
ಸುವರ್ಣ ವಾಹಿನಿಯು ಕನ್ನಡಿಗರಿಗೆ ಹಿಂದಿನಿಂದಲೂ ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ನಮ್ಮ ಲಚ್ಚಿ, ಕಥೆಯೊಂದು ಶುರುವಾಗಿದೆ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆ ಮನೆಯ ಮಾತಾಗಿದೆ. ಈ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲು ಸ್ಟಾರ್ ಸುವರ್ಣ ವಾಹಿನಿಯು "ಸುವರ್ಣ ಯುಗಾದಿ ಶುಭಾರಂಭ" ಎಂಬ ಕಾರ್ಯಕ್ರಮವನ್ನು ನಡೆಸಿದೆ.
ಯುಗಾದಿ ಹಬ್ಬವನ್ನು ಹೊಸತನದಿಂದ ಬರಮಾಡಿಕೊಳ್ಳಲು ಸ್ಟಾರ್ ಸುವರ್ಣ ವಾಹಿನಿಯು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಬೇವು ಬೆಲ್ಲದ ರುಚಿಯನ್ನು ಸವಿಯಲು ಕನ್ನಡ ಬೆಳ್ಳಿತೆರೆಯ ಕಲಾವಿದರ ಜೊತೆ ಸುವರ್ಣ ಪರಿವಾರದ ನಕ್ಷತ್ರಗಳು ಪಾಲ್ಗೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಆಗಮಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದಾರೆ. ನಟ ಡಾಲಿ ಧನಂಜಯ್ ಅವರ ರಗಡ್ ಡೈಲಾಗ್ ಗೆ ಕುಪ್ಪಳಿಸಿದ ಸುವರ್ಣ ಸ್ಟಾರ್ಸ್. ಗೋಲ್ಡನ್ ಕ್ವೀನ್ ಅಮೂಲ್ಯ ದಂಪತಿಗಳು ಈ ಯುಗಾದಿಯನ್ನು ಸ್ಟಾರ್ ಸುವರ್ಣದ ಜೊತೆ ಸಂಭ್ರಮಿಸಿದ್ದು ಖುಷಿ ತಂದಿದೆ. ಜೊತೆಗೆ ಕಾಂತಾರದ ಸಪ್ತಮಿ ಗೌಡ, ಸಾನಿಯಾ ಅಯ್ಯರ್, ವಾಸುಕಿ ವೈಭವ್ ಸೇರಿದಂತೆ ಇನ್ನಷ್ಟು ಕಲಾವಿದರು ಮನರಂಜನೆಯ ಹೂರಣವನ್ನು ನೀಡಿದ್ದಾರೆ. 'ಹೊಂಗನಸು' ಧಾರಾವಾಹಿ ಖ್ಯಾತಿಯ ಮುಕೇಶ್ ಗೌಡ ಆಗಮಿಸಿದ್ದು ಇದೇ ಮೊದಲ ಬಾರಿಗೆ ಡಬ್ಬಿಂಗ್ ಧಾರಾವಾಹಿಯ ಕಲಾವಿದರನ್ನು ಕಾರ್ಯಕ್ರಮದಲ್ಲಿ ಕಾಣಬಹುದು.
ಮಾರ್ಚ್ 6 ರಿಂದ 'ಸ್ಟಾರ್ ಸುವರ್ಣ'ದಲ್ಲಿ ಇಡೀ ದೇಶ ಗೆದ್ದ ಗೃಹಿಣಿಯ ಕಥೆ 'ಅನುಪಮ'
ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ಈ ಯುಗಾದಿಯಿಂದ ಹೊಸತನದ ಕಾರ್ಯಕ್ರಮಗಳ ಜೊತೆ, ಹೊಸ ಹುಮ್ಮಸ್ಸಿನಲ್ಲಿ ಇನ್ನಷ್ಟು ವರ್ಣಮಯಗೊಂಡು ನಿಮ್ಮ ಮುಂದೆ ಬರಲಿದೆ. ತಪ್ಪದೇ ವೀಕ್ಷಿಸಿ "ಸುವರ್ಣ ಯುಗಾದಿ ಶುಭಾರಂಭ" ಮಾರ್ಚ್ 19 ರಂದು ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಹೊಸತನಕ್ಕೆ ಇನ್ನೊಂದು ಹೆಸರು "ಸ್ಟಾರ್ ಸುವರ್ಣ".
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.