'ರಾಜವೀರ ಮದಕರಿ ನಾಯಕ'ನ ಹಿಂದಿದ್ದಾರೆ ಈ ನಾಲ್ಕು ಪ್ರಬಲ ವ್ಯಕ್ತಿಗಳು!

Published : Dec 08, 2019, 11:36 AM IST
'ರಾಜವೀರ ಮದಕರಿ ನಾಯಕ'ನ ಹಿಂದಿದ್ದಾರೆ ಈ ನಾಲ್ಕು ಪ್ರಬಲ ವ್ಯಕ್ತಿಗಳು!

ಸಾರಾಂಶ

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿರುವ ದರ್ಶನ್ - ರಾಕ್‌ಲೈನ್‌ ಕಾಂಬಿನೇಷನ್ ಚಿತ್ರದಲ್ಲಿ ಈ ನಾಲ್ವರು ಪ್ರಬಲ  ವ್ಯಕ್ತಿಗಳು ಇರುವುದು ಚಿತ್ರದ ಶಕ್ತಿ ಆಗಿದೆ. ಯಾರು ಆ ನಾಲ್ಕು ವ್ಯಕ್ತಿಗಳು? ಇಲ್ಲಿದೆ. 

ಸ್ಯಾಂಡಲ್‌ವುಡ್ ಬಾಕ್ಸಾಫೀಸ್ ಸುಲ್ತಾನ್ ದರ್ಶನ್‌ರನ್ನು ಸಂಗೊಳ್ಳಿ ರಾಯಣ್ಣ, ದುರ್ಯೋಧನ ಪಾತ್ರದಲ್ಲಿ ನೋಡಿದ್ದೀವಿ. ಈಗ ಡಿ-ಬಾಸ್‌ನ ಮದಕರಿ ನಾಯಕನಾಗಿ ನೋಡುವ ಸರದಿ ಶುರುವಾಗಿದೆ. ವಿ ರಾಜೇಂದ್ರ ಪ್ರಸಾದ್ ಆ್ಯಕ್ಷನ್‌ ಕಟ್‌ ರಾಕ್‌ಲೈನ್‌ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ 'ರಾಜವೀರ ಮದಕರಿ ನಾಯಕ' ಚಿತ್ರ ಈ ನಾಲ್ಕು ವ್ಯಕ್ತಿಗಳಿಂದ ಇನ್ನು ಹೆಚ್ಚು ಶಕ್ತಿ ಪಡೆದುಕೊಂಡಿದೆ.

ಡಿಸೆಂಬರ್ 6 ರಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮೂಲಕ ಚಿತ್ರದ ಮುಹೂರ್ತ ನೆರೆವೇರಿತ್ತು.  ಚಿತ್ರಕ್ಕೆ ಚಾಲನೆ ನೀಡಿದ ಸಂಸದೆ ಸುಮಲತಾ ಪುತ್ರ ದರ್ಶನ್‌ಗಾಗಿ ರಾಜಮಾತೆ ಪಾತ್ರದಲ್ಲಿ ಕಾಣಿಸಿಕೊಳ್ಳುವೆ ಎಂದು ಹೇಳಿದ್ದಾರೆ.

ಗಂಡುಗಲಿ ಮದಕರಿ ನಾಯಕ ಅಲ್ಲ, 'ರಾಜ ವೀರ ಮದಕರಿ ನಾಯಕ'!

ಇನ್ನು ಈ ಚಿತ್ರದ ಆ ನಾಲ್ಕು ಶಕ್ತಿಗಳು ಯಾರು? 

ವಿ.ರಾಜೇಂದ್ರ ಸಿಂಗ್ ಬಾಬು

ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ರಾಜೇಂದ್ರ ಸಿಂಗ್ ಮದಕರಿ ನಾಯಕನ ಪಾತ್ರದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ವ್ಯಕ್ತಿ. ಈ ಹಿಂದೆ ಮದಕರಿ ಚಿತ್ರ ಮಾಡುವ ನಿರ್ಧಾರ ಮಾಡಿದರು. ಆದರೆ ಕಾರಣಾಂತರಗಳಿಂದ ದೂರ ಉಳಿಯುತ್ತಿದ್ದರು. ಆದರೆ ಈಗ ಮತ್ತೊಮ್ಮೆ ಸಿನಿಮಾ ಮಾಡಲು ರಾಕ್‌ಲೈನ್‌ ಜೊತೆ ಕೈ ಜೋಡಿಸಿದ್ದಾರೆ.

ಬಿ ಎಲ್‌ ವೇಣು

'ಗಂಡುಗಲಿ ಮದಕರಿ ನಾಯಕ' ಕಾದಂಬರಿಗೆ ಜೀವ ಕೊಟ್ಟ ವ್ಯಕ್ತಿ ಬಿ ಎಲ್‌ ವೇಣು. ಅದರ ಆಧಾರಿತವಾಗಿಯೇ ಸಿನಿಮಾ ಮಾಡಲಾಗುತ್ತಿದೆ.  ಸ್ಕ್ರಿಪ್ಟ್‌ ಕೆಲಸ ಶುರುವಾಗಿದ್ದರೂ ವೇಣು ಅವರ ಕೊಡುಗೆ ಹೆಚ್ಚಿದೆ ಎನ್ನಲಾಗಿದೆ.

ಶಿವಣ್ಣ ಒಬ್ಬರೇ ಹ್ಯಾಟ್ರಿಕ್‌ ಹೀರೋ: ದರ್ಶನ್‌

ಶ್ರೀನಿವಾಸ್‌ ಮೂರ್ತಿ

ಬೆಳ್ಳಿ ತೆರೆಯ ಹಿರಿಯ ಕಲಾವಿದ  ಶ್ರೀನಿವಾಸ್ ಮೂರ್ತಿ. ಇತಿಹಾಸ ಕ್ರಿಯೇಟ್ ಮಾಡುವ ಮತ್ತೊಂದು ಐತಿಹಾಸಿಕ ಚಿತ್ರವನ್ನು ಮಾಡಬೇಕು ಎನ್ನುವ ರಾಕ್‌ಲೈನ್ ಅವರ ಯೋಚನೆಗೆ ಸರಿಯಾದ ಉತ್ತರ ನೀಡಿದವರು ಶ್ರೀನಿವಾಸ್‌ ಮೂರ್ತಿ. ಹಾಗೆ ಚಿತ್ರದಲ್ಲೂ ಒಂದು ಪಾತ್ರ ಮಾಡಲಿದ್ದಾರೆ.

ನಟ ದೊಡ್ಡಣ್ಣ

'ಮದಕರಿ ನಾಯಕ'ನ ಚಿತ್ರದಲ್ಲಿ ಪ್ರೊಡಕ್ಷನ್‌ ಹುಡುಗನಾಗಿ ಕೂಡ ಕೆಲಸ ಮಾಡುತ್ತೇನೆ ಎಂದು ಹೇಳಿರುವ ದೊಡ್ಡಣ್ಣ. ಸ್ಕ್ರಿಪ್ಟ್ ಕೆಲಸ  ಮತ್ತು ಸಂಶೋಧನೆಯಲ್ಲಿ ಹಿರಿಯಣ್ಣ ದೊಡ್ಡಣ್ಣ ಪಾತ್ರ ಹೆಚ್ಚಿದೆ.  ಈ ಚಿತ್ರದಲ್ಲಿ ದೊಡ್ಡಣ್ಣ ಅವರು ಅಭಿನಯಿಸುತ್ತಿದ್ದಾರೆ.

ಮೊಟ್ಟ ಮೊದಲ ಬಾರಿ ನಿರ್ಮಾಪಕರನ್ನು ಸಹಾಯ ಕೇಳಿದ ದರ್ಶನ್ ತಾಯಿ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
BBK 12: ಗೆಲ್ತಾರಾ ಗಿಲ್ಲಿ ನಟ..? ಈ ಮಂಡ್ಯದ ಹೈದ ನಟರಾಜ್‌ನ ಪ್ಲಸ್ & ಮೈನಸ್ ಏನು? ಸೀಕ್ರೆಟ್ ರಿವೀಲ್..!