Arjun Gowda: ಪ್ರಿಯಾಂಕ ತಿಮ್ಮೇಶ್ 'ಕನವರಿಕೆ'ಯಲ್ಲಿ ಏಕಾಂಗಿಯಾದ ಪ್ರಜ್ವಲ್ ದೇವರಾಜ್

By Suvarna NewsFirst Published Dec 9, 2021, 4:38 PM IST
Highlights


ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಚಿತ್ರ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಚಿತ್ರತಂಡ ಚಿತ್ರದ ಬ್ಯೂಟಿಫುಲ್ ಲಿರಿಕಲ್ ಹಾಡೊಂದನ್ನು ಬಿಡುಗಡೆ ಮಾಡಿದೆ. 

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಪ್ರಿಯಾಂಕಾ ತಿಮ್ಮೇಶ್ (Priyanka Thimmesh) ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಚಿತ್ರ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಚಿತ್ರತಂಡ ಚಿತ್ರದ ಬ್ಯೂಟಿಫುಲ್ ಲಿರಿಕಲ್ ಹಾಡೊಂದನ್ನು ಬಿಡುಗಡೆ ಮಾಡಿದೆ. ಹೌದು! 'ಅರ್ಜುನ್ ಗೌಡ' ಚಿತ್ರದ 'ಕನವರಿಕೆ ನಿನ್ನದೇ ಚಡಪಡಿಕೆ ನಿನ್ನದೇ ' ಎಂಬ ಸಾಲಿನ ಹಾಡನ್ನು ಆನಂದ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಚಿತ್ರತಂಡ ಬಿಡುಗಡೆ ಮಾಡಿದೆ. ಸಿನಿರಸಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಹಾಡನ್ನು ಗುನುಗುತ್ತಿದ್ದಾರೆ.

ಈ ಬ್ಯೂಟಿಫುಲ್ ಮೆಲೋಡಿ ಹಾಡಿಗೆ ಧರ್ಮ ವಿಶ್ ಸಂಗೀತ ಸಂಯೋಜಿಸಿದ್ದು, ರಾಘವೇಂದ್ರ ಕಾಮತ್ ಸಾಹಿತ್ಯ ರಚಿಸಿದ್ದಾರೆ. ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದ್ದು, ಪ್ರಜ್ವಲ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಕಾಂಬಿನೇಷನ್ ಕೆಮಿಸ್ಟ್ರಿ ಅದ್ಭುತವಾಗಿ ಮೂಡಿಬಂದಿದೆ. ಆ್ಯಕ್ಷನ್ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ಧೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದ ರಾಮು ಫಿಲಂಸ್ ಸಂಸ್ಥೆಯ ಕೋಟಿ ನಿರ್ಮಾಪಕ ಎಂದೇ ಹೆಸರುವಾಸಿಯಾದ ರಾಮು (Ramu) ಅವರು ಬಂಡವಾಳ ಹೂಡಿದ್ದಾರೆ. ಈಗಾಗಲೇ 'ಅರ್ಜುನ್ ಗೌಡ' ಚಿತ್ರದ ಫಸ್ಟ್‌ಲುಕ್, ಟೀಸರ್, ಹಾಗೂ ಟ್ರೇಲರ್ ಬಿಡುಗಡೆಯಾಗಿ ಸಾಕಷ್ಟು ಗಮನ ಸೆಳೆದಿದೆ. 

Mafia: ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಹೊಸ ಚಿತ್ರಕ್ಕೆ ಮುಹೂರ್ತ

ಈಗಾಗಲೇ ಅರ್ಜುನ್ ಗೌಡ ಸಿನಿಮಾದ ಟ್ರೇಲರ್ (Trailer) ರಿವೀಲ್ ಆಗಿದ್ದು, ಬೇರೆ ಭಾಷೆಯ ವಿತರಕರು ಹಾಗೂ ನಿರ್ಮಾಪಕರು ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಲಾಕ್​ಡೌನ್​ ಆಗದೆ ಹೋಗಿದ್ದರೆ ಈ ಚಿತ್ರ ಏಪ್ರಿಲ್​​ನಲ್ಲಿ ಬಿಡುಗಡೆಯಾಗಬೇಕಿತ್ತು. ಅಲ್ಲದೇ ಚಿತ್ರದ ನಿರ್ಮಾಪಕರಾದ ರಾಮು ಅವರು ಕೊರೊನಾಗೆ ಬಲಿಯಾಗಿದ್ದರಿಂದ ಸಿನಿಮಾದ ಬಿಡುಗಡೆಗೆ ತಡವಾಯಿತು. 'ಅರ್ಜುನ್ ಗೌಡ' ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ (U/A Certificate) ಸಿಕ್ಕಿದ್ದು, ನಿರ್ದೇಶಕ ಶಂಕರ್ (Shankar) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. 



ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಈ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ. ಅಲ್ಲದೇ ಸಾಹಸ ನಿರ್ದೇಶಕ ಮಾಸ್ ಮಾದ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳನ್ನ ಕಂಪೋಸ್ ಮಾಡಿದ್ದಾರೆ. ಬಾಲಿವುಡ್​​ನ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಸೇರಿದಂತೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Arjun Gowda: ಬೆಳ್ಳಿಪರದೆ ಮೇಲೆ ಎಂಟ್ರಿ ಕೊಡಲು ಸಜ್ಜಾದ ಪ್ರಜ್ವಲ್ ದೇವರಾಜ್

ಇನ್ನು ಪ್ರಜ್ವಲ್ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಸದ್ಯ 'ಮಾಫಿಯಾ' (Mafia) ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಮುಹೂರ್ತ ಸಮಾರಂಭ ಜರುಗಿದ್ದು, ದುನಿಯಾ ವಿಜಯ್‌, ಪ್ರಿಯಾಂಕ ಉಪೇಂದ್ರ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಲೋಹಿತ್ (Lohith) ಅವರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ, ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ (Aditi Prabhudeva) ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆಯಿದೆ. ಹಾಗೂ ಖದರ್‌ ಕುಮಾರ್‌ ನಿರ್ದೇಶನದ 'ವೀರಂ' ಸಿನಿಮಾದಲ್ಲಿಯೂ  ಪ್ರಜ್ವಲ್​ ದೇವರಾಜ್ ಕಾಣಿಸಿಕೊಳ್ಳುತ್ತಿದ್ದಾರೆ.
 

click me!