ದರ್ಶನ್ ನೆಚ್ಚಿನ ಮೇಕಪ್ ಮ್ಯಾನ್ ಶ್ರೀನಿವಾಸ್ ಇನ್ನಿಲ್ಲ, ಕಂಬನಿ ಮಿಡಿದ ದಾಸ

Published : Jul 13, 2020, 06:15 PM ISTUpdated : Jul 13, 2020, 06:20 PM IST
ದರ್ಶನ್ ನೆಚ್ಚಿನ ಮೇಕಪ್ ಮ್ಯಾನ್ ಶ್ರೀನಿವಾಸ್ ಇನ್ನಿಲ್ಲ, ಕಂಬನಿ ಮಿಡಿದ ದಾಸ

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೆಚ್ಚಿನ ಮೇಕಪ್ ಮ್ಯಾನ್ ಇನ್ನಿಲ್ಲ/ ಹೃದಯಾಘಾತದಿಂದ ಶ್ರೀನಿವಾಸ್ ನಿಧನ/ ಕಂಬನಿ ಮಿಡಿದ ದಾಸ/ ಮದಗಜ ಚಿತ್ರತಂಡದಿಂಲೂ ಸಂತಾಪ

ಬೆಂಗಳೂರು(ಜು. 13) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಚ್ಚಿನ ಮೇಕಪ್ ಮ್ಯಾನ್ ಅಗಲಿಕೆಗೆ ದಾಸ ಕಂಬನಿ ಮಿಡಿದಿದ್ದಾರೆ.

ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್  ಆಗಿ ಕೆಲಸ ನಿರ್ವಹಿಸುತ್ತಿದ್ದ  ಶ್ರೀನಿವಾಸ್(37)  ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಹೃದಯಾಘಾತ ತಡೆಯುವ ಹತ್ತು ಸಂಗತಿಗಳು

ಬಿಡುಗಡೆಗೆ ಸಿದ್ಧವಾಗಿರುವ ರಾಬರ್ಟ್ ಚಿತ್ರಕ್ಕೂ ಕೆಲಸ ಶ್ರೀನಿವಾಸ್ ಕೆಲಸ ಮಾಡಿದ್ದರು. 'ಮದಗಜ' ಚಿತ್ರತಂಡ ಸಹ ಕಂಬನಿ  ಮಿಡಿದಿದೆ.

ಕೊರೋನಾ ನಡುವೆ ಕನ್ನಡ ಚಿತ್ರರಂಗ ಒಂದಾದ ಮೇಲೆ ಒಂದು ಹೊಡೆತ ತಿನ್ನುತ್ತ ಇದೆ. ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಅಗಲಿದ್ದರು, ಅದಾದ ಮೇಲೆ ನಟ ಶ್ರೀನಗರ ಕಿಟ್ಟಿ ಸಹೋದರ ಶಿವಶಂಕರ್  ನಿಧನರಾಗಿದ್ದರು.

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!
ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ: ನಟ ಕಿಶೋರ್‌ ಆಕ್ರೋಶ!