ಷಿತ ಡೆವಿಲ್ ಸಿನಿಮಾ ಚಿತ್ರೀಕರಣವನ್ನು ಮೊದಲು ಆರಂಭಿಸಿದ್ದಾರೆ. ಮೈಸೂರಿನ ಕೆಲ ಭಾಗಗಳಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿ ಇದೀಗ ರಾಜಸ್ಥಾನದ ಕಡೆ ಮುಖ ಮಾಡಿದ್ದಾರೆ. ಈ ಸಮಯದಲ್ಲಿ ತಾಯಿ ಮೀನಾ ತೂಗುದೀಪ ದೇವರ ದರ್ಶನ್ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ.

ನಂಜನಗೂಡಿನ ನಂಜುಂಡೇಶ್ವರಿಗೆ ಮೀನಾ ತೂಗುದೀಪ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಮುಗಿದ ನಂತರ 'ನಂಜುಂಡೇಶ್ವರನ ದರ್ಶನ ಪಡೆದೆ. ವಿಶೇಷ ಏನಿಲ್ಲ ಸರ್ವೇಜನ ಸುಖಿನೋ ಭವಂತು. ಎಲ್ಲರನ್ನು ಭಗವಂತ ಚೆನ್ನಾಗಿಟ್ಟಿರಲಿ'ಎಂದು ಮೀನಾರವರು ಮಾತನಾಡಿದ್ದಾರೆ. ಮಗ ಹೇಗಿದ್ದಾನೆ ಸಿನಿಮಾ ಕೆಲಸಗಳು ಹೇಗೆ ನಡೆಯುತ್ತಿದೆ ಎಂದು ಪ್ರಶ್ನೆ ಮಾಡಿದಾಗ 'ಚೆನ್ನಾಗಿದ್ದಾನೆ, ರಾಜಸ್ಥಾನದಲ್ಲಿ ಡೆವಿಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮಗನ ಮೇಲರಲಿ' ಎಂದು ಹೇಳಿದ್ದಾರೆ. 

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಬಿಗ್ ಬಾಸ್ ಧರ್ಮ ಕೀರ್ತಿರಾಜ್; ಪಕ್ಕದಲ್ಲಿರುವ ಹುಡುಗಿ ಮೇಲೆ ನೆಟ್ಟಿಗರ ಕಣ್ಣು!

ಏಪ್ರಿಲ್ 2ರಂದು ನಟ ದರ್ಶನ ಜಾಮನು ರದ್ದು ಕೋರಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. ಈ ವೇಳ ಕೋರ್ಟ್‌ನಿಂದ ವಕೀಲರಿಗೆ ಮಹತ್ವದ ಸೂಚನೆ ನೀಡಿ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದರೆ ದರ್ಶನ್ ಮತ್ತೆ ಅರೆಸ್ಟ್‌ ಆಗುತ್ತಾರೆ. ಸದ್ಯದ ಮಟ್ಟಕ್ಕೆ 20 ದಿನಗಳ ಕಾಲ ಬಿಗ್ ರಿಲೀಸ್‌ ಸಿಕ್ಕಿದೆ. ಮಗನಿಗೆ ಒಳ್ಳೆಯದಾಗಲಿ ಎಂದು ಮೀನಾ ತೂಗುದೀಪ ದೇವರ ಮೊರೆ ಹೋಗಿದ್ದಾರ. ಈ ಹಿಂದೆ ಕೂಡ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ತಾಯಿ ಮಾತ್ರವಲ್ಲ ಪತ್ನಿ ವಿಜಯಲಕ್ಷ್ಮಿ ಕೂಡ ಸಾಕಷ್ಟು ದೇವರ ಮೊರೆ ಹೋಗಿದ್ದಾರೆ. ಕಂಡ ಕಂಡ ದೇವರಿಗೆ ಪ್ರಾರ್ಥನೆ ಮಾಡಿ ಬೇಡಿಕೆ ಇಟ್ಟಿದ್ದರು, ದರ್ಶನ್ ಹೊರ ಬರುತ್ತಿದ್ದಂತೆ ಸಮಯ ತೆಗೆದುಕೊಂಡು ಹರಕೆಯನ್ನು ತೀರಿಸುತ್ತಿದ್ದಾರೆ.

ಚಿಕ್ಕಣ್ಣನ ಜೊತೆ ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಮೊದಲ ದಿನವೇ ಕಣ್ಣೀರಿಟ್ಟ 'ಹಿಟ್ಲರ್ ಕಲ್ಯಾಣ' ನಟಿ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?