ಮೊಟ್ಟ ಮೊದಲ ಬಾರಿ ನಿರ್ಮಾಪಕರನ್ನು ಸಹಾಯ ಕೇಳಿದ ದರ್ಶನ್ ತಾಯಿ!

Published : Dec 03, 2019, 10:09 AM ISTUpdated : Dec 03, 2019, 10:31 AM IST
ಮೊಟ್ಟ ಮೊದಲ ಬಾರಿ ನಿರ್ಮಾಪಕರನ್ನು ಸಹಾಯ ಕೇಳಿದ ದರ್ಶನ್ ತಾಯಿ!

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಸಹಾಯ ಬೇಡಿ ಬಂದವರಿಗೆ ಎಂದು 'ನೋ' ಎನ್ನುವವರಲ್ಲ. ಆದರೆ ಇದೇ ಮೊದಲ ಬಾರಿಗೆ ದರ್ಶನ್‌ ತಾಯಿ ನಿರ್ಮಾಪಕ ಸಂದೇಶ್  ಅವರಿಗೆ ಕರೆ ಮಾಡಿ ಸಹಾಯ ಕೋರಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್ ಬಹು ನಿರೀಕ್ಷಿತ ಚಿತ್ರ 'ಒಡೆಯ' ತೆರೆ ಕಾಣಲು ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ.  ಕೆಲ ದಿನಗಳ ಹಿಂದೆ ಖಾಸಗಿ ಹೋಟೆಲ್‌ನಲ್ಲಿ ಪ್ರೆಸ್‌ ಮೀಟ್ ಕಾರ್ಯಕ್ರಮ ಮಾಡಲಾಗಿತ್ತು ಈ ವೇಳೆ ಚಿತ್ರತಂಡ ಅನೇಕ ವಿಚಾರಗಳನ್ನು ರಿವೀಲ್ ಮಾಡಿದೆ.

ಒಡೆಯನ ನಾಯಕಿ ಆಗಲು ದರ್ಶನ್ ಅಮ್ಮ ಕಾರಣ: ಸನ ತಿಮ್ಮಯ್ಯ!

ದಿನೇ ದಿನೇ ಕುತೂಹಲ ಹೆಚ್ಚಿಸುತ್ತಿರುವ ಒಡೆಯ ಚಿತ್ರ ತಂಡ ನಾಯಕಿಯನ್ನು ಆಯ್ಕೆ ಮಾಡಲು ತುಂಬಾ ಸುಲಭವಾಯಿತಂತೆ.  ದರ್ಶನ್ ತಾಯಿ ಮತ್ತು ನಟಿ ಸನಾ ತಿಮ್ಮಯ್ಯ ಅವರ ತಾಯಿ ಇಬ್ಬರು ಸ್ನೇಹಿತೆಯರು.  ತುಂಬಾ ವರ್ಷಗಳಿಂದ ಸನಾ ಪ್ರತಿಭೆಯನ್ನು ಕಂಡ ದರ್ಶನ್ ತಾಯಿ ಆಕೆಗೆ ದರ್ಶನ್‌ ಜೊತೆ ನಟಿಸುವ ಅವಕಾಶ ನೀಡಲು ನಿರ್ಮಾಪಕ ಸಂದೇಶ್‌ರನ್ನು ಕೇಳಿಕೊಂಡಿದ್ದರಂತೆ. ನಟಿಯ ಬಗ್ಗೆ ಏನೂ ಪ್ರಶ್ನೆ ಮಾಡದೇ ಸಂದೇಶ್ ಒಪ್ಪಿಕೊಂಡರಂತೆ! ಹೀಗಾಗಿ ನಾಯಕಿ ಆಯ್ಕೆ ಸುಲಭವಾಯಿತು. 

ಕನ್ನಡ ಪ್ರಭ ಜೊತೆ ಸಂದರ್ಶನಲ್ಲಿ ಮಾತನಾಡಿದ ಸನ್ನಿ ಮರೆಯಲಾಗದ ಘಟನೆಯನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ವೇಳೆ ಕೆಲ ಅಭಿಮಾನಿಗಳು 'ಡಿ ಬಾಸ್ ನಾಯಕಿಗೆ ಜೈ' ಎಂದಾಗ ಪಕ್ಕದಲ್ಲೇ ಇದ್ದ ಅವರ ತಾಯಿ ಎಮೋಷನಲ್‌ ಆದರಂತೆ!

ಅನ್ನದಾತನ ಧ್ವನಿ ಆದ ದಾಸ ದರ್ಶನ್..!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ