
ಸಿನಿಮಾ ತಾರೆಯರೆಂದರೆ ಥಳಕು, ಬಳಕು ಜಾಸ್ತಿ. ತೆರೆ ಮೇಲೆ ಭೋದನೆ ಮಾಡಿ ಹೋಗುತ್ತಾರೆ ಎಂದು ಮೂಗು ಮುರಿಯುವವರೇ ಜಾಸ್ತಿ. ಆದರೆ ಎಲ್ಲರೂ ಭೇಷ್ ಎನ್ನುವಂತಹ ಕೆಲಸ ಮಾಡಿರುವ ಅಪರೂಪದ ವ್ಯಕ್ತಿಯೊಬ್ಬರು ಇಲ್ಲಿದ್ದಾರೆ ನೋಡಿ.
ಕೊರಿಯಾಗ್ರಫರ್, ನಟ, ನಿರ್ದೆಶಕ ರಾಘವ ಲಾರೆನ್ಸ್ ಸಾಮಾಜಿಕ ಕೆಲಸಗಳನ್ನು ಸದ್ದಿಲ್ಲದೇ ಮಾಡುತ್ತಿದ್ದಾರೆ. ಇವರು ರಾಘವ ಲಾರೆನ್ಸ್ ಹೆಸರಿನಲ್ಲಿ ಒಂದು ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಈ ಸಂಸ್ಥೆ ಮೂಲಕ 200 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ. ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಷ್ಟೇ ಅಲ್ಲ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 150 ಕ್ಕೂ ಹೆಚ್ಚು ಜನರಿಗೆ ನೆರವಾಗಿದ್ದಾರೆ. 60 ಕ್ಕೂ ಹೆಚ್ಚು ಜನರನ್ನು ದತ್ತು ತೆಗೆದುಕೊಂಡಿದ್ದಾರೆ.
ಲಾರೆನ್ಸ್ ಅವರು ಮೆಗಾಸ್ಟಾರ್ ಚಿರಂಜೀವಿ ಅವರ ಸಾಕಷ್ಟು ಸಿನಿಮಾಗಳಿಗೆ ಕೊರಿಯಾಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಇವರ ಸಾಮಾಜಿಕ ಕೆಲಸಕ್ಕೆ ಚಿರಂಜೀವಿ ಕೂಡಾ ಸಾಥ್ ನೀಡಿದ್ದಾರೆ. ಇವರ ಟ್ರಸ್ಟ್ ಗೆ 10 ಲಕ್ಷ ರೂ ಸಹಾಯ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.