ಲೆಕ್ಕ ಮುಖ್ಯವಲ್ಲ, ಜನ ಮೆಚ್ಚುಗೆ ಮುಖ್ಯ: ಅಪೂರ್ವ

Published : Mar 07, 2019, 10:31 AM IST
ಲೆಕ್ಕ ಮುಖ್ಯವಲ್ಲ, ಜನ ಮೆಚ್ಚುಗೆ ಮುಖ್ಯ: ಅಪೂರ್ವ

ಸಾರಾಂಶ

‘ಅಪೂರ್ವ’ ಚಿತ್ರಕ್ಕಾಗಿ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಶೋಧಿಸಿ ತಂದ ನಟಿ ಅಪೂರ್ವ ಈಗ ‘ಮೊಡವೆ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.  

ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ಅಭಿನಯದ ಚೊಚ್ಚಲ ಚಿತ್ರ. ಯುವ ಪ್ರತಿಭೆ ಸಿದ್ದಾರ್ಥ್ ಮರೆದೆಪ್ಪ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಶಿವಾನಂದ ಹಾಗೂ ಕೃಷ್ಣ ಮೂರ್ತಿ ಇದರ ನಿರ್ಮಾಪಕರು. ಸದ್ಯಕ್ಕೀಗ ಈ ಚಿತ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಅಪೂರ್ವ ಹೊಸ ಅವಕಾಶಗಳತ್ತಲೂ ಮುಖ ಮಾಡಿದ್ದಾರೆ. ಅದಕ್ಕಾಗಿಯೇ ಈಗ ಚೆಂದದೊಂದು ಫೋಟೋ ಶೂಟ್ ಮಾಡಿಸಿ, ಹೊಸ ಲುಕ್‌ನಲ್ಲಿ ಮಿಚುತ್ತಿದ್ದಾರೆ.

‘ನಟ-ನಟಿಯರು ಹೊಸದಾಗಿ ಪೋಟೋಶೂಟ್ ಮಾಡಿಸಿದಾಗ ಹೊಸ ಅವಕಾಶಗಳಿಗಾಗಿಯೇ ಮಾಡಿಸಿದ್ದುಅಂತಂದುಕೊಳ್ಳುವುದು ಸರ್ವೇ ಸಾಮಾನ್ಯ. ಅದರಾಚೆ ಪ್ರೊಫೈಲ್‌ಗೂ ಇರಲಿ ಅಂತಲೂ ನಟ-ನಟಿಯರು ಫೋಟೋಶೂಟ್ ಮಾಡಿಸುತ್ತಾರೆನ್ನುವುದು ಕೂಡ ಸತ್ಯ. ನನಗೆ ಅಂತಹದೊಂದು ಪ್ರೊಫೈಲ್‌ಗೂ ಬೇಕಿತ್ತು, ಜತೆಗೆ ಹೊಸದೊಂದು ಚಿತ್ರಕ್ಕೂ ಬೇಕಿತ್ತು. ಹಾಗಾಗಿ ಈ ಫೋಟೋಶೂಟ್ ಮಾಡಿಸಿದ್ದೇನೆ. ಇಷ್ಟರಲ್ಲೇ ಆ ಸಿನಿಮಾ ಯಾವುದು ಎನ್ನುವುದು ಬಹಿರಂಗವಾಗಲಿದೆ. ಅದಿನ್ನು ಮಾತುಕತೆ ಹಂತದಲ್ಲಿದೆ’ಎನ್ನುತ್ತಾರೆ ನಟಿ ಅಪೂರ್ವ.

ನನಗೆ ಸಾಕಷ್ಟು ಅವಕಾಶಗಳು ಬರುತ್ತಿವೆ. ಹಾಗಂತ ಸಿಕ್ಕ ಅವಕಾಶಗಳನ್ನು ಒಪ್ಪಿಕೊಂಡು ಅಭಿನಯಸಬೇಕು ಎನ್ನುವ ಸಿದ್ಧಾಂತ ನಂದಲ್ಲ. ನಟನೆಗೆ ಅವಕಾಶ ಇರುವಂತಹ ಪಾತ್ರಗಳು ಸಿಗಬೇಕು, ಆ ಪಾತ್ರಗಳು ಪ್ರೇಕ್ಷಕರಿಗೂ ಇಷ್ಟ ಆಗಬೇಕು. ಎಷ್ಟು ಸಿನಿಮಾಗಳು ಎನ್ನುವ ಲೆಕ್ಕಕ್ಕಿಂತ ಎಂತಹ ಸಿನಿಮಾ ಮಾಡಿದ್ದೇನೆ ಎನ್ನುವುದು ಮುಖ್ಯವಾಗಬೇಕು.- ಅಪೂರ್ವ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?