ಸ್ವದೇಶಿ ಆಂದೋಲನ ಆರಂಭಿಸಿ ಭಾರತವನ್ನು ಬೆಳೆಸೋಣ; ಸಿಹಿ ಕಹಿ ಚಂದ್ರು

Suvarna News   | Asianet News
Published : Apr 09, 2020, 04:33 PM ISTUpdated : Apr 09, 2020, 04:49 PM IST
ಸ್ವದೇಶಿ ಆಂದೋಲನ ಆರಂಭಿಸಿ ಭಾರತವನ್ನು ಬೆಳೆಸೋಣ; ಸಿಹಿ ಕಹಿ ಚಂದ್ರು

ಸಾರಾಂಶ

ಕೊರೋನಾ ವೈರಸ್‌ನಿಂದ ಭಾರತಕ್ಕೆ ಆಗುತ್ತಿರುವ ನಷ್ಟವನ್ನು ಸುಧಾರಿಸಲು ಹಾಗೂ ವೃದ್ಧಿಸಲು ಸ್ವದೇಶಿ ಸಾಮಾಗ್ರಿಗಳನ್ನು  ಖರೀದಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ  ಚಂದ್ರು.  

ಕನ್ನಡ ಸಿನಿ ರಸಿಕರ ಹಾಗೂ ಕಿರುತೆರೆ ಪ್ರೇಮಿಗಳ ಸ್ವೀಟ್‌ ಅfಯಂಡ್‌ ಬಿಟರ್ ಮ್ಯಾನ್‌ ಚಂದ್ರು ಕೊರೋನಾ ವೈರಸ್‌ನಿಂದ ಭಾರತಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ನಮ್ಮ ಭಾರತದ ವಸ್ತುಗಳನ್ನೇ  ಖರೀದಿ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಿಹಿ-ಕಹಿ ಚಂದ್ರು ಕಿರಿಯ ಪುತ್ರಿ 'ಖುಷಿ' ಹೀಗಿದ್ದಾರೆ ನೋಡಿ!

ಲಾಕ್‌ಡೌನ್‌ನಿಂದ ಜನರು ಹೊರ ಬಂದ ನಂತರ ತಮಗೆ  ಬೇಕಾದ ಸಾಮಾನುಗಳನ್ನ ಹಾಗೂ ಬಯಸುವ ಸ್ಥಳಕ್ಕೆ ಪಯಣ ಮಾಡಲು ಆರಂಭಿಸುತ್ತಾರೆ. ವಿದೇಶಕ್ಕೆ ಹೋಗಿ ಅಲ್ಲಿನ ಆರ್ಥಿಕತೆ ಹೆಚ್ಚಿಸುವ ಬದಲು ಭಾರತದಲ್ಲೇ ಅದನ್ನು ಮಾಡಬೇಕು.

'ಕೊರೋನಾ ವೈರಸ್‌ ನಮ್ಮಿಂದ ಸಂಪೂರ್ಣವಾಗಿ ದೂರವಾದಾಗ ನಾವು ನಮ್ಮ ದೇಶದ ಪರವಾಗಿ ನಿಲ್ಲೋಣ. ನಮ್ಮ ರಜೆಗಳನ್ನು ಭಾರತದಲ್ಲೇ ಕಳೆಯೋಣ, ಇಂಡಿಯನ್‌ ಲೋಕಲ್‌ ಹೋಟೆಲ್‌ನಲ್ಲಿ ಆಹಾರ ಸೇವಿಸೋಣ ,  ಇಲ್ಲಿಯದೇ ಬ್ರ್ಯಾಂಡ್‌ ಬಟ್ಟೆಗಳನ್ನು ಖರೀದಿಸೋಣ ಇದರಿಂದ ನಮ್ಮ ಲೋಕಲ್‌ನವರಿಗೆ ವ್ಯಾಪಾರ ಹೆಚ್ಚಾಗುತ್ತದೆ. ಇಲ್ಲವಾದರೆ ಜೀವನ ನಡೆಸುವುದಕ್ಕೂ ಇವರುಗಳು ಕಷ್ಟ ಪಡಬೇಕಾದ ಪರಿಸ್ಥಿತಿ  ಎದುರಾಗುತ್ತದೆ. ಈಗಾಗಲೇ  ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದಾರೆ. ಈ ರೀತಿಯಲ್ಲಾದರೂ  ನಮ್ಮ ಕೈಲಾದಷ್ಟು ಸಹಾಯ ಮಾಡೋಣ. ಭಾರತವನ್ನು ಆ ದೇವರೇ ಕಾಪಾಡಬೇಕು. ಬನ್ನಿ  ಸ್ವದೇಶಿ  ಆಂದೋಲನ ಶುರು ಮಾಡೋಣ ' ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

‘ನೀನಾದೆ ನಾ’ ಹಾಡು 100 Million Views ದಾಟಿದ ಖುಷಿಯಲ್ಲಿ ‘ಯುವರತ್ನ’ ನಾಯಕಿ ಸಯ್ಯೇಷಾ ಸೈಗಲ್
ಬಿಗ್ ಬಜೆಟ್ '45' ಅದ್ದೂರಿ ಇವೆಂಟ್, ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನೇರ ಪ್ರಸಾರ!