ಚಿರಂಜೀವಿ ಸರ್ಜಾ ಸಮಾಧಿ ಶಂಕುಸ್ಥಾಪನೆ;ಪೂಜೆಯಲ್ಲಿ ಧ್ರುವ ಸರ್ಜಾ ದಂಪತಿ!

Suvarna News   | Asianet News
Published : Nov 29, 2020, 01:17 PM ISTUpdated : Nov 29, 2020, 01:32 PM IST
ಚಿರಂಜೀವಿ ಸರ್ಜಾ ಸಮಾಧಿ ಶಂಕುಸ್ಥಾಪನೆ;ಪೂಜೆಯಲ್ಲಿ ಧ್ರುವ ಸರ್ಜಾ ದಂಪತಿ!

ಸಾರಾಂಶ

ಅಗಲಿದ ಅಣ್ಣನಿಗೆ ಒಂದೊಳ್ಳೆ ಸಮಾಧಿ ಮಾಡಿಸಬೇಕು ಎಂಬುದು ಧ್ರುವ ಸರ್ಜಾ ಆಸೆಯಾಗಿತ್ತು. ಈ ಕಾರಣ ಶಂಕುಸ್ಥಾಪನೆ ನೆರವೇರಿಸಲಾಗಿದೆ.  

ನವೆಂಬರ್ 26ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದು ವರ್ಷದ ಸಂಭ್ರಮದಲ್ಲಿರುವ ನಟ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ  ನವೆಂಬರ್ 28ರಂದು ಚಿರಂಜೀವಿ ಸರ್ಜಾ ಸಮಾಧಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದಾರೆ. ಪೂಜೆ ವಿಧಿವಿಧಾನದಲ್ಲಿ ಸರ್ಜಾ ಕುಟುಂಬ ಭಾಗಿಯಾಗಿತ್ತು.

ಮೇಘನಾ ರಾಜ್‌ ಭೇಟಿ ಮಾಡಲು ಬರೋದಾ ಎಂದ ಪನ್ನಗಾಭರಣ ಪುತ್ರ; ವಿಡಿಯೋ ವೈರಲ್! 

ಕನಕಪುರ ರಸ್ತೆಯ ನೆಲಗೋಳಿ ಗ್ರಾಮದಲ್ಲಿ ಧ್ರುವ ಸರ್ಜಾರ ಫಾರ್ಮ್ ಹೌಸ್‌ನಲ್ಲಿ ಚಿರು ಅಂತ್ಯಕ್ರಿಯೆ ಮಾಡಲಾಗಿತ್ತು. ಧ್ರುವ ಸರ್ಜಾ, ಪ್ರೇರಣಾ, ಅಜ್ಜಿ ಲಕ್ಷ್ಮೀದೇವಿ, ತಾಯಿ ಅಮ್ಮಾಜಿ ಹಾಗೂ ತಂದೆ ಪೂಜೆಯಲ್ಲಿ ಭಾಗಿಯಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗುತ್ತಿವೆ. ಧ್ರುವ ಸರ್ಜಾಗೆ ಅಣ್ಣನ ಮೇಲಿರುವ ಪ್ರೀತಿ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. 

ಜೂನ್‌ 7ರಂದು ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಅಂದಿನಿಂದ ಧ್ರುವ ಅಣ್ಣ ಸ್ಥಾನದಲ್ಲಿ ನಿಂತು, ಕುಟುಂಬದ ಎಲ್ಲಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಅಣ್ಣನ ಆಸೆಯಂತೆ ಅತ್ತಿಗೆ ಮೇಘನಾ ರಾಜ್‌ಗೆ ಸೀಮಂತ ಕಾರ್ಯ ಮಾಡಿಸಿ, ಮಗು ಹುಟ್ಟುವ ಮುನ್ನವೇ ಬೆಳ್ಳಿ ತೊಟ್ಟಿಲನ್ನೂ ಚಿರಿಂಜೀವಿ ಆಸೆಯನ್ನು ಪೂರೈಸುವ ಸಲುವಾಗಿ ಉಡುಗೊರೆಯಾಗಿ ನೀಡಿದ್ದಾರೆ. 

ಮೇಘನಾ ರಾಜ್‌ ಪುತ್ರನಿಗೆ ಕಿಚ್ಚ ಸುದೀಪ್‌ ಕೊಟ್ಟ ಸ್ಪೇಷಲ್ ಗಿಫ್ಟ್! 

ಜೂನಿಯರ್‌ ಹುಟ್ಟಿದ ತಕ್ಷಣವೇ ಮಗುವನ್ನು ಮೊದಲು ಹಿಡಿದು ಮಾತನಾಡಿಸಿದ ಧ್ರುವ ಸರ್ಜಾ ಸಂತಸ ವ್ಯಕ್ತ ಪಡಿಸಿದ್ದರು. ಧ್ರುವ ಸರ್ಜಾ ಅಭಿಮಾನಿಗಳು ಆಸ್ಪತ್ರೆ ಎದುರು ಪಟಾಕಿ ಹೊಡೆದು ಸಂಭ್ರಮಿಸಿದ್ದರು

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್