ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ ಸಂಭ್ರಮ!

Suvarna News   | Asianet News
Published : Jan 28, 2020, 09:00 AM IST
ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ ಸಂಭ್ರಮ!

ಸಾರಾಂಶ

ಪ್ರತಿ ವರ್ಷದಂತೆ ಈ ವರ್ಷವೂ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಸಮಾರಂಭ ಅದ್ದೂರಿಯಾಗಿ ನಡೆಯಿತು. ಒಟ್ಟು ಹದಿಮೂರು ಮಂದಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. 

ಸಂಸ್ಥೆಯ 43ನೇ ವಾರ್ಷಿಕೋತ್ಸವ ಜತೆಗೆ 19ನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ ಆರ್‌ ಜೈರಾಜ್‌, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಪಿ ಯು, ಹಿರಿಯ ಪತ್ರಕರ್ತರಾದ ಡಾ ವಿಜಯಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಸಾಕ್ಷಿ ಆದರು. ಕಾರ್ಯಕ್ರಮದ ಅಂಗವಾಗಿ ಶ್ರೀಧರ್‌ ಸಾಗರ್‌ ಅವರ ತಂಡದಿಂದ ಸ್ಯಾಕ್ಸೊಫೋನ್‌ ವಾದನ ನಡೆಯಿತು.

ಇನ್ನೂ ನನಸಾಗಿಲ್ಲ ಹಾಜಬ್ಬನ ಪಿಯು ಕಾಲೇಜು ಕನಸು

ರಾಘವೇಂದ್ರ ಚಿತ್ರವಾಣಿ ಹೆಸರಿನಲ್ಲಿ ನೀಡುವ ಎರಡು ಪ್ರಶಸ್ತಿ ಸೇರಿದಂತೆ ಡಾ ರಾಜ್‌ಕುಮಾರ್‌ ಕುಟುಂಬ, ಹಿರಿಯ ನಟಿ ಭಾರತಿ ವಿಷ್ಣುವರ್ದನ್‌, ಜಯಮಾಲ ಹಾಗೂ ಎಚ್‌ ಎಂ ರಾಮಚಂದ್ರ ದಂಪತಿ, ಎಂ ಎಸ್‌ ರಾಮಯ್ಯ ಮೀಡಿಯಾ ಆಂಡ್‌ ಎಂಟರ್‌ಟೈನ್‌ಮೆಂಟ್‌, ಡಾ ಎಚ್‌ ಕೆ ನರಹರಿ ಬಿ ಸುರೇಶ್‌ ಹೀಗೆ ಹಲವರು ಚಿತ್ರರಂಗದ ಬೇರೆ ಬೇರೆ ವಿಭಾಗಗಳು ಹಾಗೂ ಸಿನಿಮಾ ಪತ್ರಿಕೋದ್ಯಮದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತ ಬಂದಿದ್ದಾರೆ.

23ನೇ ವಯಸ್ಸಿನಿಂದಲೂ ಗಿಡ ನೆಡುತ್ತಲೇ ಇದ್ದಾರೆ 72 ವರ್ಷದ ತುಳಸಿಗೌಡ

ನಿರ್ಮಾಪಕ ಕೆ ಪ್ರಭಾಕರ್‌, ಪತ್ರಕರ್ತೆ ತುಂಗಾ ರೇಣುಕಾ, ಗಾಯಕಿ ಪಿ ಸುಶೀಲ, ಎಸ್‌ ಉಮೇಶ್‌, ನಟಿ ಪ್ರಮೀಳಾ ಜೋಷಾಯ್‌, ಸಂಗೀತ ನಿರ್ದೇಶಕ ಸಾಗರ್‌ ಗುರುರಾಜ್‌, ನಟ ಶ್ರೀನಿವಾಸ ಪ್ರಭು, ನಿರ್ದೇಶಕರಾದ ಪಿ ಶೇಷಾದ್ರಿ, ರಮೇಶ್‌ ಇಂದಿರಾ, ರೂಪಾ ರಾವ್‌, ಪೋಷಕ ನಟ ರಮೇಶ್‌ ಭಟ್‌, ಗೀತ ರಚನೆಕಾರ ಕಿನಾಲ್‌ ರಾಜ್‌ ಅವರು 2020ನೇ ಸಾಲಿನ ರಾಘವೇಂದ್ರ ಚಿತ್ರವಾಣಿ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ