ಡಬ್ಬಿಂಗ್‌ನಲ್ಲಿ ಯಾವತ್ತೂ ಇಷ್ಟುಕಷ್ಟಅನುಭವಿಸಿರಲಿಲ್ಲ: ರವಿಶಂಕರ್‌

Published : Sep 23, 2021, 09:21 AM IST
ಡಬ್ಬಿಂಗ್‌ನಲ್ಲಿ ಯಾವತ್ತೂ ಇಷ್ಟುಕಷ್ಟಅನುಭವಿಸಿರಲಿಲ್ಲ: ರವಿಶಂಕರ್‌

ಸಾರಾಂಶ

ಬಯಲುಸೀಮೆ ಚಿತ್ರಕ್ಕೆ ಉತ್ತರ ಕರ್ನಾಟಕ ಸೊಗಡಿನ ಭಾಷೆಯಲ್ಲಿ ಡಬ್ಬಿಂಗ್ ಮುಗಿಸಿದ ನಟ ರವಿಶಂಕರ್. 

‘ಈವರೆಗೆ 4000ಕ್ಕೂ ಅಧಿಕ ಸಿನಿಮಾಗಳಿಗೆ ಡಬ್ಬಿಂಗ್‌ ಮಾಡಿದ್ದೀನಿ. ಆದರೆ ಈ ‘ಬಯಲುಸೀಮೆ’ ಚಿತ್ರದ ಡಬ್ಬಿಂಗ್‌ನಷ್ಟುಯಾವುದೂ ಕಷ್ಟವಾಗಿರಲಿಲ್ಲ’ ಎಂದು ನಟ ರವಿಶಂಕರ್‌ ಹೇಳಿದ್ದಾರೆ. ಅವರಿಗೆ ಈ ಮಟ್ಟಿಗೆ ಕಷ್ಟವಾಗಲು ಕಾರಣ ಉತ್ತರ ಕರ್ನಾಟಕ ಸೊಗಡಿನ ಭಾಷೆ.

‘ಬಹಳ ವೇಗವಾಗಿ ಡಬ್ಬಿಂಗ್‌ ಮುಗಿಸೋ ಅಭ್ಯಾಸ ನನ್ನದು. ಆದರೆ ನನ್ನ ಈವರೆಗಿನ ಡಬ್ಬಿಂಗ್‌ ಕೆರಿಯರ್‌ನಲ್ಲಿ ಇದೇ ಮೊದಲ ಬಾರಿಗೆ ‘ಬಯಲುಸೀಮೆ’ ಚಿತ್ರದ ನನ್ನ ಪಾತ್ರಕ್ಕೆ ಡಬ್ಬಿಂಗ್‌ ಮಾಡಲು ನಾಲ್ಕು ದಿನ ತೆಗೆದುಕೊಳ್ಳುತ್ತಿದ್ದೇನೆ. ಇಲ್ಲಿನ ಉತ್ತರ ಕರ್ನಾಟಕ ಭಾಷೆಯ ಫಿನಿಷಿಂಗ್‌ ಕಷ್ಟ, ಅಷ್ಟೇ ಸುಂದರ. ಅದಕ್ಕಾಗಿ ಕಷ್ಟಪಡುತ್ತಿದ್ದೇನೆ. ಈ ಚಿತ್ರದಲ್ಲಿ ನನ್ನದು ಆರ್ಭಟವಿಲ್ಲದ, ನಾಗಾಭರಣ ಅವರ ಎದುರಾಳಿ ಶಂಕರ್‌ ಅಣ್ಣಾವರ್‌ ಎಂಬ ಪಾತ್ರ’ ಎನ್ನುತ್ತಾರೆ ರವಿಶಂಕರ್‌.

ಕಾಣೆಯಾದವರ ಪ್ರಕಟಣೆಯಲ್ಲಿ ರವಿಶಂಕರ್!

‘ಬಯಲು ಸೀಮೆ’ ಚಿತ್ರದ ಶೂಟಿಂಗ್‌ ಬಹುತೇಕ ಮುಗಿದಿದೆ. ಇಡೀ ಚಿತ್ರವನ್ನು ಉತ್ತರ ಕರ್ನಾಟಕದ ಗಜೇಂದ್ರಗಡದ ಕೋಟೆ, ಊರಿನಲ್ಲಿ ಚಿತ್ರೀಕರಿಸಲಾಗಿದೆ. ಸುದ್ದಿಗೋಷ್ಟಿಯಲ್ಲಿ ನಿರ್ದೇಶಕ ವರುಣ್‌ ಕಟ್ಟೀಮನಿ, ನಿರ್ಮಾಪಕ ಶ್ರೀಧರ್‌ ಬಿದರಳ್ಳಿ, ಸಂಗೀತ ನಿರ್ದೇಶಕಿ ಮಾನಸ ಹೊಳ್ಳ ಹಾಗೂ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೆಂಪು ಸೀರೆಯಲ್ಲಿ Radhika Pandit ಮಿಂಚಿದ್ದೇ ತಡ… ‘ರಾಮಾಯಣ’ದ ಸೀತೆ ಪಾತ್ರಕ್ಕೆ ಇವರೇ ಬೆಸ್ಟ್ ಎಂದ ಬಾಲಿವುಡ್
ಲಂಡನ್‌ನಲ್ಲಿ ನಟನಾ ತರಬೇತಿ, ಸಿಟಿ ಲೈಟ್ಸ್‌ನಲ್ಲಿ ವಿಭಿನ್ನ ಪಾತ್ರ: ದುನಿಯಾ ವಿಜಯ್ ಪುತ್ರಿ ಹೇಳಿದ್ದೇನು?