ಬಟ್ಟೆ ಬದಲಾಯಿಸುತ್ತಿದ್ದ ಸ್ಟಾರ್ ನಟಿ ರೂಮಿಗೆ ನುಗ್ಗಿದ ನಿರ್ದೇಶಕ; ಅಲ್ಲಿದ್ದವರಿಗೆ ಗಾಬರಿ ಆಗುವಂತೆ ಕೂಗಿದ್ದು ನಿಜವೇ?

Published : Apr 02, 2025, 11:25 AM ISTUpdated : Apr 02, 2025, 11:33 AM IST
ಬಟ್ಟೆ ಬದಲಾಯಿಸುತ್ತಿದ್ದ ಸ್ಟಾರ್ ನಟಿ ರೂಮಿಗೆ ನುಗ್ಗಿದ ನಿರ್ದೇಶಕ; ಅಲ್ಲಿದ್ದವರಿಗೆ ಗಾಬರಿ ಆಗುವಂತೆ ಕೂಗಿದ್ದು ನಿಜವೇ?

ಸಾರಾಂಶ

ಸಿನಿಮಾ ರಂಗದಲ್ಲಿ ಮಹಿಳೆಯರು ಕಾಸ್ಟಿಂಗ್ ಕೌಚ್‌ನಂತಹ ಕಹಿ ಅನುಭವಗಳನ್ನು ಎದುರಿಸುತ್ತಾರೆ. ನಟಿ ಶಾಲಿನಿ ಪಾಂಡೆ, ಚಿತ್ರೀಕರಣದ ವೇಳೆ ನಿರ್ದೇಶಕರು ಅನುಚಿತವಾಗಿ ವರ್ತಿಸಿದಾಗ ತಕ್ಷಣವೇ ಪ್ರತಿಭಟಿಸಿದರು. ಇಂತಹ ಸಂದರ್ಭಗಳಲ್ಲಿ ತಕ್ಷಣಕ್ಕೆ ಪ್ರತಿಕ್ರಿಯಿಸುವುದು ಉತ್ತಮವೆಂದು ಅವರು ಅಭಿಪ್ರಾಯ ಪಡುತ್ತಾರೆ. ಇಷ್ಟವಿಲ್ಲದ ವಿಷಯಗಳನ್ನು ನೇರವಾಗಿ ಹೇಳಿ ಸರಿಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಸಿನಿಮಾ ಇಂಡಸ್ಟ್ರಿ ಯಾವುದೇ ಆಗಿರಲಿ ಹೆಣ್ಣುಮಕ್ಕಳಿಗೆ ಒಂದಲ್ಲ ಒಂದು ರೀತಿಯಲ್ಲಿ ಮರೆಯಲಾಗದ ಕಹಿ ಘಟನೆಗಳನ್ನು ಎದುರಿಸಿರುತ್ತಾರೆ.ಕಾಸ್ಟಿಂಗ್ ಕೌಸ್, ಮೀ ಟೂ ಪ್ರಕರಣ, ಹೇಮಾ ಕಮಿಟಿ ಏನೇ ಬಂದಲಿ ಬಿಡಲಿ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಇರುವುದಿಲ್ಲ. ಸಮಸ್ಯೆ ಸರಿ ಹೋಗುತ್ತೋ ಶಿಕ್ಷೆ ಸಿಗುತ್ತೋ ಇಲ್ವೋ ಅನ್ನೋ ಗೊಂದಲದಲ್ಲಿ ಇರುವ ಬದಲು ಆ ಕ್ಷಣವೇ ರಿಯಾಕ್ಟ್ ಮಾಡುವುದು ಉತ್ತಮ. ಇದಕ್ಕೆ ಉಹಾರಣೆ ನಟಿ ಶಾಲಿನಿ ಪಾಂಡೆ ಜೀವನದಲ್ಲಿ ನಡೆದ ಘಟನೆ. 

ಹೌದು! ಅರ್ಜುನ್ ರೆಡ್ಡಿ ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಶಾಲಿನಿ ಪಾಂಡೆ ಮರೆಯಲಾಗದ ಘಟನೆ ಹಂಚಿಕೊಂಡಿದ್ದಾರೆ. ಶಾಲಿನಿ ತಮ್ಮ ಸಿನಿಮಾ ಚಿತ್ರೀಕರಣ ಮುಗಿಸಿ ಬಟ್ಟೆ ಬದಲಾಯಿಸಿಕೊಳ್ಳಲು ನೀಡಿದ್ದ ವ್ಯಾನಿಟಿ ವಾನ್‌ಗೆ ಎಂಟ್ರಿ ಕೊಡುತ್ತಾರೆ. ಅರ್ಧ ಬಟ್ಟೆ ಬದಲಾಯಿಸುತ್ತಿದ್ದಂತೆ ಇದ್ದಕ್ಕಿದ್ದಂತೆ ಬಾಗಿಲು ತೆಗೆದುಕೊಂಡು ನಿರ್ದೇಶಕರು ಪ್ರವೇಶಿಸುತ್ತಾರೆ. ಭಯ ಪಡದೆ ಶಾಲಿನಿ ಸುಮ್ಮನಾಗಲಿಲ್ಲ ಬದಲಿಗೆ ತಕ್ಷಣವೇ ಜೋರಾಗಿ ಕೂಗಿದ್ದಾರೆ. ಬಟ್ಟೆ ಬದಲಾಯಿಸಿಕೊಂಡು ಬಂದು ನಿರ್ದೇಶಕರ ಮೇಲೆ ಕೂಗಾಗಿದ್ದಾರೆ. ಈ ಘಟನೆ ನಡೆದಾಗ ಪಕ್ಕದಲ್ಲಿ ಇದ್ದವರು ಗಾಬರಿ ಆಗಿದ್ದಾರೆ ಮುಂದೆಕ್ಕೆ ಸಿನಿಮಾ ಮಾಡ್ಬೇಕು ಜಗಳ ಮಾಡಿಕೊಳ್ಳಬೇಡ ಎಂದಿದ್ದಾರೆ.

ಅಜ್ಜಿ ಕೊಟ್ಟ ಸೀರೆ ಹಾಕ್ಬೇಕು ಅಂತ ರಾಜ್ಯ ಪ್ರಶಸ್ತಿಗೆ ಆಸೆ ಪಡ್ತಿದ್ದೀನಿ, ಮದುವೆ ದೂರದ ಮಾತು: ಸಾಯಿ ಪಲ್ಲವಿ

'ನಾನು ಒಂದು ನಿಮಿಷವೂ ಯೋಚನೆ ಮಾಡದೆ ರಿಯಾಕ್ಟ್ ಮಾಡಿದ್ದೀನಿ. ನಮ್ಮ ಸುತ್ತನಾವೇ ಬೌಂಡರಿಗಳನ್ನು ಕ್ರಿಯೇಟ್ ಮಾಡಿಕೊಳ್ಳಬೇಕು. ಇಷ್ಟವಾಗಲಿಲ್ಲ ಅಂದ್ರೆ ನೇರವಾಗಿ ಹೇಳಿ ಸರಿ ಮಾಡಿಕೊಳ್ಳಬೇಕು. ಮಾಡಿದ್ದು ಒಂದೇ ಸಿನಿಮಾ ಹಿಟ್ ಆಗಿರುವುದು ಒಂದೇ ಸಿನಿಮಾ ಯಾಕೆ ಜೋರಾಗಿ ಕೂಗಾಡಬೇಕು ಎಂದು ಪ್ರಶ್ನೆ ಮಾಡಿದವರಿಗೂ ನಾನು ಉತ್ತರ ಕೊಟ್ಟಿದ್ದೀನಿ. ಘಟನೆ ನಡೆದ ಮೇಲೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡಬೇಕು ಯಾವ ರೀತಿಯಲ್ಲಿ ಬುದ್ಧಿ ಕಲಿಸಿದರೆ ಬೆಸ್ಟ್‌ ಎಂದು ಅರ್ಥ ಮಾಡಿಕೊಂಡೆ' ಎಂದು ಶಾಲಿನಿ ಮಾತನಾಡಿದ್ದಾರೆ.

ಇದ್ದಕ್ಕಿದ್ದಂತೆ ಶೂಟಿಂಗ್ ನಿಲ್ಲಿಸಿಬಿಟ್ಟ ರವಿಚಂದ್ರನ್; ಕೂದಲು ಮುಖ ಮುಚ್ಚುತ್ತಿತ್ತು ಅಂತ ಶಕುನಿ ಬಿಟ್ರಾ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ