'ನಂದ ಲವ್ಸ್ ನಂದಿತ' ನಿರ್ಮಾಪಕನ ಮನೆಯಲ್ಲಿ ಕಳ್ಳತನ ಮಾಡಿದ ಕಾರು ಚಾಲಕ?

Suvarna News   | Asianet News
Published : Jul 30, 2021, 11:05 AM IST
'ನಂದ ಲವ್ಸ್ ನಂದಿತ' ನಿರ್ಮಾಪಕನ ಮನೆಯಲ್ಲಿ ಕಳ್ಳತನ ಮಾಡಿದ ಕಾರು ಚಾಲಕ?

ಸಾರಾಂಶ

ನಕಲಿ ಕೀ ಬಳಸಿ ನಿರ್ಮಾಪಕರ ಮನೆಯಲ್ಲಿ ಕಳ್ಳತನ ಮಾಡಿದ ಕಾರು ಚಾಲಕ. ಇಬ್ಬರೂ ಪೊಲೀಸರ ಬಂಧನದಲ್ಲಿ.  

'ಭಾಗ್ಯದ ಬಳೆಗಾರ','ನಂದ ಲವ್ಸ್ ನಂದಿತ','ಮಹಾಕಾಳಿ' ಸೇರಿದಂತೆ ಹಲವು ಕನ್ನಡ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹಿರಿಯ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಮನೆಯಲ್ಲಿ ಜುಲೈ 10ರಂದು ಕಳ್ಳತನ ನಡೆದಿದೆ. ಇದನ್ನು ನಡೆಸಿದ್ದು ಮನೆ ಕಾರು ಚಾಲಕನೇ ಎಂದು ತಿಳಿದು ಅಚ್ಚರಿಯಾಗಿದೆ. 

ಹೌದು! ರಮೇಶ್ ಕಶ್ಯಪ್ ಅವರು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ (32) ಮಾಲೀಕರ ವಿಶ್ವಾಸ ಗಳಿಸಿ ಮನೆ ವಿಷಯ ತಿಳಿದುಕೊಂಡಿದ್ದಾರೆ. ಮನೆ ಬೀಗ ಪಡೆದುಕೊಂಡು ನಕಲಿ ಕೀ ಮಾಡಿಸಿಕೊಂಡಿದ್ದಾರೆ. ಈ ಬೀಗವನ್ನು ಚಂದ್ರಶೇಖರ್ ತಮ್ಮ ಸ್ನೇಹಿತನಿಗೆ ಕೊಟ್ಟು ಮನೆಯಲ್ಲಿ ಕಳ್ಳತನ ಮಾಡಿಸಿದ್ದಾರೆ. ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. 

ಫೋನ್ ಕಳುವಾದರೆ ಬ್ಯಾಂಕಿಂಗ್ ವಿವರ, ಆನ್‌ಲೈನ್ ವ್ಯಾಲೆಟ್ ಸುರಕ್ಷತೆಗೆ ಹೀಗೆ ಮಾಡಿ..!

ರಮೇಶ್ ಕಶ್ಯಪ್ ಮನೆಯಲ್ಲಿದ್ದ 3 ಲಕ್ಷ ರೂಪಾಯಿ ಹಣ ಹಾಗೂ 710 ಗ್ರಾಂ ಚಿನ್ನ ದೋಚಿದ್ದಾರೆ. ಆನಂತರ ಅಟಿಕಾ ಗೋಲ್ಡ್ ಸಂಸ್ಥೆಯಲ್ಲಿ ಗಿರವಿ ಇಟ್ಟು ಹಣ ಪಡೆದುಕೊಂಡಿದ್ದಾರೆ. ಸಿಸಿಟಿವಿಯಲ್ಲಿ ಪರಿಶೀಲನೆ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಚಂದ್ರಶೇಖರ್ ಮತ್ತು ಅಭಿಷೇಕ್ ಪೊಲೀಸರ ವಿಚಾರಣೆಯಲ್ಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?