ಬಾಡಿ, ಬಣ್ಣ, ಸಂಬಂಧದ ಬಗ್ಗೆ ಟ್ರೋಲ್ ಮಾಡುತ್ತಾರೆ, ಕಷ್ಟವಾಗುತ್ತದೆ: ರಶ್ಮಿಕಾ ಮಂದಣ್ಣ

Suvarna News   | Asianet News
Published : Aug 08, 2021, 02:17 PM ISTUpdated : Aug 08, 2021, 02:30 PM IST
ಬಾಡಿ, ಬಣ್ಣ, ಸಂಬಂಧದ ಬಗ್ಗೆ ಟ್ರೋಲ್ ಮಾಡುತ್ತಾರೆ, ಕಷ್ಟವಾಗುತ್ತದೆ: ರಶ್ಮಿಕಾ ಮಂದಣ್ಣ

ಸಾರಾಂಶ

ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟಕ್ಕೆ ಹೆಸರು ಮಾಡಲು ಮುಂದಾಗುತ್ತಿರುವ ರಶ್ಮಿಕಾ ಮಂದಣ್ಣ ಟ್ರೋಲ್‌ ಪೇಜ್‌ಗಳನ್ನು ಎದುರಿಸಿದ್ದು ಹೀಗೆ...

ಭಾರತೀಯ ಚಿತ್ರರಂಗದ ನ್ಯಾಷನಲ್‌ ಕ್ರಶ್ ರಶ್ಮಿಕಾ ಮಂದಣ್ಣ ಹಲವು ವರ್ಷಗಳ ನಂತರ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್‌ಗಳ ಬಗ್ಗೆ ಹಂಚಿಕೊಂಡ ರಶ್ಮಿಕಾ ಟ್ರೋಲ್ ಪೇಜ್‌ಗಳನ್ನು ಎದುರಿಸಿದ್ದು ಹೇಗೆ ಎಂದು ರಿವೀಲ್ ಮಾಡಿದ್ದಾರೆ. 

ರಶ್ಮಿಕಾ ವೃತ್ತಿ ಜೀವನದ ಗ್ರಾಫ್ ಎತ್ತರಕ್ಕೆ ಏರುತ್ತಿದೆ ಆದರೆ ಒಮ್ಮ ವೈಯಕ್ತಿಕ ಜೀವನದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಟ್ರೋಲ್‌ಗೆ ಗುರಿಯಾದರು. ಈ ಪರಿಸ್ಥಿತಿಯನ್ನು ಪೋಷಕರ ಜೊತೆ ಎದುರಿಸಿದ್ದ ರಶ್ಮಿಕಾ ಮಂದಣ್ಣ ಹೇಗೆ ನಿಭಾಯಿಸಿದ್ದರು ಎಂದು ಹೇಳಿಕೊಂಡಿದ್ದಾರೆ. 'ಪ್ರಾರಂಭದಲ್ಲಿ ಇದು ತುಂಬಾನೇ ಕಷ್ಟವಾಗಿತ್ತು. ನಮ್ಮ ಕುಟುಂಬ ಸಿನಿಮಾ ಬ್ಯಾಗ್ರೌಂಡ್‌ನಿಂದ ಬಂದಿದ್ದಲ್ಲ. ನನಗೆ ಎಲ್ಲವೂ ಹೊಸದಾಗಿತ್ತು. ಜನರು ನನ್ನನ್ನು ಟ್ರೋಲ್ ಮಾಡುತ್ತಿದ್ದರು, ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದರು. ಇದರಿಂದ ನನಗೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಆಗಿತ್ತು' ಎಂದು ರಶ್ಮಿಕಾ ಮಾತನಾಡಿದ್ದಾರೆ. 

ರಶ್ಮಿಕಾ ಸಿಕ್ಕಾಪಟ್ಟೆ ಬ್ಯುಸಿ, ಪೋಷಕರಿಗೆ ಮುನಿಸು!

'ಜನರು ನಿಮ್ಮ ಬಾಡಿ, ಬಣ್ಣ, ಸಂಬಂಧ ಸೇರಿದಂತೆ ಎಲ್ಲದರ ಬಗ್ಗೆಯೂ ಟ್ರೋಲ್ ಮಾಡುತ್ತಾರೆ. ಕೆಲವೊಂದು ಸಲ ತುಂಬಾನೇ ನೋವಾಗಿತ್ತು. ಕೆಲಸದ ಬಗ್ಗೆ ಮಾತನಾಡಿ, ಆದರೆ ಯಾಕೆ ನನ್ನ ಬಾಲ್ಯದ ಪೋಟೋ, ನನ್ನ ಕುಟುಂಬದ ಬಗ್ಗೆ ಕಾಮೆಂಟ್ ಮಾಡುವುದು ಸರಿಯಲ್ಲ. ನನ್ನ 19ನೇ ವಯಸ್ಸಿನಲ್ಲಿ ನನಗೆ ಟ್ರೋಲ್ ಕಾಟ ಶುರುವಾಗಿತ್ತು. ಈಗ ನನಗೆ ಅದೆಲ್ಲಾ ಮ್ಯಾಟರ್ ಆಗಲ್ಲ. ಹಾ ಹಾ ಎಂದು ನಗುತ್ತೇನೆ ಅಷ್ಟೆ. ಜನ ನಾನ್ ಸ್ಟಾಪ್ ಪಂಚ್ ಮಾಡುತ್ತಲೇ ಇದ್ದಾಗ ಮಾಡಿ ಎಂದು ಸುಮ್ಮನಾಗುತ್ತೇನೆ. ಜನರು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ . ಎಲ್ಲಾ ಕಡೆ ಕೆಟ್ಟದ್ದು ಮತ್ತು ಒಳ್ಳೆಯದು ಎರಡು ಇರುತ್ತದೆ.  ಜನರು ನನ್ನ ಸಾನ್ವಿ ಎನ್ನುತ್ತಾರೆ, ಲಿಲ್ಲಿ ಎನ್ನುತ್ತಾರೆ, ಗೀತಾ ಎಂದು ಕರೆಯುತ್ತಾರೆ ಎಂದು ಸಂತೋಷವಾಗುತ್ತದೆ' ಎಂದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಶಿರಡಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!
34th Wedding Anniversary : ಅಂಬಿ ನೆನಪಲ್ಲಿ ಸುಮಲತಾ ಭಾವನಾತ್ಮಕ ಪೋಸ್ಟ್